AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇಯ ಬಹು ದೂರ ಎಳೆದೊಯ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಟ್ರಕ್ ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ
ಹಿಟ್​ ಆ್ಯಂಡ್ ರನ್
Follow us
ನಯನಾ ರಾಜೀವ್
|

Updated on: Apr 18, 2024 | 10:04 AM

ಇತ್ತೀಚೆಗೆ ಅಪಘಾತ(Accident)ಗಳು ಹಾಗೂ ಹಿಟ್​ ಆ್ಯಂಡ್​ ರನ್(Hit and Run)  ಪ್ರಕರಣಗಳು ಹೆಚ್ಚಾಗುತ್ತಿವೆ. ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​(Hyderabad)ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಟ್​ ಆ್ಯಂಡ್ ರನ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ. ವೇಗದ ಲಾರಿಯೊಂದು ಜನನಿಬಿಡ ಪ್ರದೇಶದಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಅದರ ಮುಂಭಾಗದ ಟೈರ್ ಅಡಿಯಲ್ಲಿ ಎಳೆದುಕೊಂಡು ಹೋಗುವುದನ್ನು ವಿಡಿಯೋ ತೋರಿಸುತ್ತದೆ.

ಆದರೆ ಪುಣ್ಯಕ್ಕೆ ಆ ಬೈಕ್ ಸವಾರ ಹೇಗೋ ಮಾಡಿ ಬೈಕ್​ನಿಂದ ತಪ್ಪಿಸಿಕೊಂಡು ಲಾರಿಯ ಬದಿಯನ್ನು ಹಿಡಿದು ನೇತಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ದೂರ ಹೋಗ ಬಳಿಕ ಲಾರಿ ಚಕ್ರಕ್ಕೆ ಸಿಲುಕಿದ್ದ ಬೈಕ್​ ಬೇರ್ಪಡುತ್ತದೆ. ಈ ಲಾರಿಯು ಬೈಕ್​ಗೆ ಡಿಕ್ಕಿ ಹೊಡೆದು ಸ್ವಲ್ಪ ಸಮಯದ ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆ ಏಪ್ರಿಲ್​ 14ರಂದು ನಡೆದಿದೆ.

ಪೊಲೀಸರ ಪ್ರಕಾರ ಏಪ್ರಿಲ್ 15ರಂದು ಹೈದರಾಬಾದ್ ನಿವಾಸಿ ಅಬ್ದುಲ್ ಮಜೀದ್ ಎಂಬುವವರು ದೂರು ನೀಡಿದ್ದಾರೆ. ಏಪ್ರಿಲ್​ 14ರಂದು ರಾತ್ರಿ 11 ಗಂಟೆ ಸುಮಾರಿಗೆ ಚಂಪಾಪೇಟೆಯ ಲಕ್ಷ್ಮೀ ಗಾರ್ಡನ್ ಕಡೆಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿತ್ತು.

ಮತ್ತಷ್ಟು ಓದಿ: Road Accident: ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ, 10 ಮಂದಿ ದುರ್ಮರಣ

ಡಿಕ್ಕಿಯ ನಂತರ ರಸ್ತೆಯ ಎಡಭಾಗದಲ್ಲಿ ಬಿದ್ದಿದ್ದಾರೆ, ಆಗ ಟ್ರಕ್ ಚಾಲಕ ವಾಹನವನ್ನು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದರು, ಈ ಘಟನೆಯ ವಿಡಿಯೋವನ್ನು ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಾಡಿದ್ದಾರೆ. ಸವಾರನಿಗೆ ಗಾಯವಾಗದಿದ್ದರೂ ಆತನ ದ್ವಿಚಕ್ರವಾಹನವನ್ನು ಸುಮಾರು ದೂರ ಎಳೆದುಕೊಂಡು ಹೋಗಿದ್ದು, ಇದರಿಂದ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯ ವಿಡಿಯೋ

ನಂತರ ಅದೇ ಟ್ರಕ್​ ಚಂಪಾಪೇಟ್ ಟಿ ಜಂಕ್ಷನ್​ನಲ್ಲಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಚಾಲಕನನ್ನು ಪೃಥ್ವಿರಾಜ್ ಎಂದು ಗುರುತಿಸಲಾಗಿದೆ. ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್