AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು. ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ […]

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 07, 2019 | 7:18 AM

Share

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು.

ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ ಕೊಟ್ಟಿದೆ. ಅತ್ಯಾಚಾರವೆಸಗಿದ ಸ್ಥಳದಲ್ಲೇ ಕಾಮಕ್ರಿಮಿಗಳಿಗೆ ನರಕ ತೋರಿಸಿದೆ. ಖಾಕಿ ಬುಲೆಟ್​ಗೆ ಮೊಹಮ್ಮದ್ ಆರಿಫ್, ಚೆನ್ನಕೇಶವುಲು, ಜೊಲ್ಲು ಶಿವ ಮತ್ತು ಜೊಲ್ಲು ನವೀನ್ ಎದೆ ಚೂರು ಚೂರಾಗಿತ್ತು.

ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ: ನಿನ್ನೆ ತೆಲಂಗಾಣ ಹೈಕೋರ್ಟ್, ಎನ್​ಕೌಂಟರ್ ಪ್ರಕರಣದ ವಿಚಾರಣೆ ನಡೆಸ್ತು. ಆರೋಪಿಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ ಅಂತಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸೋಮವಾರ ರಾತ್ರಿ 8 ಗಂಟೆ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ ಅಂತಾ ಹೇಳಿದೆ.

ಅಲ್ದೆ, ಆರೋಪಿಗಳ ಮರಣೋತ್ತರ ಪರೀಕ್ಷೆ ನಡೆಸಿರೋ ವಿಡಿಯೋವನ್ನ ಇಂದು ಸಂಜೆಯೊಳಗಾಗಿ ಹಸ್ತಾಂತರ ಮಾಡುವಂತೆ ಸೂಚಿಸಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸೋದಾಗಿ ಹೈಕೋರ್ಟ್​ ಹೇಳಿದೆ. ಸದ್ಯ ಮರಣೋತ್ತರ ಪರೀಕ್ಷೆ ನಡೆಸಿದ ಮಹಬೂಬ್ ನಗರದ ಸರ್ಕಾರಿ ಆಸ್ಪತ್ರೆಗೆ ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಮೃತದೇಹಗಳನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!