ಹೈದರಾಬಾದ್​ನ ಬಜಾರ್​ಘಾಟ್​ನಲ್ಲಿ ಅಗ್ನಿ ಅವಘಡ, 6 ಕಾರ್ಮಿಕರು ಸಜೀವದಹನ

ಹೈದರಾಬಾದ್​ ಬಜಾರ್​ಘಾಟ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಕಾರ್ಮಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ರಾಸಾಯನಿಕ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ, 4 ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಮೂರು ಅಗ್ನಿಶಾಮಕ ಯಂತ್ರಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ತಕ್ಷಣ ಜಿಎಚ್​ಎಂಸಿ ಅಧಿಕಾರಿಗಳು ಪರಿಹಾರ ಕ್ರಮ ಕೈಗೊಂಡಿದ್ದಾರೆ. ಕೆಲ ಕಾರ್ಮಿಕರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 3 ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರುತ್ತಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿಯಲ್ಲಿ ಸಿಲುಕಿದ್ದ 15 ಮಂದಿಯನ್ನು […]

ಹೈದರಾಬಾದ್​ನ ಬಜಾರ್​ಘಾಟ್​ನಲ್ಲಿ ಅಗ್ನಿ ಅವಘಡ, 6 ಕಾರ್ಮಿಕರು ಸಜೀವದಹನ
ಬೆಂಕಿ-ಸಾಂದರ್ಭಿಕ ಚಿತ್ರ
Image Credit source: Etv Bharat

Updated on: Nov 13, 2023 | 11:04 AM

ಹೈದರಾಬಾದ್​ ಬಜಾರ್​ಘಾಟ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಕಾರ್ಮಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ರಾಸಾಯನಿಕ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ, 4 ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಮೂರು ಅಗ್ನಿಶಾಮಕ ಯಂತ್ರಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ತಕ್ಷಣ ಜಿಎಚ್​ಎಂಸಿ ಅಧಿಕಾರಿಗಳು ಪರಿಹಾರ ಕ್ರಮ ಕೈಗೊಂಡಿದ್ದಾರೆ.

ಕೆಲ ಕಾರ್ಮಿಕರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 3 ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರುತ್ತಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿಯಲ್ಲಿ ಸಿಲುಕಿದ್ದ 15 ಮಂದಿಯನ್ನು ರಕ್ಷಿಸಿದ್ದಾರೆ.

 

 

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 10:50 am, Mon, 13 November 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us