AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?

ಹೃದಯವನ್ನು ಸಾಗಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?
ಮೆಟ್ರೋ ಮೂಲಕ ಸಾಗಿಸಾದ ಹೃದಯ
ರಾಜೇಶ್ ದುಗ್ಗುಮನೆ
|

Updated on:Feb 02, 2021 | 6:52 PM

Share

ಆರೋಗ್ಯ ತುರ್ತು ಸೇವೆ ಸಮಯದಲ್ಲಿ ಗ್ರೀನ್ ಕಾರಿಡಾರ್ (ಜೀರೋ ಟ್ರಾಫಿಕ್​ ರಸ್ತೆ) ಮೂಲಕ ವ್ಯಕ್ತಿ ಅಥವಾ ವ್ಯಕ್ತಿಯ ಅಂಗವನ್ನು ಆಸ್ಪತ್ರೆಗೆ ಸಾಗಿಸಲಾಗುತ್ತದೆ.  ಈಗ ಮೆಟ್ರೋಗೂ ಗ್ರೀನ್ ಕಾರಿಡಾರ್ ಬಂದಿದ್ದು, ಕಸಿ ಮಾಡಲು ಹೃದಯ ರವಾನೆ ಮಾಡಲಾಗಿದೆ! ಕೇವಲ 30 ನಿಮಿಷಗಳಲ್ಲಿ ಹೃದಯ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆ ತಲುಪಿದೆ.

ಈ ಘಟನೆ ನಡೆದಿದ್ದು ಹೈದರಾಬಾದ್​​ನಲ್ಲಿ. ಎಲ್​ಬಿ ನಗರದ ಕಾಮಿನೇನಿ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ. ಈತನ ಹೃದಯವನ್ನು ಜುಬಿಲಿ ಹಿಲ್ಸ್​ನ ಅಪೊಲೊ ಆಸ್ಪತ್ರೆಗಳಿಗೆ ಕಸಿ ಮಾಡಲು ರವಾನೆ ಮಾಡಬೇಕಿತ್ತು. ಎರಡೂ ಆಸ್ಪತ್ರೆಗಳ ನಡುವಿನ ಅಂತರ 21 ಕಿ.ಮೀ. ರಸ್ತೆಯಲ್ಲಿ ಹೋದರೆ ಏನಿಲ್ಲವೆಂದರೂ ಒಂದೂವರೆ ಗಂಟೆ ಬೇಕು. ಹೀಗಾಗಿ, ಅಲ್ಲಿರುವ ವೈದ್ಯರು ಮೆಟ್ರೋ ಮೂಲಕ ಹೃದಯ ಸಾಗಿಸಲು ಮುಂದಾಗಿದ್ದರು.

ಎಲ್​ಬಿ ನಗರದ ಸಮೀಪ ಇರುವ ನಾಗೋಲ್ ಮೆಟ್ರೊ ನಿಲ್ದಾಣದಿಂದ ಹೃದಯವನ್ನು ಜುಬಿಲಿ ಹಿಲ್ಸ್​ಗೆ ತೆಗೆದುಕೊಂಡು ಹೋಗಲಾಗಿತ್ತು. ಈ ಮೆಟ್ರೋ ಒಂದೇ ಒಂದು ಕಡೆಯೂ ನಿಲ್ಲದೆ ನೇರವಾಗಿ ಜುಬಿಲಿ ಹಿಲ್ಸ್ ತಲುಪಿದೆ. ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಹೃದಯವನ್ನು ಅಪೊಲೊ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೇವಲ 30 ನಿಮಿಷಗಳಲ್ಲಿ ಈ ಹೃದಯ ಆಸ್ಪತ್ರೆ ತಲುಪಿದೆ!

ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ನಿವೃತ್ತರಾದ ಮರುದಿನವೇ.. ಕೋಲಾರದ ಯೋಧ ಹೃದಯಾಘಾತದಿಂದ ಸಾವು

Published On - 6:50 pm, Tue, 2 February 21

Follow Us
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?