AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad Gangrape: ವಾರದ ಬಳಿಕ ಅತ್ಯಾಚಾರಕ್ಕೆ ಬಳಸಲಾಗಿದ್ದ ಕಾರು ಪತ್ತೆ

Hyderabad Gangrape: ಇಲ್ಲಿನ ಜಿಬಿಲಿ ಹಿಲ್ಸ್​ನಲ್ಲಿ ನಡೆದ 17 ವರ್ಷ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಬಳಿಕ ಕಾರನ್ನು ಪತ್ತೆ ಮಾಡಲಾಗಿದೆ.

Hyderabad Gangrape: ವಾರದ ಬಳಿಕ ಅತ್ಯಾಚಾರಕ್ಕೆ ಬಳಸಲಾಗಿದ್ದ ಕಾರು ಪತ್ತೆ
CarImage Credit source: NDTV
TV9 Web
| Edited By: |

Updated on:Jun 06, 2022 | 1:00 PM

Share

ಹೈದರಾಬಾದ್: ಇಲ್ಲಿನ ಜಿಬಿಲಿ ಹಿಲ್ಸ್​ನಲ್ಲಿ ನಡೆದ 17 ವರ್ಷ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಬಳಿಕ ಕಾರನ್ನು ಪತ್ತೆ ಮಾಡಲಾಗಿದೆ. ಐವರು ಆರೋಪಿಗಳು ಈ ಕಾರಿನಲ್ಲೇ ಅತ್ಯಾಚಾರ ಎಸಗಿದ್ದರು ಎಂದು ಹೇಳಲಾಗಿದೆ. ಫಾರ್ಮ್​ಹೌಸ್ ಒಂದರಲ್ಲಿ ಈ ಕಾರು ಪತ್ತೆಯಾಗಿದೆ. ಅತ್ಯಾಚಾರದ ಬಳಿಕ ಈ ಕಾರ್​ ಅನ್ನು ಸ್ವಚ್ಛಗೊಳಿಸಲಾಗಿದೆ ಎನ್ನುವ ಅನುಮಾನ ಮೂಡಿದೆ.

ರಾಜಕಾರಣಿಯೊಬ್ಬರಿಗೆ ಸೇರಿದ ಕಾರು ಇದಾಗಿದ್ದು, ಇತ್ತೀಚೆಗಷ್ಟೇ ಖರೀದಿಸಲಾಗಿದ್ದು, ಇನ್ನೂ ನೋಂದಣಿಯೂ ಆಗಿಲ್ಲವೆಂಬುದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್​ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಮಗ , ರಾಜಕಾರಿ ಮಗ ಸೇರಿದಂತೆ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದ್ದು. ಐದನೇ ಆರೋಪಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ನಡೆದಿದ್ದೇನು?

ಜುಬಿಲಿ ಹಿಲ್ಸ್​​ನಲ್ಲಿ ಮೇ 31ರಂದು ಪಬ್​​ಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಲಾಗಿತ್ತು. ಐವರು ಆರೋಪಿಗಳು ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಈ ಕೃತ್ಯದಲ್ಲಿ ಮೂವರು ಅಪ್ರಾಪ್ತ ಬಾಲಕರು ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಐವರು ಆರೋಪಿಗಳ ಪೈಕಿ ಸಾದುದ್ದೀನ್​ ಮಲಿಕ್​ ಮತ್ತು ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು. ಉಮರ್​ಖಾನ್​ ಹಾಗೂ ಮತ್ತಿಬ್ಬರು ಅಪ್ತಾಪ್ತರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್​​ ನಾಯಕ ಭಟ್ಟಿ ಕೂಡ ಟಿಆರ್​​ಎಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಬ್​​ಗಳು ನಿಯಮ ಉಲ್ಲಂಘಿಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ನಿರ್ಲಕ್ಷ್ಯದಿಂದಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಟೀಕೆ: ಈ ಅತ್ಯಾಚಾರ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಕಾಂಗ್ರೆಸ್​, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ವಾಗ್ದಾಳಿ ನಡೆಸಿವೆ. ಈ ಕೃತ್ಯಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ ಒತ್ತಾಯಿಸಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Mon, 6 June 22

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ