AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು. ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ […]

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ
ಸಾಧು ಶ್ರೀನಾಥ್​
|

Updated on: Dec 07, 2019 | 7:18 AM

Share

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು.

ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ ಕೊಟ್ಟಿದೆ. ಅತ್ಯಾಚಾರವೆಸಗಿದ ಸ್ಥಳದಲ್ಲೇ ಕಾಮಕ್ರಿಮಿಗಳಿಗೆ ನರಕ ತೋರಿಸಿದೆ. ಖಾಕಿ ಬುಲೆಟ್​ಗೆ ಮೊಹಮ್ಮದ್ ಆರಿಫ್, ಚೆನ್ನಕೇಶವುಲು, ಜೊಲ್ಲು ಶಿವ ಮತ್ತು ಜೊಲ್ಲು ನವೀನ್ ಎದೆ ಚೂರು ಚೂರಾಗಿತ್ತು.

ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ: ನಿನ್ನೆ ತೆಲಂಗಾಣ ಹೈಕೋರ್ಟ್, ಎನ್​ಕೌಂಟರ್ ಪ್ರಕರಣದ ವಿಚಾರಣೆ ನಡೆಸ್ತು. ಆರೋಪಿಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ ಅಂತಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸೋಮವಾರ ರಾತ್ರಿ 8 ಗಂಟೆ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ ಅಂತಾ ಹೇಳಿದೆ.

ಅಲ್ದೆ, ಆರೋಪಿಗಳ ಮರಣೋತ್ತರ ಪರೀಕ್ಷೆ ನಡೆಸಿರೋ ವಿಡಿಯೋವನ್ನ ಇಂದು ಸಂಜೆಯೊಳಗಾಗಿ ಹಸ್ತಾಂತರ ಮಾಡುವಂತೆ ಸೂಚಿಸಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸೋದಾಗಿ ಹೈಕೋರ್ಟ್​ ಹೇಳಿದೆ. ಸದ್ಯ ಮರಣೋತ್ತರ ಪರೀಕ್ಷೆ ನಡೆಸಿದ ಮಹಬೂಬ್ ನಗರದ ಸರ್ಕಾರಿ ಆಸ್ಪತ್ರೆಗೆ ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಮೃತದೇಹಗಳನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ.

Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ