AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇಯ ಬಹು ದೂರ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಟ್ರಕ್ ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ
ಹಿಟ್​ ಆ್ಯಂಡ್ ರನ್
ನಯನಾ ರಾಜೀವ್
|

Updated on: Apr 18, 2024 | 10:04 AM

Share

ಇತ್ತೀಚೆಗೆ ಅಪಘಾತ(Accident)ಗಳು ಹಾಗೂ ಹಿಟ್​ ಆ್ಯಂಡ್​ ರನ್(Hit and Run)  ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​(Hyderabad)ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ. ವೇಗದ ಲಾರಿಯೊಂದು ಜನನಿಬಿಡ ಪ್ರದೇಶದಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಅದರ ಮುಂಭಾಗದ ಟೈರ್ ಅಡಿಯಲ್ಲಿ ಎಳೆದುಕೊಂಡು ಹೋಗುವುದನ್ನು ವಿಡಿಯೋ ತೋರಿಸುತ್ತದೆ.

ಆದರೆ ಪುಣ್ಯಕ್ಕೆ ಆ ಬೈಕ್ ಸವಾರ ಹೇಗೋ ಮಾಡಿ ಬೈಕ್​ನಿಂದ ತಪ್ಪಿಸಿಕೊಂಡು ಲಾರಿಯ ಬದಿಯನ್ನು ಹಿಡಿದು ನೇತಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ದೂರ ಹೋಗ ಬಳಿಕ ಲಾರಿ ಚಕ್ರಕ್ಕೆ ಸಿಲುಕಿದ್ದ ಬೈಕ್​ ಬೇರ್ಪಡುತ್ತದೆ. ಈ ಲಾರಿಯು ಬೈಕ್​ಗೆ ಡಿಕ್ಕಿ ಹೊಡೆದು ಸ್ವಲ್ಪ ಸಮಯದ ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಏಪ್ರಿಲ್​ 14ರಂದು ನಡೆದಿದೆ.

ಪೊಲೀಸರ ಪ್ರಕಾರ ಏಪ್ರಿಲ್ 15ರಂದು ಹೈದರಾಬಾದ್ ನಿವಾಸಿ ಅಬ್ದುಲ್ ಮಜೀದ್ ಎಂಬುವವರು ದೂರು ನೀಡಿದ್ದಾರೆ. ಏಪ್ರಿಲ್​ 14ರಂದು ರಾತ್ರಿ 11 ಗಂಟೆ ಸುಮಾರಿಗೆ ಚಂಪಾಪೇಟೆಯ ಲಕ್ಷ್ಮೀ ಗಾರ್ಡನ್ ಕಡೆಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿತ್ತು.

ಮತ್ತಷ್ಟು ಓದಿ: Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ

ಡಿಕ್ಕಿಯ ನಂತರ ರಸ್ತೆಯ ಎಡಭಾಗದಲ್ಲಿ ಬಿದ್ದಿದ್ದಾರೆ, ಆಗ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದರು, ಈ ಘಟನೆಯ ವಿಡಿಯೋವನ್ನು ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಾಡಿದ್ದಾರೆ. ಸವಾರನಿಗೆ ಗಾಯವಾಗದಿದ್ದರೂ ಆತನ ದ್ವಿಚಕ್ರವಾಹನವನ್ನು ಸುಮಾರು ದೂರ ಎಳೆದುಕೊಂಡು ಹೋಗಿದ್ದು, ಇದರಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯ ವಿಡಿಯೋ

ನಂತರ ಅದೇ ಟ್ರಕ್​ ಚಂಪಾಪೇಟ್ ಟಿ ಜಂಕ್ಷನ್​ನಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ