AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಒಂದೇ ಗೋತ್ರದವರನ್ನು ಮದುವೆಯಾಗಿದ್ದಕ್ಕೆ ಬೆದರಿಕೆ, ಬಹಿಷ್ಕಾರ; ಪೊಲೀಸರ ಮೊರೆ ಹೋದ ದಂಪತಿ

ತನ್ನ ಕುಟುಂಬ ಮತ್ತು ಇತರ ಕುಟುಂಬದ ಸದಸ್ಯರು ಅಶ್ಲೀಲ ಪೋಸ್ಟ್ ಗಳನ್ನು ಹಾಕಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಮ್ಮನ್ನು ನಮ್ಮ ಕುಟುಂಬವೇ ಕೊಲೆ ಮಾಡುವ...

ಹೈದರಾಬಾದ್: ಒಂದೇ ಗೋತ್ರದವರನ್ನು ಮದುವೆಯಾಗಿದ್ದಕ್ಕೆ ಬೆದರಿಕೆ, ಬಹಿಷ್ಕಾರ; ಪೊಲೀಸರ ಮೊರೆ ಹೋದ ದಂಪತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 16, 2022 | 1:06 PM

Share

ಹೈದರಾಬಾದ್: ಹೈದರಾಬಾದ್‌ನ  (Hyderabad) ಶಾಹಿನ್ಯಾತ್‌ಗುಂಜ್‌ನಲ್ಲಿ ಒಂದೇ ಗೋತ್ರಕ್ಕೆ ಸೇರಿದ ವಧು- ವರ ಮದುವೆಯಾಗಿದ್ದು ಈ ದಂಪತಿಗೆ ಕುಟುಂಬದವರು  ಬೆದರಿಕೆಯೊಡ್ಡುತ್ತಿದ್ದಾರೆ ಎಂದು  ಪೊಲೀಸ್ ರಕ್ಷಣೆ ಕೋರಿದ್ದಾರೆ. ಈ ದಂಪತಿ ತಮ್ಮ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕಾಗಿ ಬಹಿಷ್ಕಾರ (excommunicated) ಎದುರಿಸುತ್ತಿದ್ದಾರೆ. ಜುಲೈ 2020 ರಲ್ಲಿ ಆರ್ಯ ಸಮಾಜ ದೇವಸ್ಥಾನದಲ್ಲಿ(Arya Samaj temple) ಇವರ ವಿವಾಹ ನಡೆದಿತ್ತು. 20ರ ಹರೆಯದ ಈ ದಂಪತಿ ಒಂದೇ ಜಾತಿ ಮತ್ತು ಒಂದೇ ಗೋತ್ರಕ್ಕೆ ಸೇರಿದವರಾಗಿದ್ದಾರೆ. ಒಂದೇ ಗೋತ್ರಕ್ಕೆ ಸೇರಿದವರಾಗಿರುವ ಕಾರಣ ಹುಡುಗಿಯ ಕುಟುಂಬ ಈ ವಿವಾಹವನ್ನು ಒಪ್ಪಲಿಲ್ಲ. ಇದಾದ ನಂತರ ಅವರ ಸಮುದಾಯವನ್ನು ಬಹಿಷ್ಕರಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ತನ್ನ ಕುಟುಂಬ ಮತ್ತು ಇತರ ಕುಟುಂಬದ ಸದಸ್ಯರು ಅಶ್ಲೀಲ ಪೋಸ್ಟ್ ಗಳನ್ನು ಹಾಕಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಮ್ಮನ್ನು ನಮ್ಮ ಕುಟುಂಬವೇ ಕೊಲೆ ಮಾಡುವ ಬೆದರಿಕೆಯೊಡ್ಡುತ್ತಿದೆ ಎಂದುತಿಳಿದ ಕೂಡಲೇ ನಾವು ಕಾನೂನಿನ ಮೊರೆ ಹೋಗಲು ಪೊಲೀಸರ ಬಳಿ ಬಂದೆವು ಎಂದು ಮಹಿಳೆ ಹೇಳಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ. “ನಾವು ಸಮುದಾಯದ ಸದಸ್ಯರು ಮತ್ತು ಕುಟುಂಬದವರನ್ನು ಕೌನ್ಸೆಲಿಂಗ್‌ಗೆ ಕರೆದಿದ್ದೇವೆ. ನಾವು ಅವರಿಗೆ ಎಚ್ಚರಿಕೆ ನೀಡಿದ್ದೇವೆ” ಎಂದು ಅಫ್ಜಲ್‌ಗುಂಜ್ ಇನ್ಸ್‌ಪೆಕ್ಟರ್ ರವೀಂದರ್ ರೆಡ್ಡಿ ಉಲ್ಲೇಖಿಸಿದ್ದಾರೆ.

ಮೇ ತಿಂಗಳಲ್ಲಿ ಹೈದರಾಬಾದ್‌ನಲ್ಲಿ ನಡೆದ ಮರ್ಯಾದಾ ಹತ್ಯೆಯಲ್ಲಿ 21 ವರ್ಷದ ಯುವಕ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕಾಗಿ ಚಾಕುವಿನಿಂದ ಇರಿದು ಕೊಲ್ಲಲಾಯಿತು. ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು.

ಇದನ್ನೂ ಓದಿ
Image
ಕುಡಿದ ಮತ್ತಿನಲ್ಲಿ ಪೊಲೀಸ್​ ವಾಹನವೇರಿ ಕುಡುಕನ ಜಾಲಿ ರೈಡ್: ಇಲ್ಲಿದೆ ವೈರಲ್ ವಿಡಿಯೋ ​
Image
Hyderabad Gang Rape ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎಐಎಂಐಎಂ ಶಾಸಕನ ಪುತ್ರ ವಶಕ್ಕೆ
Image
ಹೈದರಾಬಾದ್: ಕಾರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ನಡೆದ ವಿಡಿಯೋ ಕ್ಲಿಪ್ಪಿಂಗ್ ಬಯಲು ಮಾಡಿದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:04 pm, Thu, 16 June 22

ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!