AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವ ಕಳ್ಳಸಾಗಣೆ ಆರೋಪ; ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬಂಧನ

ಮಾನವ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಹೈದರಾಬಾದ್​ನ ವ್ಯಕ್ತಿಯನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ 35 ವರ್ಷದ ಮಹಿಳೆಯನ್ನು ಒಮಾನ್‌ನ ಮಸ್ಕತ್‌ಗೆ ಸಾಗಿಸಲಾಗುತ್ತಿದ್ದ ಕಳ್ಳಸಾಗಣೆ ಜಾಲದಿಂದ ರಕ್ಷಿಸಲಾಗಿದೆ. ಸತ್ಯನಾರಾಯಣ ಅವರು ಪ್ರವಾಸೋದ್ಯಮದ ಹೆಸರಿನಲ್ಲಿ ಗಲ್ಫ್ ದೇಶಗಳಿಗೆ ಮಹಿಳೆಯರನ್ನು ಅಕ್ರಮವಾಗಿ ಕಳುಹಿಸುವ ಕಳ್ಳಸಾಗಣೆ ಜಾಲದ ಭಾಗವಾಗಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮಾನವ ಕಳ್ಳಸಾಗಣೆ ಆರೋಪ; ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬಂಧನ
Arrest
ಸುಷ್ಮಾ ಚಕ್ರೆ
|

Updated on: Jun 09, 2025 | 5:35 PM

Share

ಹೈದರಾಬಾದ್, ಜೂನ್ 9: ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (RGIA) ಕಳ್ಳಸಾಗಣೆ ಜಾಲದ ಹಿಡಿತದಿಂದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ ಮತ್ತು ಈ ಜಾಲದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ (Andhra Pradesh) ಪಶ್ಚಿಮ ಗೋದಾವರಿ ಜಿಲ್ಲೆಯ 35 ವರ್ಷದ ಮಹಿಳೆ ಅಕುಮಾರತಿ ಸತ್ಯನಾರಾಯಣ ಎಂಬ ನಕಲಿ ವೀಸಾ ಏಜೆಂಟ್‌ನಿಂದ ಮೋಸ ಹೋಗಿ ಒಮಾನ್‌ನ ಮಸ್ಕತ್‌ಗೆ ಸಾಗಿಸಲಾಗುತ್ತಿದ್ದ ಕಳ್ಳಸಾಗಣೆ ಜಾಲದಿಂದ ತಪ್ಪಿಸಿಕೊಂಡಿದ್ದಾರೆ. ಅವರು 4 ತಿಂಗಳ ಹಿಂದೆ ವಿದೇಶದಲ್ಲಿ ಉದ್ಯೋಗ ಹುಡುಕಲು ಅವರನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.

ಅದೇ ಪಟ್ಟಣದ ಸತ್ಯನಾರಾಯಣ ಎಂಬುವವರು ಉದ್ಯೋಗ ಸಹಾಯಕರಾಗಿ ನಟಿಸಿ, ಉದ್ಯೋಗ ವೀಸಾ, ವೈದ್ಯಕೀಯ ಕ್ಲಿಯರೆನ್ಸ್ ಮತ್ತು ಕಡ್ಡಾಯ ವಲಸಿಗರ ರಕ್ಷಕ (PoE) ಪ್ರಮಾಣಪತ್ರವನ್ನು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಹೈದರಾಬಾದ್‌ನ ವಿಮಾನ ನಿಲ್ದಾಣ ತಲುಪಿದ ನಂತರ, ಆ ವ್ಯಕ್ತಿ ತಾನು ಮಸ್ಕತ್‌ಗೆ ಪ್ರವಾಸಿಯಾಗಿ ಹೋಗುತ್ತಿದ್ದೇನೆ ಎಂದು ವಲಸೆ ಅಧಿಕಾರಿಗಳಿಗೆ ತಿಳಿಸಲು ಕೇಳಿಕೊಂಡನು. ಆದರೆ, ಆ ಮಹಿಳೆ ಉದ್ಯೋಗದ ಉದ್ದೇಶಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ ಎಂಬ ಸತ್ಯವನ್ನು ಬಹಿರಂಗಪಡಿಸಿದಳು.

ಇದನ್ನೂ ಓದಿ: ಛತ್ತೀಸ್‌ಗಢದ ಸುಕ್ಮಾದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು, ಹಲವರಿಗೆ ಗಾಯ

ಇದನ್ನೂ ಓದಿ
Image
ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು
Image
ಭಾರತದ ಸ್ನೇಹಿತರಿಂದ ಕೆಲವು ಮಾಹಿತಿ ಪಡೆದಿದ್ದು ಹೌದೆಂದು ಒಪ್ಪಿಕೊಂಡ ನಾಸಿರ್
Image
11 ವರ್ಷಗಳಲ್ಲಿ ಭಾರತದ ಜನರ ಬದುಕನ್ನು ಕೇಂದ್ರ ಸರ್ಕಾರ ಹೇಗೆ ಬದಲಿಸಿದೆ?
Image
ಹೊಸ ಇತಿಹಾಸ ಸೃಷ್ಟಿಯತ್ತ ಶುಭಾಂಶು ಶುಕ್ಲ; ಮುಖ್ಯಾಂಶಗಳು

ವಲಸೆ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಈ ಬಗ್ಗೆ ದೂರು ನೀಡಿ, ಪಿಒಇ ಇಲ್ಲದೆ ಕೆಲಸಕ್ಕಾಗಿ ಪ್ರವಾಸಿ ವೀಸಾದಲ್ಲಿ ಪ್ರಯಾಣಿಸುವ ಮಹಿಳೆಯರು ಅಪಾಯಕಾರಿ ಎಂದು ಎಚ್ಚರಿಸಿದರು. ತನ್ನನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಅರಿತುಕೊಂಡ ಅವರು ತಕ್ಷಣ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿ ಪುರಾವೆಯಾಗಿ ದಾಖಲೆಗಳನ್ನು ಸಲ್ಲಿಸಿದರು.

ಈ ಬಗ್ಗೆ ವಿಚಾರಣೆಯ ಸಮಯದಲ್ಲಿ, ಸತ್ಯನಾರಾಯಣ ಅವರು ಪ್ರವಾಸೋದ್ಯಮದ ಹೆಸರಿನಲ್ಲಿ ಗಲ್ಫ್ ದೇಶಗಳಿಗೆ ಮಹಿಳೆಯರನ್ನು ಅಕ್ರಮವಾಗಿ ಕಳುಹಿಸುವ ಕಳ್ಳಸಾಗಣೆ ಜಾಲದ ಭಾಗವಾಗಿರುವುದಾಗಿ ಒಪ್ಪಿಕೊಂಡರು. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಆ ವ್ಯಕ್ತಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪೊಲೀಸರು ಅಂತಾರಾಷ್ಟ್ರೀಯ ಕಳ್ಳಸಾಗಣೆ ಜಾಲದ ಬಗ್ಗೆ ತನಿಖೆ ಆರಂಭಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ