AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?

ಹೃದಯವನ್ನು ಸಾಗಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?
ಮೆಟ್ರೋ ಮೂಲಕ ಸಾಗಿಸಾದ ಹೃದಯ
ರಾಜೇಶ್ ದುಗ್ಗುಮನೆ
|

Updated on:Feb 02, 2021 | 6:52 PM

Share

ಆರೋಗ್ಯ ತುರ್ತು ಸೇವೆ ಸಮಯದಲ್ಲಿ ಗ್ರೀನ್ ಕಾರಿಡಾರ್ (ಜೀರೋ ಟ್ರಾಫಿಕ್​ ರಸ್ತೆ) ಮೂಲಕ ವ್ಯಕ್ತಿ ಅಥವಾ ವ್ಯಕ್ತಿಯ ಅಂಗವನ್ನು ಆಸ್ಪತ್ರೆಗೆ ಸಾಗಿಸಲಾಗುತ್ತದೆ.  ಈಗ ಮೆಟ್ರೋಗೂ ಗ್ರೀನ್ ಕಾರಿಡಾರ್ ಬಂದಿದ್ದು, ಕಸಿ ಮಾಡಲು ಹೃದಯ ರವಾನೆ ಮಾಡಲಾಗಿದೆ! ಕೇವಲ 30 ನಿಮಿಷಗಳಲ್ಲಿ ಹೃದಯ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆ ತಲುಪಿದೆ.

ಈ ಘಟನೆ ನಡೆದಿದ್ದು ಹೈದರಾಬಾದ್​​ನಲ್ಲಿ. ಎಲ್​ಬಿ ನಗರದ ಕಾಮಿನೇನಿ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ. ಈತನ ಹೃದಯವನ್ನು ಜುಬಿಲಿ ಹಿಲ್ಸ್​ನ ಅಪೊಲೊ ಆಸ್ಪತ್ರೆಗಳಿಗೆ ಕಸಿ ಮಾಡಲು ರವಾನೆ ಮಾಡಬೇಕಿತ್ತು. ಎರಡೂ ಆಸ್ಪತ್ರೆಗಳ ನಡುವಿನ ಅಂತರ 21 ಕಿ.ಮೀ. ರಸ್ತೆಯಲ್ಲಿ ಹೋದರೆ ಏನಿಲ್ಲವೆಂದರೂ ಒಂದೂವರೆ ಗಂಟೆ ಬೇಕು. ಹೀಗಾಗಿ, ಅಲ್ಲಿರುವ ವೈದ್ಯರು ಮೆಟ್ರೋ ಮೂಲಕ ಹೃದಯ ಸಾಗಿಸಲು ಮುಂದಾಗಿದ್ದರು.

ಎಲ್​ಬಿ ನಗರದ ಸಮೀಪ ಇರುವ ನಾಗೋಲ್ ಮೆಟ್ರೊ ನಿಲ್ದಾಣದಿಂದ ಹೃದಯವನ್ನು ಜುಬಿಲಿ ಹಿಲ್ಸ್​ಗೆ ತೆಗೆದುಕೊಂಡು ಹೋಗಲಾಗಿತ್ತು. ಈ ಮೆಟ್ರೋ ಒಂದೇ ಒಂದು ಕಡೆಯೂ ನಿಲ್ಲದೆ ನೇರವಾಗಿ ಜುಬಿಲಿ ಹಿಲ್ಸ್ ತಲುಪಿದೆ. ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಹೃದಯವನ್ನು ಅಪೊಲೊ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೇವಲ 30 ನಿಮಿಷಗಳಲ್ಲಿ ಈ ಹೃದಯ ಆಸ್ಪತ್ರೆ ತಲುಪಿದೆ!

ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ನಿವೃತ್ತರಾದ ಮರುದಿನವೇ.. ಕೋಲಾರದ ಯೋಧ ಹೃದಯಾಘಾತದಿಂದ ಸಾವು

Published On - 6:50 pm, Tue, 2 February 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!