AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಹತ್ತಿದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌.. ಕೃತ್ಯ ಎಸಗಿ ರಸ್ತೆ ಬದಿ ಬೆತ್ತಲೆ ಬಿಸಾಡಿ ಹೋದ ಕೀಚಕರು

Hyderabad Gang Rape: ಮುತ್ತಿನ ನಗರಿ ಹೈದರಾಬಾದ್‌ ಮತ್ತೊಮ್ಮೆ ಬೆಚ್ಚಿಬಿದ್ದಿದೆ. ಕಾಲೇಜು ಮುಗಿಸಿ ಮನೆಗೆ ಹೊರಟಿದ್ದ ವಿದ್ಯಾರ್ಥಿನಿ ಮೇಲೆರಗಿದ ಕಾಮುಕರ ಪಡೆ, ಅಬಲೆಯನ್ನ ಹಿಂಸಿಸಿದೆ. ಕಾಮುಕರ ಕೈಯಲ್ಲಿ ನರಳಿರುವ ಯುವತಿ, ಈಗ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ. ಹೀಗೆ ಪೈಶಾಚಿಕ ಕೃತ್ಯ ನಡೆಸಿರುವ ಕ್ರಿಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಆಟೋ ಹತ್ತಿದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌.. ಕೃತ್ಯ ಎಸಗಿ ರಸ್ತೆ ಬದಿ ಬೆತ್ತಲೆ ಬಿಸಾಡಿ ಹೋದ ಕೀಚಕರು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Feb 11, 2021 | 9:12 AM

Share

ಹೈದರಾಬಾದ್‌ನ ದಿಶಾ ಗ್ಯಾಂಗ್‌ ರೇಪ್‌ ಪ್ರಕರಣ ದೇಶಾದ್ಯಂತ ಸದ್ದು ಮಾಡಿತ್ತು. ಕಾಮುಕರನ್ನ ಎನ್‌ಕೌಂಟರ್‌ ಮಾಡಲಾಗಿತ್ತು. ಇದು ಒಳ್ಳೆಯ ಪಾಠವಾಗುತ್ತೆ ಅಂತಲೇ ಹೇಳಲಾಗಿತ್ತು. ಆದ್ರೆ, ದಿಶಾ ಪ್ರಕರಣ ಮರೆಯಾಗುವ ಮುನ್ನವೇ ಹೈದರಾಬಾದ್​ನಲ್ಲಿ ಕಾಮುಕರು ಮತ್ತೊಮ್ಮೆ ಪೈಶಾಚಿಕ ಕೃತ್ಯ ನಡೆಸಿದ್ದಾರೆ. ಘಟ್ಕೇಸರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ.ಮೆಡ್ಚಲ್‌ನ ಕಾಲೇಜು ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜು ಮುಗಿಸಿ ಕಾಲೇಜ್‌ ಬಸ್‌ನಲ್ಲೇ ಬಂದಿಳಿದಿದ್ದಳು. ಮನೆಗೆ ತೆರಳಲು ಆಟೋ ಹತ್ತಿದ್ಳು. ಆದ್ರೆ, ಮನೆಗೆ ಕರೆದೊಯ್ಯಬೇಕಿದ್ದ ಆಟೋ ಚಾಲಕ ವಿದ್ಯಾರ್ಥಿನಿಯನ್ನು ಓಮ್ನಿಗೆ ಶಿಫ್ಟ್ ಮಾಡಿ ತನ್ನ ಮೂವರು ಸಂಗಡಿಗರ ಜೊತೆಗೆ ಯಾನಂಪೇಟೆಯ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಪಾಪಕೃತ್ಯ ನಡೆಸಿದ್ದಾರೆ.

ಈ ವೇಳೆ ವಿದ್ಯಾರ್ಥಿನಿಯನ್ನು ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ನಿರ್ಜನ ಪ್ರದೇಶದಲ್ಲೇ ಆಕೆಯನ್ನ ಬೆತ್ತಲೆಯಾಗಿ ಬಿಟ್ಟು ಪರಾರಿಯಾಗಿದ್ದಾರೆ. ಅಲ್ಲಿಂದ ನರಳುತ್ತಾ ಸ್ಥಳೀಯರ ನೆರವು ಪಡೆದ ಯುವತಿ, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ವಿದ್ಯಾರ್ಥಿನಿ ಕೋಮಾ ಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಒಟ್ನಲ್ಲಿ ಕೇಳುವುದಕ್ಕೆ ಇಷ್ಟು ಭಯಾನಕವಾಗಿರುವ ಈ ಘಟನೆ ಹೈದರಾಬಾದ್ ನಗರವನ್ನೇ ಬೆಚ್ಚಿಬೀಳಿಸಿದೆ. ಪೊಲೀಸ್ರು ಕೂಡ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು, ಕಾಮುಕ ಕ್ರಿಮಿಗಳ ಹೆಡೆಮುರಿ ಕಟ್ಟಲು ಸಜ್ಜಾಗಿದ್ದಾರೆ. ಪೊಲೀಸರ 10 ತಂಡ ರಚಿಸಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹತ್ರಾಸ್​ ಗ್ಯಾಂಗ್​ರೇಪ್: ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್

Published On - 7:52 am, Thu, 11 February 21

Follow Us
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?