AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು. ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ […]

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ
ಸಾಧು ಶ್ರೀನಾಥ್​
|

Updated on: Dec 07, 2019 | 7:18 AM

Share

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು.

ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ ಕೊಟ್ಟಿದೆ. ಅತ್ಯಾಚಾರವೆಸಗಿದ ಸ್ಥಳದಲ್ಲೇ ಕಾಮಕ್ರಿಮಿಗಳಿಗೆ ನರಕ ತೋರಿಸಿದೆ. ಖಾಕಿ ಬುಲೆಟ್​ಗೆ ಮೊಹಮ್ಮದ್ ಆರಿಫ್, ಚೆನ್ನಕೇಶವುಲು, ಜೊಲ್ಲು ಶಿವ ಮತ್ತು ಜೊಲ್ಲು ನವೀನ್ ಎದೆ ಚೂರು ಚೂರಾಗಿತ್ತು.

ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ: ನಿನ್ನೆ ತೆಲಂಗಾಣ ಹೈಕೋರ್ಟ್, ಎನ್​ಕೌಂಟರ್ ಪ್ರಕರಣದ ವಿಚಾರಣೆ ನಡೆಸ್ತು. ಆರೋಪಿಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ ಅಂತಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸೋಮವಾರ ರಾತ್ರಿ 8 ಗಂಟೆ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ ಅಂತಾ ಹೇಳಿದೆ.

ಅಲ್ದೆ, ಆರೋಪಿಗಳ ಮರಣೋತ್ತರ ಪರೀಕ್ಷೆ ನಡೆಸಿರೋ ವಿಡಿಯೋವನ್ನ ಇಂದು ಸಂಜೆಯೊಳಗಾಗಿ ಹಸ್ತಾಂತರ ಮಾಡುವಂತೆ ಸೂಚಿಸಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸೋದಾಗಿ ಹೈಕೋರ್ಟ್​ ಹೇಳಿದೆ. ಸದ್ಯ ಮರಣೋತ್ತರ ಪರೀಕ್ಷೆ ನಡೆಸಿದ ಮಹಬೂಬ್ ನಗರದ ಸರ್ಕಾರಿ ಆಸ್ಪತ್ರೆಗೆ ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಮೃತದೇಹಗಳನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ