AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?

ಹೃದಯವನ್ನು ಸಾಗಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?
ಮೆಟ್ರೋ ಮೂಲಕ ಸಾಗಿಸಾದ ಹೃದಯ
ರಾಜೇಶ್ ದುಗ್ಗುಮನೆ
|

Updated on:Feb 02, 2021 | 6:52 PM

Share

ಆರೋಗ್ಯ ತುರ್ತು ಸೇವೆ ಸಮಯದಲ್ಲಿ ಗ್ರೀನ್ ಕಾರಿಡಾರ್ (ಜೀರೋ ಟ್ರಾಫಿಕ್​ ರಸ್ತೆ) ಮೂಲಕ ವ್ಯಕ್ತಿ ಅಥವಾ ವ್ಯಕ್ತಿಯ ಅಂಗವನ್ನು ಆಸ್ಪತ್ರೆಗೆ ಸಾಗಿಸಲಾಗುತ್ತದೆ.  ಈಗ ಮೆಟ್ರೋಗೂ ಗ್ರೀನ್ ಕಾರಿಡಾರ್ ಬಂದಿದ್ದು, ಕಸಿ ಮಾಡಲು ಹೃದಯ ರವಾನೆ ಮಾಡಲಾಗಿದೆ! ಕೇವಲ 30 ನಿಮಿಷಗಳಲ್ಲಿ ಹೃದಯ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆ ತಲುಪಿದೆ.

ಈ ಘಟನೆ ನಡೆದಿದ್ದು ಹೈದರಾಬಾದ್​​ನಲ್ಲಿ. ಎಲ್​ಬಿ ನಗರದ ಕಾಮಿನೇನಿ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ. ಈತನ ಹೃದಯವನ್ನು ಜುಬಿಲಿ ಹಿಲ್ಸ್​ನ ಅಪೊಲೊ ಆಸ್ಪತ್ರೆಗಳಿಗೆ ಕಸಿ ಮಾಡಲು ರವಾನೆ ಮಾಡಬೇಕಿತ್ತು. ಎರಡೂ ಆಸ್ಪತ್ರೆಗಳ ನಡುವಿನ ಅಂತರ 21 ಕಿ.ಮೀ. ರಸ್ತೆಯಲ್ಲಿ ಹೋದರೆ ಏನಿಲ್ಲವೆಂದರೂ ಒಂದೂವರೆ ಗಂಟೆ ಬೇಕು. ಹೀಗಾಗಿ, ಅಲ್ಲಿರುವ ವೈದ್ಯರು ಮೆಟ್ರೋ ಮೂಲಕ ಹೃದಯ ಸಾಗಿಸಲು ಮುಂದಾಗಿದ್ದರು.

ಎಲ್​ಬಿ ನಗರದ ಸಮೀಪ ಇರುವ ನಾಗೋಲ್ ಮೆಟ್ರೊ ನಿಲ್ದಾಣದಿಂದ ಹೃದಯವನ್ನು ಜುಬಿಲಿ ಹಿಲ್ಸ್​ಗೆ ತೆಗೆದುಕೊಂಡು ಹೋಗಲಾಗಿತ್ತು. ಈ ಮೆಟ್ರೋ ಒಂದೇ ಒಂದು ಕಡೆಯೂ ನಿಲ್ಲದೆ ನೇರವಾಗಿ ಜುಬಿಲಿ ಹಿಲ್ಸ್ ತಲುಪಿದೆ. ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಹೃದಯವನ್ನು ಅಪೊಲೊ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೇವಲ 30 ನಿಮಿಷಗಳಲ್ಲಿ ಈ ಹೃದಯ ಆಸ್ಪತ್ರೆ ತಲುಪಿದೆ!

ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ನಿವೃತ್ತರಾದ ಮರುದಿನವೇ.. ಕೋಲಾರದ ಯೋಧ ಹೃದಯಾಘಾತದಿಂದ ಸಾವು

Published On - 6:50 pm, Tue, 2 February 21

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!