Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಪ್ರಪ್ರಥಮ ಬಾರಿಗೆ ಹೈದರಾಬಾದ್​ನಲ್ಲಿಅಸ್ತಿತ್ವಕ್ಕೆ ಬಂತು ನೀರಾ ಕೆಫೆ

ಹೈದರಾಬಾದ್​ನ ಹುಸೇನ್ ಸಾಗರ ನೆಕ್ಲೆಸ್ ರಸ್ತೆಯಲ್ಲಿರುವ ನೀರಾ ಕೆಫೆಯನ್ನು ತೆಲಂಗಾಣ ಸಚಿವ ವಿ. ಶ್ರೀನಿವಾಸ್ ಗೌಡ್ ಮತ್ತು ತಲಸಾನಿ ಶ್ರೀನಿವಾಸ್ ಯಾದವ್ ಬುಧವಾರ ಉದ್ಘಾಟಿಸಿದರು.

Hyderabad: ಪ್ರಪ್ರಥಮ ಬಾರಿಗೆ ಹೈದರಾಬಾದ್​ನಲ್ಲಿಅಸ್ತಿತ್ವಕ್ಕೆ ಬಂತು ನೀರಾ ಕೆಫೆ
ನೀರಾ ಕೆಫೆ ಉದ್ಘಾಟಿಸಿದ ಗಣ್ಯರು
Follow us
ಗಂಗಾಧರ​ ಬ. ಸಾಬೋಜಿ
|

Updated on:May 03, 2023 | 9:18 PM

ಹೈದರಾಬಾದ್: ನಗರದ ಹುಸೇನ್ ಸಾಗರ ನೆಕ್ಲೆಸ್ ರಸ್ತೆಯಲ್ಲಿರುವ ನೀರಾ ಕೆಫೆಯನ್ನು (Neera Cafe) ತೆಲಂಗಾಣ ಸಚಿವ ವಿ. ಶ್ರೀನಿವಾಸ್ ಗೌಡ್ ಮತ್ತು ತಲಸಾನಿ ಶ್ರೀನಿವಾಸ್ ಯಾದವ್ ಬುಧವಾರ ಉದ್ಘಾಟಿಸಿದರು. ಈ ನೀರಾ ಕೆಫೆಯನ್ನು ತೆಲಂಗಾಣ ಸರ್ಕಾರವು 13 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದೆ. ಉದ್ಘಾಟನೆ ಬಳಿಕ ಮಾತನಾಡಿದ ಸಚಿವ ಶ್ರೀನಿವಾಸ್ ಗೌಡ್​​, ನೀರಾ ಎಂದರೆ ಆಲ್ಕೋಹಾಲ್ ಎಂದು ಕೆಲವರಲ್ಲಿ ತಪ್ಪು ಮಾಹಿತಿ ಇದೆ. ನೀರಾ ಬಹು ಪೋಷಕಾಂಶಗಳಿಂದ ಕೂಡಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಂತಹ ಕೆಫೆ ಇಲ್ಲ. ಇದು ಆತ್ಮಗೌರವದ ಸಂಕೇತವಾಗಿದೆ ಎಂದು ಹೇಳಿದ್ದಾರೆ.

ತಾಳೆ ಮರಗಳಿಂದ ಸುತ್ತುವರೆದ ಕೆಫೆ

23 ಜುಲೈ 2020 ರಂದು ನೆಕ್ಲೆಸ್ ರಸ್ತೆಯಲ್ಲಿ ನೀರಾ ಕೆಫೆಗೆ ಅಡಿಪಾಯ ಹಾಕಲಾಗಿತ್ತು. ಇದು ಸಂಪೂರ್ಣವಾಗಿ ಸರ್ಕಾರದಿಂದ ನಡೆಸಲ್ಪಡುತ್ತಿದ್ದು, ರೆಸ್ಟೋರೆಂಟ್​ನಂತೆ ವಿನ್ಯಾಸಗೊಳಿಸಲಾಗಿದೆ. ನೆಲ ಮಹಡಿಯಲ್ಲಿ ಫುಡ್ ಕೋರ್ಟ್ ಇದ್ದರೆ, ಕೆಫೆ ಮೊದಲ ಮಹಡಿಯಲ್ಲಿದೆ. ಒಟ್ಟು ಏಳು ಮಳಿಗೆಗಳಿವೆ. ಒಂದೇ ಸಮಯದಲ್ಲಿ ಸುಮಾರು 300-500 ಜನರು ಕುಳಿತುಕೊಳ್ಳುವ ಸಾಮರ್ಥವನ್ನು ಹೊಂದಿದೆ. ವಿಶೇಷವೆಂದರೆ ಕೆಫೆಯೂ ತಾಳೆ ಮರಗಳಿಂದ ಸುತ್ತುವರೆದಿದ್ದು, ಛಾವಣಿಯು ತಾಳೆ ಮರದ ಆಕಾರದಲ್ಲಿದೆ.

ಇದನ್ನೂ ಓದಿ: ಕಿಂಗ್ ಚಾರ್ಲ್ಸ್ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳಲಿದ್ದಾರೆ ಮುಂಬೈ ಡಬ್ಬಾವಾಲಾಗಳು; ಅವರು ಕೊಡುವ ಸ್ಪೆಷಲ್ ಗಿಫ್ಟ್ ಹೀಗಿದೆ

ತೆಲಂಗಾಣ ಸಂಸ್ಕೃತಿ ಪ್ರತಿನಿಧಿಸುವ ಉದ್ದೇಶ

ತೆಲಂಗಾಣ ಸಂಸ್ಕೃತಿಯನ್ನು ಪ್ರತಿನಿಧಿಸುವ ಉದ್ದೇಶ ಮತ್ತು ರಾಜ್ಯದ ಕಲ್ಯಾಣಕ್ಕಾಗಿ ವಿಶಿಷ್ಟವಾದ ಕೆಫೆಯನ್ನು ಸ್ಥಾಪಿಸಲಾಗಿದೆ. ಸಾಮಾನ್ಯವಾಗಿ ತೆಲಂಗಾಣದಲ್ಲಿ ಜನರು ನೀರಾವನ್ನು ಸೇವಿಸುತ್ತಾರೆ. ಇದರಲ್ಲಿ ಮೆಗ್ನೀಸಿಮ್​, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪ್ರೊಟೀನ್​, ಸಕ್ಕರೆ ಮತ್ತು ವಿಟಮಿನ್​ ಸಿ ಇದ್ದು, ಆರೋಗ್ಯಕವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: Supriya Sule: ಶರದ್ ಪವಾರ್ ರಾಜೀನಾಮೆ; ಸುಪ್ರಿಯಾ ಸುಳೆ ಎನ್‌ಸಿಪಿಯ ನೂತನ ಮುಖ್ಯಸ್ಥರಾಗುವ ಸಾಧ್ಯತೆ?

ನೀರಾವನ್ನು ಕಳ್ಳಿ ತಾಳೆಗಳಿಂದ ಬೇರ್ಪಡಿಸಲಾಗುತ್ತದೆ. ಅದರಲ್ಲಿಯೂ ಬೆಳಿಗ್ಗೆ 7 ಗಂಟೆಯ ಮೊದಲು ಹೊರತೆಗೆಯಲಾಗುತ್ತದೆ. ಬಳಿಕ ಕೆಲವು ಗಂಟೆಗಳ ಕಾಲ ಸಾಮಾನ್ಯ ತಾಪಮಾನ ಹೊಂದಿರುವ ಕೋಣೆಯಲ್ಲಿ ಇರಿಸಲಾಗುತ್ತದೆ. ಬಳಿಕ ಇದು ಕಳ್ಳಿಯಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:17 pm, Wed, 3 May 23

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್