AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಹೈದರಾಬಾದ್ ಮೂಲದ ಅಬ್ದುಲ್ ಮಜೀದ್ ಅತ್ತಾರ್​ನನ್ನು ಹೈದರಾಬಾದ್​ನ ಮೊಘಲ್​ಪುರ ಪೊಲೀಸರು ಬಂಧಿಸಿದ್ದಾರೆ.

ಪ್ರಧಾನಿ ಮೋದಿ, ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ
Amit Shah, Narendra Modi
TV9 Web
| Edited By: |

Updated on:Jun 30, 2022 | 11:41 AM

Share

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಹೈದರಾಬಾದ್ ಮೂಲದ ಅಬ್ದುಲ್ ಮಜೀದ್ ಅತ್ತಾರ್​ನನ್ನು ಹೈದರಾಬಾದ್​ನ ಮೊಘಲ್​ಪುರ ಪೊಲೀಸರು ಬಂಧಿಸಿದ್ದಾರೆ.

ಆತ ಮಜ್ಲಿಸ್ -ಎ-ಇಂಕ್ವಿಲಾಬ್-ಎ-ಮಿಲ್ಲಾದ ರಾಷ್ಟ್ರೀಯ ಸಂಚಾಲಕನಾಗಿದ್ದಾನೆ. ನೂಪುರ್​ ಶರ್ಮಾ ಹೇಳಿಕೆಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಅಬ್ದುಲ್,  ಆರೆಸ್ಸೆಸ್ ಮತ್ತು ಬಿಜೆಪಿಯ ಉನ್ನತ ನಾಯಕರು ಕ್ಷಮೆಯಾಚಿಸಲಿ ಎಂದು ಹೇಳಿದ್ದ.

ಕಮೆಂಟ್‌ಗಳಿಗೆ ಕ್ಷಮೆಯಾಚಿಸಲಿ ಅಥವಾ ಶಿರಚ್ಛೇದಕ್ಕೆ ಸಿದ್ಧರಾಗಿರಿ ಫೇಸ್‌ಬುಕ್​ನಲ್ಲಿ ಪ್ರಚೋದನಕಾರಿ ಪೋಸ್ಟ್ ಆತ ಹಾಕಿದ್ದ ಎಂದು ಹೇಳಲಾಗಿದೆ.

ಅಬ್ದುಲ್ ಮಜಿದ್ ಅತ್ತಾರ್ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಲಾಗಿದೆ. ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಉದ್ದೇಶ ಹಾಗೂ ಕೋಮು ದ್ವೇಷ ಮೂಡಿಸುವ ಉದ್ದೇಶದಿಂದ ಈ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 153A,295-A,504,505(2),506-II ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.

ಎರಡು ದಿನಗಳ ಹಿಂದಷ್ಟೇ ರಾಜಸ್ಥಾನದ ಉದಯ್​ಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಟೈಲರ್ ಬೆಂಬಲ ಸೂಚಿಸಿ ಪೋಸ್ಟ್ ಒಂದನ್ನು ಹಾಕಿದ್ದರು.

ಹೀಗಾಗಿ ಯಾವುದೇ ಬೆದರಿಕೆ ಕರೆ, ಬೆದರಿಕೆ ಪೋಸ್ಟ್​ಗಳನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Published On - 11:34 am, Thu, 30 June 22

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ