AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಪ್ರಪ್ರಥಮ ಬಾರಿಗೆ ಹೈದರಾಬಾದ್​ನಲ್ಲಿಅಸ್ತಿತ್ವಕ್ಕೆ ಬಂತು ನೀರಾ ಕೆಫೆ

ಹೈದರಾಬಾದ್​ನ ಹುಸೇನ್ ಸಾಗರ ನೆಕ್ಲೆಸ್ ರಸ್ತೆಯಲ್ಲಿರುವ ನೀರಾ ಕೆಫೆಯನ್ನು ತೆಲಂಗಾಣ ಸಚಿವ ವಿ. ಶ್ರೀನಿವಾಸ್ ಗೌಡ್ ಮತ್ತು ತಲಸಾನಿ ಶ್ರೀನಿವಾಸ್ ಯಾದವ್ ಬುಧವಾರ ಉದ್ಘಾಟಿಸಿದರು.

Hyderabad: ಪ್ರಪ್ರಥಮ ಬಾರಿಗೆ ಹೈದರಾಬಾದ್​ನಲ್ಲಿಅಸ್ತಿತ್ವಕ್ಕೆ ಬಂತು ನೀರಾ ಕೆಫೆ
ನೀರಾ ಕೆಫೆ ಉದ್ಘಾಟಿಸಿದ ಗಣ್ಯರು
ಗಂಗಾಧರ​ ಬ. ಸಾಬೋಜಿ
|

Updated on:May 03, 2023 | 9:18 PM

Share

ಹೈದರಾಬಾದ್: ನಗರದ ಹುಸೇನ್ ಸಾಗರ ನೆಕ್ಲೆಸ್ ರಸ್ತೆಯಲ್ಲಿರುವ ನೀರಾ ಕೆಫೆಯನ್ನು (Neera Cafe) ತೆಲಂಗಾಣ ಸಚಿವ ವಿ. ಶ್ರೀನಿವಾಸ್ ಗೌಡ್ ಮತ್ತು ತಲಸಾನಿ ಶ್ರೀನಿವಾಸ್ ಯಾದವ್ ಬುಧವಾರ ಉದ್ಘಾಟಿಸಿದರು. ಈ ನೀರಾ ಕೆಫೆಯನ್ನು ತೆಲಂಗಾಣ ಸರ್ಕಾರವು 13 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದೆ. ಉದ್ಘಾಟನೆ ಬಳಿಕ ಮಾತನಾಡಿದ ಸಚಿವ ಶ್ರೀನಿವಾಸ್ ಗೌಡ್​​, ನೀರಾ ಎಂದರೆ ಆಲ್ಕೋಹಾಲ್ ಎಂದು ಕೆಲವರಲ್ಲಿ ತಪ್ಪು ಮಾಹಿತಿ ಇದೆ. ನೀರಾ ಬಹು ಪೋಷಕಾಂಶಗಳಿಂದ ಕೂಡಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಂತಹ ಕೆಫೆ ಇಲ್ಲ. ಇದು ಆತ್ಮಗೌರವದ ಸಂಕೇತವಾಗಿದೆ ಎಂದು ಹೇಳಿದ್ದಾರೆ.

ತಾಳೆ ಮರಗಳಿಂದ ಸುತ್ತುವರೆದ ಕೆಫೆ

23 ಜುಲೈ 2020 ರಂದು ನೆಕ್ಲೆಸ್ ರಸ್ತೆಯಲ್ಲಿ ನೀರಾ ಕೆಫೆಗೆ ಅಡಿಪಾಯ ಹಾಕಲಾಗಿತ್ತು. ಇದು ಸಂಪೂರ್ಣವಾಗಿ ಸರ್ಕಾರದಿಂದ ನಡೆಸಲ್ಪಡುತ್ತಿದ್ದು, ರೆಸ್ಟೋರೆಂಟ್​ನಂತೆ ವಿನ್ಯಾಸಗೊಳಿಸಲಾಗಿದೆ. ನೆಲ ಮಹಡಿಯಲ್ಲಿ ಫುಡ್ ಕೋರ್ಟ್ ಇದ್ದರೆ, ಕೆಫೆ ಮೊದಲ ಮಹಡಿಯಲ್ಲಿದೆ. ಒಟ್ಟು ಏಳು ಮಳಿಗೆಗಳಿವೆ. ಒಂದೇ ಸಮಯದಲ್ಲಿ ಸುಮಾರು 300-500 ಜನರು ಕುಳಿತುಕೊಳ್ಳುವ ಸಾಮರ್ಥವನ್ನು ಹೊಂದಿದೆ. ವಿಶೇಷವೆಂದರೆ ಕೆಫೆಯೂ ತಾಳೆ ಮರಗಳಿಂದ ಸುತ್ತುವರೆದಿದ್ದು, ಛಾವಣಿಯು ತಾಳೆ ಮರದ ಆಕಾರದಲ್ಲಿದೆ.

ಇದನ್ನೂ ಓದಿ: ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ

ತೆಲಂಗಾಣ ಸಂಸ್ಕೃತಿ ಪ್ರತಿನಿಧಿಸುವ ಉದ್ದೇಶ

ತೆಲಂಗಾಣ ಸಂಸ್ಕೃತಿಯನ್ನು ಪ್ರತಿನಿಧಿಸುವ ಉದ್ದೇಶ ಮತ್ತು ರಾಜ್ಯದ ಕಲ್ಯಾಣಕ್ಕಾಗಿ ವಿಶಿಷ್ಟವಾದ ಕೆಫೆಯನ್ನು ಸ್ಥಾಪಿಸಲಾಗಿದೆ. ಸಾಮಾನ್ಯವಾಗಿ ತೆಲಂಗಾಣದಲ್ಲಿ ಜನರು ನೀರಾವನ್ನು ಸೇವಿಸುತ್ತಾರೆ. ಇದರಲ್ಲಿ ಮೆಗ್ನೀಸಿಮ್​, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪ್ರೊಟೀನ್​, ಸಕ್ಕರೆ ಮತ್ತು ವಿಟಮಿನ್​ ಸಿ ಇದ್ದು, ಆರೋಗ್ಯಕವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: Supriya Sule: ಶರದ್ ಪವಾರ್ ರಾಜೀನಾಮೆ; ಸುಪ್ರಿಯಾ ಸುಳೆ ಎನ್‌ಸಿಪಿಯ ನೂತನ ಮುಖ್ಯಸ್ಥರಾಗುವ ಸಾಧ್ಯತೆ?

ನೀರಾವನ್ನು ಕಳ್ಳಿ ತಾಳೆಗಳಿಂದ ಬೇರ್ಪಡಿಸಲಾಗುತ್ತದೆ. ಅದರಲ್ಲಿಯೂ ಬೆಳಿಗ್ಗೆ 7 ಗಂಟೆಯ ಮೊದಲು ಹೊರತೆಗೆಯಲಾಗುತ್ತದೆ. ಬಳಿಕ ಕೆಲವು ಗಂಟೆಗಳ ಕಾಲ ಸಾಮಾನ್ಯ ತಾಪಮಾನ ಹೊಂದಿರುವ ಕೋಣೆಯಲ್ಲಿ ಇರಿಸಲಾಗುತ್ತದೆ. ಬಳಿಕ ಇದು ಕಳ್ಳಿಯಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:17 pm, Wed, 3 May 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!