AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದೂಗಳನ್ನು ಮರಳಿ ತನ್ನಿ’ ಎಂದ ರಾಹುಲ್ ಗಾಂಧಿ ಭಾಷಣ ವಿರುದ್ಧ ಒವೈಸಿ ವಾಗ್ದಾಳಿ

Asaduddin Owaisi "ರಾಹುಲ್ ಮತ್ತು ಕಾಂಗ್ರೆಸ್ ಹಿಂದುತ್ವದ ನೆಲಕ್ಕೆ ಗೊಬ್ಬರ ಹಾಕಿದರು. ಈಗ ಅವರು ಬಹುಮತವನ್ನು ಕೊಯ್ಲು ಮಾಡಲು ಪ್ರಯತ್ನಿಸುತ್ತಿದ್ದಾರೆ. 2021 ರಲ್ಲಿ ಹಿಂದೂಗಳನ್ನು ಅಧಿಕಾರಕ್ಕೆ ತರುವುದು ಜಾತ್ಯತೀತ ಅಜೆಂಡಾ. ವಾಹ್

‘ಹಿಂದೂಗಳನ್ನು ಮರಳಿ ತನ್ನಿ’ ಎಂದ ರಾಹುಲ್ ಗಾಂಧಿ ಭಾಷಣ ವಿರುದ್ಧ ಒವೈಸಿ ವಾಗ್ದಾಳಿ
ಅಸಾದುದ್ದೀನ್ ಒವೈಸಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 12, 2021 | 7:11 PM

Share

ದೆಹಲಿ: ಹಿಂದೂಗಳನ್ನು ವೈಭವಕ್ಕೆ ಮರಳಿ ತರುವುದು ಹೇಗೆ ಎಂಬುದು 2021ರ ಜಾತ್ಯತೀತ ಅಜೆಂಡಾ ಆಗುತ್ತದೆ ಎಂದು ಪ್ರಶ್ನಿಸಿರುವ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin owaisi) ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಜೈಪುರ ಭಾಷಣವನ್ನು ತರಾಟೆಗೆ ತೆಗೆದುಕೊಂಡರು. ಇದರಲ್ಲಿ ಗಾಂಧಿ ಭಾರತ ಹಿಂದೂಗಳ ದೇಶ, ಹಿಂದುತ್ವವಾದಿಗಳದಲ್ಲ ಎಂದು ಹೇಳಿದ್ದರು. “ರಾಹುಲ್ ಮತ್ತು ಕಾಂಗ್ರೆಸ್ ಹಿಂದುತ್ವದ ನೆಲಕ್ಕೆ ಗೊಬ್ಬರ ಹಾಕಿದರು. ಈಗ ಅವರು ಬಹುಮತವನ್ನು ಕೊಯ್ಲು ಮಾಡಲು ಪ್ರಯತ್ನಿಸುತ್ತಿದ್ದಾರೆ. 2021 ರಲ್ಲಿ ಹಿಂದೂಗಳನ್ನು ಅಧಿಕಾರಕ್ಕೆ ತರುವುದು ಜಾತ್ಯತೀತ ಅಜೆಂಡಾ. ವಾಹ್! ಭಾರತವು ಎಲ್ಲಾ ಭಾರತೀಯರಿಗೆ ಸೇರಿದೆ. ಹಿಂದೂಗಳಿಗೆ ಮಾತ್ರವಲ್ಲ. ಭಾರತವು ಎಲ್ಲಾ ನಂಬಿಕೆಯ ಜನರಿಗೆ ಮತ್ತು ನಂಬಿಕೆ ಇಲ್ಲದವರಿಗೆ ಸೇರಿದೆ’ ಎಂದು ಒವೈಸಿ ಟ್ವೀಟ್ ಮಾಡಿದ್ದಾರೆ. ಸಲ್ಮಾನ್ ಖುರ್ಷಿದ್ ಅವರು ಅಯೋಧ್ಯೆ ತೀರ್ಪಿನ ಹೊಸ ಪುಸ್ತಕದಲ್ಲಿ ಹಿಂದುತ್ವದ ಬಗ್ಗೆ ಮಾಡಿದ ಕಾಮೆಂಟ್‌ಗೆ ಕಾಂಗ್ರೆಸ್ ಟೀಕೆಗೆ ಗುರಿಯಾಗುತ್ತು. ಇದು ಪಕ್ಷದ ಹಿರಿಯ ನಾಯಕರಲ್ಲಿ ಭಿನ್ನಾಭಿಪ್ರಾಯವನ್ನೂ ಸೃಷ್ಟಿಸಿದೆ. ಹಿಂದು ಮತ್ತು ಹಿಂದುತ್ವದ ನಡುವೆ ಪ್ರತ್ಯೇಕ ಗೆರೆ ಎಳೆದಿರುವ ರಾಹುಲ್ ಗಾಂಧಿ, ಎಲ್ಲ ಧರ್ಮಗಳನ್ನು ಗೌರವಿಸುವ, ಎಲ್ಲರನ್ನು ಅಪ್ಪಿಕೊಳ್ಳುವ ಮತ್ತು ಯಾವುದಕ್ಕೂ ಭಯಪಡದವನೇ ಹಿಂದೂ ಎಂದು ಹೇಳಿದ್ದಾರೆ. “ಯಾವುದೇ ಗ್ರಂಥವನ್ನು ಓದಿ ಗೀತೆ, ಉಪನಿಷತ್ತು, ರಾಮಾಯಣ, ಮಹಾಭಾರತಗಳಲ್ಲಿ ಇರಲಿ. ಬಡವರು ಮತ್ತು ದುರ್ಬಲರು ತುಳಿತಕ್ಕೊಳಗಾಗಬೇಕು ಎಂದು ಎಲ್ಲಿ ಬರೆಯಲಾಗಿದೆ? ಎದು ರಾಹುಲ್ ಭಾಷಣದಲ್ಲಿ ಪ್ರಶ್ನಿಸಿದ್ದರು.

“ದೇಶದಲ್ಲಿ ಹಣದುಬ್ಬರವಿದ್ದರೆ ಮತ್ತು ನರಳುತ್ತಿದ್ದರೆ, ಇದನ್ನು ಹಿಂದುತ್ವವಾದಿಗಳು ಮಾಡಿದ್ದಾರೆ, ಹಿಂದುತ್ವವಾದಿಗಳು ಯಾವುದೇ ಬೆಲೆಗೆ ಅಧಿಕಾರವನ್ನು ಬಯಸುತ್ತಾರೆ” ಎಂದು ರಾಹುಲ್ ಹೇಳಿದರು. ಮಹಾತ್ಮ ಗಾಂಧಿ ಹಿಂದೂ ಮತ್ತು ಗೋಡ್ಸೆ ಹಿಂದುತ್ವವಾದಿ, ಒಬ್ಬ ಹಿಂದೂ ನಿರಂತರವಾಗಿ ಸತ್ಯವನ್ನು ಹುಡುಕುತ್ತಾನೆ ಮತ್ತು ಮಹಾತ್ಮ ಗಾಂಧಿಯಂತೆ ತನ್ನ ಇಡೀ ಜೀವನವನ್ನು ಹುಡುಕಾಟಕ್ಕಾಗಿ ವಿನಿಯೋಗಿಸುತ್ತಾನೆ ಮತ್ತು ಹಿಂದುತ್ವವಾದಿ ತನ್ನ ಇಡೀ ಜೀವನವನ್ನು ಅಧಿಕಾರಕ್ಕಾಗಿ ಕಳೆಯುತ್ತಾನೆ ಎಂದು ವಿವರಿಸಿದರು. ಹಿಂದುತ್ವವಾದಿಯ ಮಾರ್ಗ ‘ಸತ್ತಾ’ಗ್ರಹವೇ ಹೊರತು ಸತ್ಯಾಗ್ರಹವಲ್ಲ. ನಾನು ಹಿಂದುವೇ ಹೊರತು ಹಿಂದುತ್ವವಾದಿಯಲ್ಲ ಎಂದು ಅವರು ಹೇಳಿದರು.

ಶ್ರೀಕೃಷ್ಣನು ಅರ್ಜುನನಿಗೆ ಅಧಿಕಾರಕ್ಕಾಗಿ ಸಹೋದರರನ್ನು ಕೊಲ್ಲಲು ಹೇಳಲಿಲ್ಲ. ಸಾಯಬೇಕಾದರೂ ಸತ್ಯಕ್ಕಾಗಿ ಹೋರಾಡಿ ಎಂದು ಗೀತೆಯಲ್ಲಿ ಬರೆಯಲಾಗಿದೆ ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ: ನಾನು ಹಿಂದೂ, ಹಿಂದುತ್ವವಾದಿ ಅಲ್ಲ: ಜೈಪುರದಲ್ಲಿ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ