AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಪ್ರಪ್ರಥಮ ಬಾರಿಗೆ ಹೈದರಾಬಾದ್​ನಲ್ಲಿಅಸ್ತಿತ್ವಕ್ಕೆ ಬಂತು ನೀರಾ ಕೆಫೆ

ಹೈದರಾಬಾದ್​ನ ಹುಸೇನ್ ಸಾಗರ ನೆಕ್ಲೆಸ್ ರಸ್ತೆಯಲ್ಲಿರುವ ನೀರಾ ಕೆಫೆಯನ್ನು ತೆಲಂಗಾಣ ಸಚಿವ ವಿ. ಶ್ರೀನಿವಾಸ್ ಗೌಡ್ ಮತ್ತು ತಲಸಾನಿ ಶ್ರೀನಿವಾಸ್ ಯಾದವ್ ಬುಧವಾರ ಉದ್ಘಾಟಿಸಿದರು.

Hyderabad: ಪ್ರಪ್ರಥಮ ಬಾರಿಗೆ ಹೈದರಾಬಾದ್​ನಲ್ಲಿಅಸ್ತಿತ್ವಕ್ಕೆ ಬಂತು ನೀರಾ ಕೆಫೆ
ನೀರಾ ಕೆಫೆ ಉದ್ಘಾಟಿಸಿದ ಗಣ್ಯರು
ಗಂಗಾಧರ​ ಬ. ಸಾಬೋಜಿ
|

Updated on:May 03, 2023 | 9:18 PM

Share

ಹೈದರಾಬಾದ್: ನಗರದ ಹುಸೇನ್ ಸಾಗರ ನೆಕ್ಲೆಸ್ ರಸ್ತೆಯಲ್ಲಿರುವ ನೀರಾ ಕೆಫೆಯನ್ನು (Neera Cafe) ತೆಲಂಗಾಣ ಸಚಿವ ವಿ. ಶ್ರೀನಿವಾಸ್ ಗೌಡ್ ಮತ್ತು ತಲಸಾನಿ ಶ್ರೀನಿವಾಸ್ ಯಾದವ್ ಬುಧವಾರ ಉದ್ಘಾಟಿಸಿದರು. ಈ ನೀರಾ ಕೆಫೆಯನ್ನು ತೆಲಂಗಾಣ ಸರ್ಕಾರವು 13 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದೆ. ಉದ್ಘಾಟನೆ ಬಳಿಕ ಮಾತನಾಡಿದ ಸಚಿವ ಶ್ರೀನಿವಾಸ್ ಗೌಡ್​​, ನೀರಾ ಎಂದರೆ ಆಲ್ಕೋಹಾಲ್ ಎಂದು ಕೆಲವರಲ್ಲಿ ತಪ್ಪು ಮಾಹಿತಿ ಇದೆ. ನೀರಾ ಬಹು ಪೋಷಕಾಂಶಗಳಿಂದ ಕೂಡಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಂತಹ ಕೆಫೆ ಇಲ್ಲ. ಇದು ಆತ್ಮಗೌರವದ ಸಂಕೇತವಾಗಿದೆ ಎಂದು ಹೇಳಿದ್ದಾರೆ.

ತಾಳೆ ಮರಗಳಿಂದ ಸುತ್ತುವರೆದ ಕೆಫೆ

23 ಜುಲೈ 2020 ರಂದು ನೆಕ್ಲೆಸ್ ರಸ್ತೆಯಲ್ಲಿ ನೀರಾ ಕೆಫೆಗೆ ಅಡಿಪಾಯ ಹಾಕಲಾಗಿತ್ತು. ಇದು ಸಂಪೂರ್ಣವಾಗಿ ಸರ್ಕಾರದಿಂದ ನಡೆಸಲ್ಪಡುತ್ತಿದ್ದು, ರೆಸ್ಟೋರೆಂಟ್​ನಂತೆ ವಿನ್ಯಾಸಗೊಳಿಸಲಾಗಿದೆ. ನೆಲ ಮಹಡಿಯಲ್ಲಿ ಫುಡ್ ಕೋರ್ಟ್ ಇದ್ದರೆ, ಕೆಫೆ ಮೊದಲ ಮಹಡಿಯಲ್ಲಿದೆ. ಒಟ್ಟು ಏಳು ಮಳಿಗೆಗಳಿವೆ. ಒಂದೇ ಸಮಯದಲ್ಲಿ ಸುಮಾರು 300-500 ಜನರು ಕುಳಿತುಕೊಳ್ಳುವ ಸಾಮರ್ಥವನ್ನು ಹೊಂದಿದೆ. ವಿಶೇಷವೆಂದರೆ ಕೆಫೆಯೂ ತಾಳೆ ಮರಗಳಿಂದ ಸುತ್ತುವರೆದಿದ್ದು, ಛಾವಣಿಯು ತಾಳೆ ಮರದ ಆಕಾರದಲ್ಲಿದೆ.

ಇದನ್ನೂ ಓದಿ: ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ

ತೆಲಂಗಾಣ ಸಂಸ್ಕೃತಿ ಪ್ರತಿನಿಧಿಸುವ ಉದ್ದೇಶ

ತೆಲಂಗಾಣ ಸಂಸ್ಕೃತಿಯನ್ನು ಪ್ರತಿನಿಧಿಸುವ ಉದ್ದೇಶ ಮತ್ತು ರಾಜ್ಯದ ಕಲ್ಯಾಣಕ್ಕಾಗಿ ವಿಶಿಷ್ಟವಾದ ಕೆಫೆಯನ್ನು ಸ್ಥಾಪಿಸಲಾಗಿದೆ. ಸಾಮಾನ್ಯವಾಗಿ ತೆಲಂಗಾಣದಲ್ಲಿ ಜನರು ನೀರಾವನ್ನು ಸೇವಿಸುತ್ತಾರೆ. ಇದರಲ್ಲಿ ಮೆಗ್ನೀಸಿಮ್​, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪ್ರೊಟೀನ್​, ಸಕ್ಕರೆ ಮತ್ತು ವಿಟಮಿನ್​ ಸಿ ಇದ್ದು, ಆರೋಗ್ಯಕವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: Supriya Sule: ಶರದ್ ಪವಾರ್ ರಾಜೀನಾಮೆ; ಸುಪ್ರಿಯಾ ಸುಳೆ ಎನ್‌ಸಿಪಿಯ ನೂತನ ಮುಖ್ಯಸ್ಥರಾಗುವ ಸಾಧ್ಯತೆ?

ನೀರಾವನ್ನು ಕಳ್ಳಿ ತಾಳೆಗಳಿಂದ ಬೇರ್ಪಡಿಸಲಾಗುತ್ತದೆ. ಅದರಲ್ಲಿಯೂ ಬೆಳಿಗ್ಗೆ 7 ಗಂಟೆಯ ಮೊದಲು ಹೊರತೆಗೆಯಲಾಗುತ್ತದೆ. ಬಳಿಕ ಕೆಲವು ಗಂಟೆಗಳ ಕಾಲ ಸಾಮಾನ್ಯ ತಾಪಮಾನ ಹೊಂದಿರುವ ಕೋಣೆಯಲ್ಲಿ ಇರಿಸಲಾಗುತ್ತದೆ. ಬಳಿಕ ಇದು ಕಳ್ಳಿಯಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:17 pm, Wed, 3 May 23

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ