Hyderabad: ಕಾಲೇಜಿನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕಾಲೇಜಿನ ಕೊಠಡಿಯಲ್ಲೇ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಹೈದರಾಬಾದ್‌ನ ಕಾಲೇಜೊಂದರಲ್ಲಿ 11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ತನ್ನ ತರಗತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

Hyderabad: ಕಾಲೇಜಿನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಪೊಲೀಸ್

Updated on: Mar 01, 2023 | 10:48 AM

ಕಾಲೇಜಿನ ಕೊಠಡಿಯಲ್ಲೇ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಹೈದರಾಬಾದ್‌ನ ಕಾಲೇಜೊಂದರಲ್ಲಿ 11 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ತನ್ನ ತರಗತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಹತ್ತಿರದ ಪಟ್ಟಣದಿಂದ ಬಂದ ಅಪ್ರಾಪ್ತ ಬಾಲಕ ತನ್ನ ತರಗತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ ನೇಣು ಹಾಕಿಕೊಳ್ಳಲು ನೈಲಾನ್ ಹಗ್ಗವನ್ನು ಬಳಸಿದ್ದರು ಆದರೆ ಬಾಲಕನ ಆತ್ಮಹತ್ಯೆಯ ಹಿಂದೆ ಕಾರಣಗಳು ಏನಿದ್ದವು ಎಂಬುದು ಇನ್ನೂ ತಿಳಿದುಬಂದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ರಾತ್ರಿ 10 ಗಂಟೆಯ ಬಳಿಕ ನಾಪತ್ತೆಯಾಗಿದ್ದ.

ಶಾಲಾ ಕಟ್ಟಡದ ಎಲ್ಲಾ ಕೊಠಡಿಗಳಲ್ಲಿ ತೀವ್ರ ಶೋಧ ನಡೆಸಿದಾಗ ಆತನ ಮೃತದೇಹ ಪತ್ತೆಯಾಗಿದೆ. ಇತರ ವಿದ್ಯಾರ್ಥಿಗಳು ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ತೆಲಂಗಾಣದಲ್ಲಿ ಕಳೆದ ಒಂದು ವಾರದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿಯಿಂದ ತತ್ತರಿಸಿ ಹೋಗಿದ್ದು, ಪೋಷಕರು, ಶಿಕ್ಷಕರಲ್ಲಿ ಆತಂಕ ಮೂಡಿದೆ.

ಸ್ನೇಹಿತನೊಬ್ಬ ತನ್ನ ವೈಯಕ್ತಿಕ ಫೋಟೋಗಳನ್ನು ಸೋರಿಕೆ ಮಾಡಿದ ಹಿನ್ನೆಲೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಭಾನುವಾರ ವಾರಂಗಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮತ್ತಷ್ಟು ಓದಿ: ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ

ಕಳೆದ ಡಿಸೆಂಬರ್‌ನಲ್ಲಿ ವಾರಂಗಲ್‌ನಲ್ಲಿ ಹಿರಿಯರ ಕಿರುಕುಳದ ಆರೋಪದ ಮೇರೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಮತ್ತೊಬ್ಬ ಮಹಿಳೆ ಭಾನುವಾರ ಹೈದರಾಬಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಕಳೆದ ಶನಿವಾರ ನಿಜಾಮಾಬಾದ್‌ನ ತನ್ನ ಹಾಸ್ಟೆಲ್ ಕೋಣೆಯಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, 2021 ರಲ್ಲಿ ದೇಶದಲ್ಲಿ 1,64,033 ಜನರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂಬುದು ತಿಳಿದುಬಂದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us