AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇಯ ಬಹು ದೂರ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಟ್ರಕ್ ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ
ಹಿಟ್​ ಆ್ಯಂಡ್ ರನ್
ನಯನಾ ರಾಜೀವ್
|

Updated on: Apr 18, 2024 | 10:04 AM

Share

ಇತ್ತೀಚೆಗೆ ಅಪಘಾತ(Accident)ಗಳು ಹಾಗೂ ಹಿಟ್​ ಆ್ಯಂಡ್​ ರನ್(Hit and Run)  ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​(Hyderabad)ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ. ವೇಗದ ಲಾರಿಯೊಂದು ಜನನಿಬಿಡ ಪ್ರದೇಶದಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಅದರ ಮುಂಭಾಗದ ಟೈರ್ ಅಡಿಯಲ್ಲಿ ಎಳೆದುಕೊಂಡು ಹೋಗುವುದನ್ನು ವಿಡಿಯೋ ತೋರಿಸುತ್ತದೆ.

ಆದರೆ ಪುಣ್ಯಕ್ಕೆ ಆ ಬೈಕ್ ಸವಾರ ಹೇಗೋ ಮಾಡಿ ಬೈಕ್​ನಿಂದ ತಪ್ಪಿಸಿಕೊಂಡು ಲಾರಿಯ ಬದಿಯನ್ನು ಹಿಡಿದು ನೇತಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ದೂರ ಹೋಗ ಬಳಿಕ ಲಾರಿ ಚಕ್ರಕ್ಕೆ ಸಿಲುಕಿದ್ದ ಬೈಕ್​ ಬೇರ್ಪಡುತ್ತದೆ. ಈ ಲಾರಿಯು ಬೈಕ್​ಗೆ ಡಿಕ್ಕಿ ಹೊಡೆದು ಸ್ವಲ್ಪ ಸಮಯದ ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಏಪ್ರಿಲ್​ 14ರಂದು ನಡೆದಿದೆ.

ಪೊಲೀಸರ ಪ್ರಕಾರ ಏಪ್ರಿಲ್ 15ರಂದು ಹೈದರಾಬಾದ್ ನಿವಾಸಿ ಅಬ್ದುಲ್ ಮಜೀದ್ ಎಂಬುವವರು ದೂರು ನೀಡಿದ್ದಾರೆ. ಏಪ್ರಿಲ್​ 14ರಂದು ರಾತ್ರಿ 11 ಗಂಟೆ ಸುಮಾರಿಗೆ ಚಂಪಾಪೇಟೆಯ ಲಕ್ಷ್ಮೀ ಗಾರ್ಡನ್ ಕಡೆಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿತ್ತು.

ಮತ್ತಷ್ಟು ಓದಿ: Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ

ಡಿಕ್ಕಿಯ ನಂತರ ರಸ್ತೆಯ ಎಡಭಾಗದಲ್ಲಿ ಬಿದ್ದಿದ್ದಾರೆ, ಆಗ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದರು, ಈ ಘಟನೆಯ ವಿಡಿಯೋವನ್ನು ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಾಡಿದ್ದಾರೆ. ಸವಾರನಿಗೆ ಗಾಯವಾಗದಿದ್ದರೂ ಆತನ ದ್ವಿಚಕ್ರವಾಹನವನ್ನು ಸುಮಾರು ದೂರ ಎಳೆದುಕೊಂಡು ಹೋಗಿದ್ದು, ಇದರಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯ ವಿಡಿಯೋ

ನಂತರ ಅದೇ ಟ್ರಕ್​ ಚಂಪಾಪೇಟ್ ಟಿ ಜಂಕ್ಷನ್​ನಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ