AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಹೈದರಾಬಾದ್ ಮೂಲದ ಅಬ್ದುಲ್ ಮಜೀದ್ ಅತ್ತಾರ್​ನನ್ನು ಹೈದರಾಬಾದ್​ನ ಮೊಘಲ್​ಪುರ ಪೊಲೀಸರು ಬಂಧಿಸಿದ್ದಾರೆ.

ಪ್ರಧಾನಿ ಮೋದಿ, ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ
Amit Shah, Narendra Modi
TV9 Web
| Edited By: |

Updated on:Jun 30, 2022 | 11:41 AM

Share

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಹೈದರಾಬಾದ್ ಮೂಲದ ಅಬ್ದುಲ್ ಮಜೀದ್ ಅತ್ತಾರ್​ನನ್ನು ಹೈದರಾಬಾದ್​ನ ಮೊಘಲ್​ಪುರ ಪೊಲೀಸರು ಬಂಧಿಸಿದ್ದಾರೆ.

ಆತ ಮಜ್ಲಿಸ್ -ಎ-ಇಂಕ್ವಿಲಾಬ್-ಎ-ಮಿಲ್ಲಾದ ರಾಷ್ಟ್ರೀಯ ಸಂಚಾಲಕನಾಗಿದ್ದಾನೆ. ನೂಪುರ್​ ಶರ್ಮಾ ಹೇಳಿಕೆಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಅಬ್ದುಲ್,  ಆರೆಸ್ಸೆಸ್ ಮತ್ತು ಬಿಜೆಪಿಯ ಉನ್ನತ ನಾಯಕರು ಕ್ಷಮೆಯಾಚಿಸಲಿ ಎಂದು ಹೇಳಿದ್ದ.

ಕಮೆಂಟ್‌ಗಳಿಗೆ ಕ್ಷಮೆಯಾಚಿಸಲಿ ಅಥವಾ ಶಿರಚ್ಛೇದಕ್ಕೆ ಸಿದ್ಧರಾಗಿರಿ ಫೇಸ್‌ಬುಕ್​ನಲ್ಲಿ ಪ್ರಚೋದನಕಾರಿ ಪೋಸ್ಟ್ ಆತ ಹಾಕಿದ್ದ ಎಂದು ಹೇಳಲಾಗಿದೆ.

ಅಬ್ದುಲ್ ಮಜಿದ್ ಅತ್ತಾರ್ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಲಾಗಿದೆ. ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಉದ್ದೇಶ ಹಾಗೂ ಕೋಮು ದ್ವೇಷ ಮೂಡಿಸುವ ಉದ್ದೇಶದಿಂದ ಈ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 153A,295-A,504,505(2),506-II ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.

ಎರಡು ದಿನಗಳ ಹಿಂದಷ್ಟೇ ರಾಜಸ್ಥಾನದ ಉದಯ್​ಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಟೈಲರ್ ಬೆಂಬಲ ಸೂಚಿಸಿ ಪೋಸ್ಟ್ ಒಂದನ್ನು ಹಾಕಿದ್ದರು.

ಹೀಗಾಗಿ ಯಾವುದೇ ಬೆದರಿಕೆ ಕರೆ, ಬೆದರಿಕೆ ಪೋಸ್ಟ್​ಗಳನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Published On - 11:34 am, Thu, 30 June 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ