AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಒಂದೇ ಗೋತ್ರದವರನ್ನು ಮದುವೆಯಾಗಿದ್ದಕ್ಕೆ ಬೆದರಿಕೆ, ಬಹಿಷ್ಕಾರ; ಪೊಲೀಸರ ಮೊರೆ ಹೋದ ದಂಪತಿ

ತನ್ನ ಕುಟುಂಬ ಮತ್ತು ಇತರ ಕುಟುಂಬದ ಸದಸ್ಯರು ಅಶ್ಲೀಲ ಪೋಸ್ಟ್ ಗಳನ್ನು ಹಾಕಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಮ್ಮನ್ನು ನಮ್ಮ ಕುಟುಂಬವೇ ಕೊಲೆ ಮಾಡುವ...

ಹೈದರಾಬಾದ್: ಒಂದೇ ಗೋತ್ರದವರನ್ನು ಮದುವೆಯಾಗಿದ್ದಕ್ಕೆ ಬೆದರಿಕೆ, ಬಹಿಷ್ಕಾರ; ಪೊಲೀಸರ ಮೊರೆ ಹೋದ ದಂಪತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 16, 2022 | 1:06 PM

Share

ಹೈದರಾಬಾದ್: ಹೈದರಾಬಾದ್‌ನ  (Hyderabad) ಶಾಹಿನ್ಯಾತ್‌ಗುಂಜ್‌ನಲ್ಲಿ ಒಂದೇ ಗೋತ್ರಕ್ಕೆ ಸೇರಿದ ವಧು- ವರ ಮದುವೆಯಾಗಿದ್ದು ಈ ದಂಪತಿಗೆ ಕುಟುಂಬದವರು  ಬೆದರಿಕೆಯೊಡ್ಡುತ್ತಿದ್ದಾರೆ ಎಂದು  ಪೊಲೀಸ್ ರಕ್ಷಣೆ ಕೋರಿದ್ದಾರೆ. ಈ ದಂಪತಿ ತಮ್ಮ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕಾಗಿ ಬಹಿಷ್ಕಾರ (excommunicated) ಎದುರಿಸುತ್ತಿದ್ದಾರೆ. ಜುಲೈ 2020 ರಲ್ಲಿ ಆರ್ಯ ಸಮಾಜ ದೇವಸ್ಥಾನದಲ್ಲಿ(Arya Samaj temple) ಇವರ ವಿವಾಹ ನಡೆದಿತ್ತು. 20ರ ಹರೆಯದ ಈ ದಂಪತಿ ಒಂದೇ ಜಾತಿ ಮತ್ತು ಒಂದೇ ಗೋತ್ರಕ್ಕೆ ಸೇರಿದವರಾಗಿದ್ದಾರೆ. ಒಂದೇ ಗೋತ್ರಕ್ಕೆ ಸೇರಿದವರಾಗಿರುವ ಕಾರಣ ಹುಡುಗಿಯ ಕುಟುಂಬ ಈ ವಿವಾಹವನ್ನು ಒಪ್ಪಲಿಲ್ಲ. ಇದಾದ ನಂತರ ಅವರ ಸಮುದಾಯವನ್ನು ಬಹಿಷ್ಕರಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ತನ್ನ ಕುಟುಂಬ ಮತ್ತು ಇತರ ಕುಟುಂಬದ ಸದಸ್ಯರು ಅಶ್ಲೀಲ ಪೋಸ್ಟ್ ಗಳನ್ನು ಹಾಕಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಮ್ಮನ್ನು ನಮ್ಮ ಕುಟುಂಬವೇ ಕೊಲೆ ಮಾಡುವ ಬೆದರಿಕೆಯೊಡ್ಡುತ್ತಿದೆ ಎಂದುತಿಳಿದ ಕೂಡಲೇ ನಾವು ಕಾನೂನಿನ ಮೊರೆ ಹೋಗಲು ಪೊಲೀಸರ ಬಳಿ ಬಂದೆವು ಎಂದು ಮಹಿಳೆ ಹೇಳಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ. “ನಾವು ಸಮುದಾಯದ ಸದಸ್ಯರು ಮತ್ತು ಕುಟುಂಬದವರನ್ನು ಕೌನ್ಸೆಲಿಂಗ್‌ಗೆ ಕರೆದಿದ್ದೇವೆ. ನಾವು ಅವರಿಗೆ ಎಚ್ಚರಿಕೆ ನೀಡಿದ್ದೇವೆ” ಎಂದು ಅಫ್ಜಲ್‌ಗುಂಜ್ ಇನ್ಸ್‌ಪೆಕ್ಟರ್ ರವೀಂದರ್ ರೆಡ್ಡಿ ಉಲ್ಲೇಖಿಸಿದ್ದಾರೆ.

ಮೇ ತಿಂಗಳಲ್ಲಿ ಹೈದರಾಬಾದ್‌ನಲ್ಲಿ ನಡೆದ ಮರ್ಯಾದಾ ಹತ್ಯೆಯಲ್ಲಿ 21 ವರ್ಷದ ಯುವಕ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕಾಗಿ ಚಾಕುವಿನಿಂದ ಇರಿದು ಕೊಲ್ಲಲಾಯಿತು. ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು.

ಇದನ್ನೂ ಓದಿ
Image
ಕುಡಿದ ಮತ್ತಿನಲ್ಲಿ ಪೊಲೀಸ್​ ವಾಹನವೇರಿ ಕುಡುಕನ ಜಾಲಿ ರೈಡ್: ಇಲ್ಲಿದೆ ವೈರಲ್ ವಿಡಿಯೋ ​
Image
Hyderabad Gang Rape ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎಐಎಂಐಎಂ ಶಾಸಕನ ಪುತ್ರ ವಶಕ್ಕೆ
Image
ಹೈದರಾಬಾದ್: ಕಾರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ನಡೆದ ವಿಡಿಯೋ ಕ್ಲಿಪ್ಪಿಂಗ್ ಬಯಲು ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:04 pm, Thu, 16 June 22

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ