AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಚುರುಕಿನ ಮತದಾನ

ನಾಲ್ಕು ಜಿಲ್ಲೆಗಳ 150 ವಿಭಾಗಗಳಿಂದ ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಒಟ್ಟಾರೆ 52,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹೈದರಾಬಾದ್ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಚುರುಕಿನ ಮತದಾನ
ಮತಗಟ್ಟೆಯೊಂದರ ಬಳಿ ಪೊಲೀಸ್​ ಸಿಬ್ಬಂದಿ..
Follow us
Lakshmi Hegde
|

Updated on:Dec 01, 2020 | 12:00 PM

ಹೈದರಾಬಾದ್: ಗ್ರೇಟರ್​ ಹೈದರಾಬಾದ್ ಮುನ್ಸಿಪಲ್​ ಕಾರ್ಪೋರೇಶನ್ (GHMC) ಚುನಾವಣೆ ಇಂದು (ಡಿ.1) ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದೆ. ನಾಲ್ಕು ಜಿಲ್ಲೆಗಳ 150 ವಿಭಾಗಗಳಿಂದ ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಒಟ್ಟಾರೆ 52,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 48,000 ಮತಗಟ್ಟೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಂದಿನ ಚುನಾವಣೆಯ ವೈಶಿಷ್ಟ್ಯವೆಂದರೆ ಎಲ್ಲಿಯೂ ಇವಿಎಂ ಬಳಸುತ್ತಿಲ್ಲ. ಬದಲಿಗೆ ಹಳೇ ಕಾಲದ ಮತಪತ್ರದ ಮೂಲಕ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯ ವೇಳೆಗೆ ಶೇ 3.96ರಷ್ಟು  ಮತದಾನ ಆಗಿತ್ತು. ಹಿರಿಯ ನಾಗರಿಕರೂ ಆಗಮಿಸಿ ಮತ ಚಲಾಯಿಸುತ್ತಿರುವುದು ವಿಶೇಷವಾಗಿದೆ. ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಆಗಮಿಸಿ ಮತದಾನ ಮಾಡಿದ್ದಾರೆ. ಹಾಗೇ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ, ತೆಲಂಗಾಣದ ಟಿಆರ್​ಎಸ್​ ಮುಖಂಡ, ಸಚಿವ ಕೆ.ಟಿ.ರಾಮರಾವ್, ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಜಿ.ಕಿಶನ್​ ರೆಡ್ಡ ​ಇತರರು ಈಗಾಗಲೇ ಮತ ಚಲಾಯಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಅಂಜನಿ ಕುಮಾರ್​ ಮಾತನಾಡಿ, ಮತದಾನ ನಡೆಯುತ್ತಿರುವ ಎಲ್ಲ ಪ್ರದೇಶಗಳಲ್ಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ರಕ್ಷಣಾ ಪಡೆಗಳ ಕಾವಲು ಇದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಕಾವಲು ನಿಯೋಜಿಸಲಾಗಿದೆ. ಹಾಗೇ ತುರ್ತು ತಂಡವೂ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: GHMC ಚುನಾವಣೆ: ಬಿಜೆಪಿಯ ಭಾಗ್ಯ ನಗರ vs ಟಿಆರ್​ಎಸ್​-ಎಐಎಂ​ಐಎಂ ನ ಹೈದರಾಬಾದ್ ನಡುವೆ ಯುದ್ಧ

Published On - 11:52 am, Tue, 1 December 20

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ