AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?

ಹೃದಯವನ್ನು ಸಾಗಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?
ಮೆಟ್ರೋ ಮೂಲಕ ಸಾಗಿಸಾದ ಹೃದಯ
Follow us
ರಾಜೇಶ್ ದುಗ್ಗುಮನೆ
|

Updated on:Feb 02, 2021 | 6:52 PM

ಆರೋಗ್ಯ ತುರ್ತು ಸೇವೆ ಸಮಯದಲ್ಲಿ ಗ್ರೀನ್ ಕಾರಿಡಾರ್ (ಜೀರೋ ಟ್ರಾಫಿಕ್​ ರಸ್ತೆ) ಮೂಲಕ ವ್ಯಕ್ತಿ ಅಥವಾ ವ್ಯಕ್ತಿಯ ಅಂಗವನ್ನು ಆಸ್ಪತ್ರೆಗೆ ಸಾಗಿಸಲಾಗುತ್ತದೆ.  ಈಗ ಮೆಟ್ರೋಗೂ ಗ್ರೀನ್ ಕಾರಿಡಾರ್ ಬಂದಿದ್ದು, ಕಸಿ ಮಾಡಲು ಹೃದಯ ರವಾನೆ ಮಾಡಲಾಗಿದೆ! ಕೇವಲ 30 ನಿಮಿಷಗಳಲ್ಲಿ ಹೃದಯ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆ ತಲುಪಿದೆ.

ಈ ಘಟನೆ ನಡೆದಿದ್ದು ಹೈದರಾಬಾದ್​​ನಲ್ಲಿ. ಎಲ್​ಬಿ ನಗರದ ಕಾಮಿನೇನಿ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ. ಈತನ ಹೃದಯವನ್ನು ಜುಬಿಲಿ ಹಿಲ್ಸ್​ನ ಅಪೊಲೊ ಆಸ್ಪತ್ರೆಗಳಿಗೆ ಕಸಿ ಮಾಡಲು ರವಾನೆ ಮಾಡಬೇಕಿತ್ತು. ಎರಡೂ ಆಸ್ಪತ್ರೆಗಳ ನಡುವಿನ ಅಂತರ 21 ಕಿ.ಮೀ. ರಸ್ತೆಯಲ್ಲಿ ಹೋದರೆ ಏನಿಲ್ಲವೆಂದರೂ ಒಂದೂವರೆ ಗಂಟೆ ಬೇಕು. ಹೀಗಾಗಿ, ಅಲ್ಲಿರುವ ವೈದ್ಯರು ಮೆಟ್ರೋ ಮೂಲಕ ಹೃದಯ ಸಾಗಿಸಲು ಮುಂದಾಗಿದ್ದರು.

ಎಲ್​ಬಿ ನಗರದ ಸಮೀಪ ಇರುವ ನಾಗೋಲ್ ಮೆಟ್ರೊ ನಿಲ್ದಾಣದಿಂದ ಹೃದಯವನ್ನು ಜುಬಿಲಿ ಹಿಲ್ಸ್​ಗೆ ತೆಗೆದುಕೊಂಡು ಹೋಗಲಾಗಿತ್ತು. ಈ ಮೆಟ್ರೋ ಒಂದೇ ಒಂದು ಕಡೆಯೂ ನಿಲ್ಲದೆ ನೇರವಾಗಿ ಜುಬಿಲಿ ಹಿಲ್ಸ್ ತಲುಪಿದೆ. ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಹೃದಯವನ್ನು ಅಪೊಲೊ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೇವಲ 30 ನಿಮಿಷಗಳಲ್ಲಿ ಈ ಹೃದಯ ಆಸ್ಪತ್ರೆ ತಲುಪಿದೆ!

ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ನಿವೃತ್ತರಾದ ಮರುದಿನವೇ.. ಕೋಲಾರದ ಯೋಧ ಹೃದಯಾಘಾತದಿಂದ ಸಾವು

Published On - 6:50 pm, Tue, 2 February 21

ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್