AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಪತ್ನಿ, ಮಗಳು, ನಾದಿನಿಯ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ವ್ಯಕ್ತಿಯೊಬ್ಬ ಪತ್ನಿ, ಮಗಳು ಹಾಗೂ ನಾದಿನಿಯ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದಿನ ವಿಕಾರಾಬಾದ್​​ನಲ್ಲಿ ನಡೆದಿದೆ. ಕುಲ್ಕಚೆರ್ಲಾ ಮಂಡಲದಲ್ಲಿರುವ ಅವರ ಮನೆಯಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆ ವ್ಯಕ್ತಿ ಕತ್ತಿ ಬಳಸಿ 30 ವರ್ಷದ ಪತ್ನಿ, ಸುಮಾರು 10 ವರ್ಷದ ಕಿರಿಯ ಮಗಳು ಮತ್ತು 40 ವರ್ಷದ ನಾದಿನಿಯನ್ನು ಮಲಗಿದ್ದಾಗ ಕೊಲೆ ಮಾಡಿದ್ದಾನೆ.

ಹೈದರಾಬಾದ್: ಪತ್ನಿ, ಮಗಳು, ನಾದಿನಿಯ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಕ್ರೈಂImage Credit source: Google
ನಯನಾ ರಾಜೀವ್
|

Updated on: Nov 03, 2025 | 2:31 PM

Share

ಹೈದರಾಬಾದ್, ನವೆಂಬರ್ 03: ವ್ಯಕ್ತಿಯೊಬ್ಬ ಪತ್ನಿ, ಮಗಳು ಹಾಗೂ ನಾದಿನಿಯ ಕೊಲೆ(Murder) ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದಿನ ವಿಕಾರಾಬಾದ್​​ನಲ್ಲಿ ನಡೆದಿದೆ. ಕುಲ್ಕಚೆರ್ಲಾ ಮಂಡಲದಲ್ಲಿರುವ ಅವರ ಮನೆಯಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಆ ವ್ಯಕ್ತಿ ಕತ್ತಿ ಬಳಸಿ 30 ವರ್ಷದ ಪತ್ನಿ, ಸುಮಾರು 10 ವರ್ಷದ ಕಿರಿಯ ಮಗಳು ಮತ್ತು 40 ವರ್ಷದ ನಾದಿನಿಯನ್ನು ಮಲಗಿದ್ದಾಗ ಕೊಲೆ ಮಾಡಿದ್ದಾನೆ. ತುರ್ತು ಸಹಾಯವಾಣಿಯ ಮೂಲಕ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿತ್ತು ಮತ್ತು ಕರೆ ಬಂದ ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಬಂದಿದ್ದರು.

ಆ ವ್ಯಕ್ತಿ ತನ್ನ ಹಿರಿಯ ಮಗಳನ್ನು ಸಹ ಕೊಲ್ಲಲು ಪ್ರಯತ್ನಿಸಿದ್ದ, ಆದರೆ ತಲೆಗೆ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ನಂತರ ಆರೋಪಿ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಪತಿ ಮತ್ತು ಆತನ ಪತ್ನಿಯ ನಡುವಿನ ಕೌಟುಂಬಿಕ ಕಲಹಗಳು ದುರಂತಕ್ಕೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ಆಸ್ಪತ್ರೆಯಿಂದ ಪೊಲೀಸರೊಂದಿಗೆ ಮಾತನಾಡಿದ ಕುಟುಂಬದ ಮಗಳು, ರಾತ್ರಿಯ ಭಯಾನಕ ಘಟನೆಗಳನ್ನು ವಿವರಿಸಿದ್ದಾಳೆ.

ಮತ್ತಷ್ಟು ಓದಿ: ಇದೆಂಥಾ ಪ್ರೀತಿ, ಮದುವೆಯಾಗು ಎಂದಿದ್ದಕ್ಕೆ ಪ್ರೇಯಸಿಯನ್ನು ಗುಂಡಿ ತೋಡಿ ಮುಚ್ಚೇಬಿಟ್ಟ

ಶನಿವಾರ ತನ್ನ ಹೆತ್ತವರ ನಡುವೆ ತೀವ್ರ ಜಗಳವಾಗಿದೆ. ನಂತರ ತಾಯಿ ಮನೆಯಿಂದ ಹೊರಟುಹೋದರು ಎಂದು ಆಕೆ ಹೇಳಿದ್ದಾಳೆ. ಅವರು ಮಲಗಿದ್ದಾಗ ಪರಿಸ್ಥಿತಿ ಹೇಗೆ ಮಾರಕವಾಯಿತು ಎಂದು ಅವರು ವಿವರಿಸಿದ್ದಾಳೆ.

ಕುಟುಂಬದವರು ಗಾಢ ನಿದ್ರೆಯಲ್ಲಿದ್ದಾಗ, ತನ ತಂದೆ ಮೊದಲು ನನ್ನ ಚಿಕ್ಕಮ್ಮನನ್ನು ಕತ್ತಿಯಿಂದ ಹೊಡೆದು ಕೊಂಡಿದ್ದಾರೆ. ನನ್ನ ತಾಯಿ ಆಕೆಯನ್ನು ಉಳಿಸಲು ಪ್ರಯತ್ನಿಸಿದಾಗ, ಅವರು ಅವಳ ಮೇಲೂ ದಾಳಿ ಮಾಡಿದ್ದಾರೆ ಪರಿಣಾಮವಾಗಿ ಇಬ್ಬರೂ ಸಾವನ್ನಪ್ಪಿದ್ದಾರೆ.

ನಂತರ ತನ್ನ ತಂದೆ ನನ್ನ ಮೇಲೆ ಮತ್ತು ತನ್ನ ತಂಗಿಯ ಮೇಲೆ ಹಲ್ಲೆ ಮಾಡಿದ್ದರು. ದಾಳಿ ಮಾಡುವ ಮೊದಲು ಎಲ್ಲರೂ ಸತ್ತ ನಂತರ ನಿಮ್ಮನ್ನು ಯಾರು ನೋಡಿಕೊಳ್ಳುತ್ತಾರೆ ಎಂದು ತಂದೆ ಪ್ರಶ್ನಿಸಿದ್ದರು. ತಂಗಿಯ ಮೇಲೆ ಹಲ್ಲೆ ನಡೆಸಿ ನನ್ನ ಮೇಲೆ ಹಲ್ಲೆ ನಡೆಸಿದ ಬಳಿಕ ತಾನು ಓಡಿ ಹೋಗಿ ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿದೆ ಎಂದು ಆಕೆ ಮಾಹಿತಿ ನೀಡಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ