AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಮಾನಗಳಷ್ಟು ಹಳೆಯದಾದ ಕಾಚಿಗುಡ ರೈಲು ನಿಲ್ದಾಣಕ್ಕೆ ಶಾಶ್ವತ ವಿದ್ಯುತ್​ ದೀಪಾಲಂಕಾರ: ಸೋಮವಾರ ಲೋಕಾರ್ಪಣೆ

ಶತಮಾನಗಳಷ್ಟು ಹಳೆಯದಾದ ಕಾಚಿಗುಡ ರೈಲು ನಿಲ್ದಾಣಕ್ಕೆ 2.3 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಜೂನ್ 9 ರಂದು ಕೇಂದ್ರ ಸಚಿವರು ಲೋಕಾರ್ಪಣೆಗೊಳಿಸಲಿದ್ದಾರೆ. ಈ ದೀಪಗಳು ನಿಲ್ದಾಣದ ಸೌಂದರ್ಯವನ್ನು ಹೆಚ್ಚಿಸಿ, ಅದರ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುತ್ತವೆ. 785 ಲೈಟಿಂಗ್ ಫಿಕ್ಸ್ಚರ್‌ಗಳು ನಿಲ್ದಾಣದ ಭವ್ಯವಾದ ವಾಸ್ತುಶಿಲ್ಪವನ್ನು ಪ್ರದರ್ಶಿಸುತ್ತವೆ.

ಶತಮಾನಗಳಷ್ಟು ಹಳೆಯದಾದ ಕಾಚಿಗುಡ ರೈಲು ನಿಲ್ದಾಣಕ್ಕೆ ಶಾಶ್ವತ ವಿದ್ಯುತ್​ ದೀಪಾಲಂಕಾರ: ಸೋಮವಾರ ಲೋಕಾರ್ಪಣೆ
ಕಾಚೆಗುಡ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on:Jun 08, 2025 | 9:14 PM

Share

ಹೈದರಾಬಾದ್​, ಜೂನ್​ 08: ಶತಮಾನಗಳಷ್ಟು ಹಳೆಯದಾದ ಕಾಚಿಗುಡ ರೈಲು ನಿಲ್ದಾಣದ ಮುಂಭಾಗವು ಅತ್ಯಾಧುನಿಕ ಶಾಶ್ವತ ವಿದ್ಯುತ್​ ದೀಪಾಲಂಕಾರದಿಂದ (Kacheguda Facade Lighting) ಶೃಂಗಾರಗೊಂಡಿದೆ. ಈ ವಿದ್ಯುತ್​ ದೀಪಾಲಂಕಾರವನ್ನು ಸೋಮವಾರ (ಜೂ.9) ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್​ ರೆಡ್ಡಿ (Kishn Reddy) ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಐತಿಹಾಸಿಕ ಕಾಚಿಗುಡ ರೈಲು ನಿಲ್ದಾಣಕ್ಕೆ 2.3 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯುತ್​ ದೀಪಗಳನ್ನು ಹಾಕಲಾಗಿದೆ. ಈ ವಿದ್ಯುತ್​ ದೀಪಗಳು ರೈಲು ನಿಲ್ದಾಣ ಮುಂಭಾಗದ ಸೌಂದರ್ಯವನ್ನು ಹೆಚ್ಚಿಸಿವೆ. ಈ ದೀಪಾಲಂಕಾರದಿಂದ ಸಾರ್ವಜನಿಕರು ತಮ್ಮ ಸಾಂಸ್ಕೃತಿಕ ಮತ್ತು ಐತಿಹಾಸಿಕ ಕಟ್ಟಡದ ಮಹತ್ವದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಲಿದ್ದಾರೆ.

ಕಾಚಿಗುಡ ರೈಲು ನಿಲ್ದಾಣವನ್ನು 1916ರಲ್ಲಿ ನಿಜಾಮರ ಕಾಲದಲ್ಲಿ ಗೋಥಿಕ್ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾಗಿದೆ. ಇಂತಹ ಐತಿಹಾಸಿಕ ರೈಲು ನಿಲ್ದಾಣಕ್ಕೆ 785 ಲೈಟಿಂಗ್​ ಫಿಕ್ಸ್ಚರ್ಸ್​ಗಳಿಂದ ಅಲಂಕಾರ ಮಾಡಲಾಗಿದೆ. ಈ ವಿದ್ಯುತ್​ ದೀಪಗಳು ನಿಲ್ದಾಣದ ಭವ್ಯ ವಾಸ್ತುಶಿಲ್ಪ ಮತ್ತು ಪರಂಪರೆಯ ಆಕರ್ಷಣೆಯನ್ನು ಹೆಚ್ಚಿಸುತ್ತವೆ.

ಕಾಚಿಗುಡ ರೈಲು ನಿಲ್ದಾಣ ನಗರದ ಮಧ್ಯ ಭಾಗದಲ್ಲಿದೆ. ಅಲ್ಲದೆ, ಹೈದರಾಬಾದ್​ನ ಪ್ರಮುಖ ಟರ್ಮಿನಲ್​ಗಳಲ್ಲಿ ಒಂದಾಗಿದ್ದು, ನಿತ್ಯ ಸಾವಿರಾರು ಮಂದಿ ಪ್ರಯಾಣಿಕರು ಬಂದು ಹೋಗುತ್ತಾರೆ. ವಿದ್ಯುತ್ ದೀಪಾಲಂಕಾರದಿಂದ ಈ ರೈಲು ನಿಲ್ದಾಣದ ಐತಿಹಾಸಿಕ ಮಹತ್ವ ಬಗ್ಗೆ ಜನರು ತಿಳಿದುಕೊಳ್ಳಲು ಮುಂದಾಗುತ್ತಾರೆ ಮತ್ತು ಹೆಮ್ಮೆ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ
Image
ದಸರಾ ಹಬ್ಬಕ್ಕೆ ಕೊಮುರವೆಲ್ಲಿ ರೈಲು ನಿಲ್ದಾಣ ಉದ್ಘಾಟನೆ;ಸಚಿವ ಕಿಶನ್ ರೆಡ್ಡಿ
Image
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
Image
ನೈಋತ್ಯ ರೈಲ್ವೆ ವಲಯದ 15 ನಿಲ್ದಾಣಗಳಿಗೆ ಸ್ಮಾರ್ಟ್​ ಟಚ್​
Image
ಅಭಿವೃದ್ಧಿ ಮಾಡಿದ ಸ್ಥಳದಲ್ಲೇ ಮತ್ತೊಮ್ಮೆ ಕಾಮಗಾರಿ; ಅಮೃತ್ ನಗರೋತ್ಥಾನ ಯೋಜನೆಯಡಿ 10 ಕೋಟಿ ಅನುದಾನಕ್ಕೆ ಕನ್ನ

ಕಾಚಿಗುಡ ರೈಲು ನಿಲ್ದಾಣವು ಹಸಿರು ರೈಲು ನಿಲ್ದಾಣವಾಗಿದೆ. ಹಸಿರು ಇಂಧನ ಬಳಕೆಯ ಮೂಲಕ ಪರಿಸರ ಸುಸ್ಥಿರತೆಗೆ ಅದರ ಬದ್ಧತೆಗಾಗಿ ರೈಲು ನಿಲ್ದಾಣಕ್ಕೆ ಇಂಡಿಯನ್‌ ಗ್ರೀನ್‌ ಬಿಲ್ಡಿಂಗ್‌ ಕೌನ್ಸಿಲ್ಸ್‌ (IGBC) ಪ್ಲಾಟಿನಂ ರೇಟಿಂಗ್ ನೀಡಿದೆ. ಇಷ್ಟೇ ಅಲ್ಲದೆ, ಇದನ್ನು ಇಂಧನ ದಕ್ಷತೆಯುಳ್ಳ ರೈಲು ನಿಲ್ದಾಣ ಎಂದೂ ಭಾರತೀಯ ರೈಲ್ವೆ ಗುರುತಿಸಿದೆ. ಗಮನಾರ್ಹವಾಗಿ, ಇದು ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಪರಿಚಯಿಸಿದ ಮೊದಲ ರೈಲು ನಿಲ್ದಾಣವಾಗಿದೆ.

ಇದನ್ನೂ ನೋಡಿ: ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ

ಇದಲ್ಲದೆ, ಅಮೃತ್ ಭಾರತ್ ಯೋಜನೆಯಡಿಯಲ್ಲಿ, ಈ ನಿಲ್ದಾಣವನ್ನು 421.66 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವುದು ಮತ್ತು ಸಾಂಪ್ರದಾಯಿಕ ಪರಂಪರೆಯನ್ನು ಸಂರಕ್ಷಿಸುವುದು ಮುಖ್ಯ ಗುರಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:49 pm, Sun, 8 June 25

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ