AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಭಾಂಗ್​ ಕುಡಿದು ವಿಮಾನ ಹತ್ತಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿರುವಾಗ ವಿಮಾನದ ಬಾಗಿಲು ತೆರೆಯಲು ಯತ್ನಿಸಿರುವ ಘಟನೆ ಇಂಡಿಗೋ ವಿಮಾನದಲ್ಲಿ ನಡೆದಿದೆ.

ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on:May 26, 2024 | 3:22 PM

Share

ವಿಮಾನ(Flight) ಹತ್ತುವ ಮುಂಚೆ ಭಾಂಗ್ ಕುಡಿದಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿ ವಿಮಾನದ ಬಾಗಿಲು ತೆಗೆಯಲು ಯತ್ನಿಸಿರುವ ಘಟನೆ ನಡೆದಿದೆ. ಇಂದೋರ್​ನಿಂದ ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ವಿಮಾನವು ಹೈದರಾಬಾದ್‌ನಲ್ಲಿ ಲ್ಯಾಂಡ್ ಆಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. 29 ವರ್ಷದ ವ್ಯಕ್ತಿ ವಿಮಾನ ಹತ್ತುವ ಮೊದಲು ‘ಭಾಂಗ್’ ಸೇವಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವ ಮುನ್ನ ಏರ್‌ಲೈನ್ಸ್ ಉದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದ್ದರು ಎಂದು ಅವರು ಹೇಳಿದರು. ಘಟನೆ ಮೇ 21ರಂದು ನಡೆದಿದೆ ಎಂದು ಹೇಳಲಾಗಿದೆ, ಈ ವ್ಯಕ್ತಿಯ ವಿರುದ್ಧ ಏರ್‌ಲೈನ್ಸ್ ಸಿಬ್ಬಂದಿ ದೂರು ದಾಖಲಿಸಿದ್ದಾರೆ ಮತ್ತು ಅವರನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ವ್ಯಕ್ತಿ ಇಂದೋರ್‌ನಲ್ಲಿ ವಿಮಾನವನ್ನು ಹತ್ತಿದ ಕೂಡಲೇ, ಸಿಬ್ಬಂದಿ ಅವನ ನಡವಳಿಕೆಯಲ್ಲಿ ಅಸಹಜತೆಯನ್ನು ಗಮನಿಸಿದರು, ನಂತರ ಅವರು ವ್ಯಕ್ತಿಯನ್ನು ಬೇರೆ ಸೀಟಿಗೆ ಸ್ಥಳಾಂತರಿಸಿದರು. ಪ್ರಯಾಣಿಕ ತನ್ನ ಸ್ನೇಹಿತನೊಂದಿಗೆ ಕುಳಿತುಕೊಳ್ಳುವುದಾಗಿ ಹಠ ಹಿಡಿದಿದ್ದರು, ಸಿಬ್ಬಂದಿ ಕೊನೆಗೆ ಒಪ್ಪಿಗೆ ನೀಡಿದ್ದರು. ವ್ಯಕ್ತಿ ಸ್ವಲ್ಪ ಸಮಯದವರೆಗೆ ಶಾಂತವಾಗಿ ಕುಳಿತಿದ್ದರು ಬಳಿಕ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.

ಮತ್ತಷ್ಟು ಓದಿ: ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

ವಿಮಾನದ ತುಂಬೆಲ್ಲಾ ಓಡಾಡಲು ಆರಂಭಿಸಿದ್ದರು, ಆತನಿಗೆ ನಿಗದಿತ ಸೀಟಿನಲ್ಲಿ ಕುಳಿತುಕೊಳ್ಳುವಂತೆ ಸಿಬ್ಬಂದಿ ತಾಕೀತು ಮಾಡಿದರೂ ಗಮನಕೊಡಲಿಲ್ಲ.

ವಿಮಾನ ಇನ್ನೇನು ಲ್ಯಾಂಡಿಂಗ್ ಆಗಬೇಕು ಅನ್ನುವಷ್ಟರಲ್ಲಿ ಬಾಗಿಲ ಬಳಿ ಹೋಗಿ ಬಾಗಿಲು ತೆಗೆಯಲು ಪ್ರಯತ್ನಿಸಿದ್ದರು. ವಿಮಾನದಲ್ಲಿದ್ದ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರು ಅವರನ್ನು ತಡೆದರು ಎಂದು ವಕ್ತಾರರು ತಿಳಿಸಿದ್ದಾರೆ. ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ಶೌಚಾಲಯದಲ್ಲಿ ಸಿಗರೇಟ್​ ಸೇದಿದ್ದು, ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿರುವ ಸಾಕಷ್ಟು ಘಟನೆಗಳು ಬೆಳಿಕಿಗೆ ಬಂದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:20 pm, Sun, 26 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ