AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಭಾಂಗ್​ ಕುಡಿದು ವಿಮಾನ ಹತ್ತಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿರುವಾಗ ವಿಮಾನದ ಬಾಗಿಲು ತೆರೆಯಲು ಯತ್ನಿಸಿರುವ ಘಟನೆ ಇಂಡಿಗೋ ವಿಮಾನದಲ್ಲಿ ನಡೆದಿದೆ.

ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on:May 26, 2024 | 3:22 PM

Share

ವಿಮಾನ(Flight) ಹತ್ತುವ ಮುಂಚೆ ಭಾಂಗ್ ಕುಡಿದಿದ್ದ ಪ್ರಯಾಣಿಕರೊಬ್ಬರು ಆಗಸದಲ್ಲಿ ವಿಮಾನದ ಬಾಗಿಲು ತೆಗೆಯಲು ಯತ್ನಿಸಿರುವ ಘಟನೆ ನಡೆದಿದೆ. ಇಂದೋರ್​ನಿಂದ ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ(IndiGo) ವಿಮಾನದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ವಿಮಾನವು ಹೈದರಾಬಾದ್‌ನಲ್ಲಿ ಲ್ಯಾಂಡ್ ಆಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. 29 ವರ್ಷದ ವ್ಯಕ್ತಿ ವಿಮಾನ ಹತ್ತುವ ಮೊದಲು ‘ಭಾಂಗ್’ ಸೇವಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವ ಮುನ್ನ ಏರ್‌ಲೈನ್ಸ್ ಉದ್ಯೋಗಿಗಳೊಂದಿಗೆ ವಾಗ್ವಾದ ನಡೆಸಿದ್ದರು ಎಂದು ಅವರು ಹೇಳಿದರು. ಘಟನೆ ಮೇ 21ರಂದು ನಡೆದಿದೆ ಎಂದು ಹೇಳಲಾಗಿದೆ, ಈ ವ್ಯಕ್ತಿಯ ವಿರುದ್ಧ ಏರ್‌ಲೈನ್ಸ್ ಸಿಬ್ಬಂದಿ ದೂರು ದಾಖಲಿಸಿದ್ದಾರೆ ಮತ್ತು ಅವರನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ವ್ಯಕ್ತಿ ಇಂದೋರ್‌ನಲ್ಲಿ ವಿಮಾನವನ್ನು ಹತ್ತಿದ ಕೂಡಲೇ, ಸಿಬ್ಬಂದಿ ಅವನ ನಡವಳಿಕೆಯಲ್ಲಿ ಅಸಹಜತೆಯನ್ನು ಗಮನಿಸಿದರು, ನಂತರ ಅವರು ವ್ಯಕ್ತಿಯನ್ನು ಬೇರೆ ಸೀಟಿಗೆ ಸ್ಥಳಾಂತರಿಸಿದರು. ಪ್ರಯಾಣಿಕ ತನ್ನ ಸ್ನೇಹಿತನೊಂದಿಗೆ ಕುಳಿತುಕೊಳ್ಳುವುದಾಗಿ ಹಠ ಹಿಡಿದಿದ್ದರು, ಸಿಬ್ಬಂದಿ ಕೊನೆಗೆ ಒಪ್ಪಿಗೆ ನೀಡಿದ್ದರು. ವ್ಯಕ್ತಿ ಸ್ವಲ್ಪ ಸಮಯದವರೆಗೆ ಶಾಂತವಾಗಿ ಕುಳಿತಿದ್ದರು ಬಳಿಕ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.

ಮತ್ತಷ್ಟು ಓದಿ: ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

ವಿಮಾನದ ತುಂಬೆಲ್ಲಾ ಓಡಾಡಲು ಆರಂಭಿಸಿದ್ದರು, ಆತನಿಗೆ ನಿಗದಿತ ಸೀಟಿನಲ್ಲಿ ಕುಳಿತುಕೊಳ್ಳುವಂತೆ ಸಿಬ್ಬಂದಿ ತಾಕೀತು ಮಾಡಿದರೂ ಗಮನಕೊಡಲಿಲ್ಲ.

ವಿಮಾನ ಇನ್ನೇನು ಲ್ಯಾಂಡಿಂಗ್ ಆಗಬೇಕು ಅನ್ನುವಷ್ಟರಲ್ಲಿ ಬಾಗಿಲ ಬಳಿ ಹೋಗಿ ಬಾಗಿಲು ತೆಗೆಯಲು ಪ್ರಯತ್ನಿಸಿದ್ದರು. ವಿಮಾನದಲ್ಲಿದ್ದ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರು ಅವರನ್ನು ತಡೆದರು ಎಂದು ವಕ್ತಾರರು ತಿಳಿಸಿದ್ದಾರೆ. ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ಶೌಚಾಲಯದಲ್ಲಿ ಸಿಗರೇಟ್​ ಸೇದಿದ್ದು, ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿರುವ ಸಾಕಷ್ಟು ಘಟನೆಗಳು ಬೆಳಿಕಿಗೆ ಬಂದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:20 pm, Sun, 26 May 24

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?