AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ಆಸೆಗಾಗಿ ಕಗ್ಗತ್ತಲಲ್ಲಿ ಕ್ಷುದ್ರಪೂಜೆ ಮಾಡಿದ ಗ್ಯಾಂಗ್ ಅರೆಸ್ಟ್

ಹೈದರಾಬಾದ್: ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ತೆರಳಿ ಸಂಕಷ್ಟ ಪರಿಹಾರಕ್ಕಾಗಿ ಬೇಡಿಕೊಂಡ್ರೆ ಸಮಸ್ಯೆ ಬಗೆಹರಿಯುತ್ತೆ ಅನ್ನೋದು ವಾಡಿಕೆ. ಇಂಥ ಪುಣ್ಯಕ್ಷೇತ್ರದಲ್ಲಿ ನಿಧಿಗಾಗಿ ಮಧ್ಯರಾತ್ರಿ ಪೂಜೆ ಮಾಡಲಾಗಿದೆ. ಅಲ್ಲಿ ನಡೆದ ಈ ಘಟನೆಯೊಂದು ಸ್ಥಳೀಯರನ್ನ ಬೆಚ್ಚಿಬೀಳುವಂತೆ ಮಾಡಿದೆ. ನಿಧಿ ಪಡೆಯಲು ಕಗ್ಗತ್ತಲ ಪೂಜೆ..! ಆಂಧ್ರಪ್ರದೇಶದಲ್ಲಿರುವ ಪುಣ್ಯಕ್ಷೇತ್ರ ಶ್ರೀಕಾಳಹಸ್ತಿಯಲ್ಲಿ ನಿಧಿಗಳ್ಳರ ಹಾವಳಿ ಜೋರಾಗಿದೆ. ಈಗ ಮತ್ತೊಂದು ಘಟನೆ ಜನರನ್ನ ಬೆಚ್ಚಿಬೀಳುವಂತೆ ಮಾಡಿದೆ. ಶ್ರೀಕಾಳಹಸ್ತಿ ಕಾಲಭೈರವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ನಿಧಿ ಆಸೆಗೆ ಕಗ್ಗತ್ತಲಲ್ಲಿ ಪೂಜೆ ಮಾಡುತ್ತಿದ್ದ ತಮಿಳುನಾಡು ಮೂಲದ ಗ್ಯಾಂಗ್ ಅರೆಸ್ಟ್ ಆಗಿದೆ. ಪೂಜೆ […]

ನಿಧಿ ಆಸೆಗಾಗಿ ಕಗ್ಗತ್ತಲಲ್ಲಿ ಕ್ಷುದ್ರಪೂಜೆ ಮಾಡಿದ ಗ್ಯಾಂಗ್ ಅರೆಸ್ಟ್
ಸಾಧು ಶ್ರೀನಾಥ್​
|

Updated on:Nov 28, 2019 | 6:37 AM

Share

ಹೈದರಾಬಾದ್: ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ತೆರಳಿ ಸಂಕಷ್ಟ ಪರಿಹಾರಕ್ಕಾಗಿ ಬೇಡಿಕೊಂಡ್ರೆ ಸಮಸ್ಯೆ ಬಗೆಹರಿಯುತ್ತೆ ಅನ್ನೋದು ವಾಡಿಕೆ. ಇಂಥ ಪುಣ್ಯಕ್ಷೇತ್ರದಲ್ಲಿ ನಿಧಿಗಾಗಿ ಮಧ್ಯರಾತ್ರಿ ಪೂಜೆ ಮಾಡಲಾಗಿದೆ. ಅಲ್ಲಿ ನಡೆದ ಈ ಘಟನೆಯೊಂದು ಸ್ಥಳೀಯರನ್ನ ಬೆಚ್ಚಿಬೀಳುವಂತೆ ಮಾಡಿದೆ.

ನಿಧಿ ಪಡೆಯಲು ಕಗ್ಗತ್ತಲ ಪೂಜೆ..! ಆಂಧ್ರಪ್ರದೇಶದಲ್ಲಿರುವ ಪುಣ್ಯಕ್ಷೇತ್ರ ಶ್ರೀಕಾಳಹಸ್ತಿಯಲ್ಲಿ ನಿಧಿಗಳ್ಳರ ಹಾವಳಿ ಜೋರಾಗಿದೆ. ಈಗ ಮತ್ತೊಂದು ಘಟನೆ ಜನರನ್ನ ಬೆಚ್ಚಿಬೀಳುವಂತೆ ಮಾಡಿದೆ. ಶ್ರೀಕಾಳಹಸ್ತಿ ಕಾಲಭೈರವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ನಿಧಿ ಆಸೆಗೆ ಕಗ್ಗತ್ತಲಲ್ಲಿ ಪೂಜೆ ಮಾಡುತ್ತಿದ್ದ ತಮಿಳುನಾಡು ಮೂಲದ ಗ್ಯಾಂಗ್ ಅರೆಸ್ಟ್ ಆಗಿದೆ.

ಪೂಜೆ ಮಾಡುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಅಲರ್ಟ್ ಆದ ಪೊಲೀಸ್ರು ಕ್ಷುದ್ರಪೂಜೆ ನೆರವೇರಿಸುತ್ತಿದ್ದವರನ್ನ ಬಂಧಿಸಿದ್ದಾರೆ.

ಕ್ಷುದ್ರಪೂಜೆ ಮಾಡಲು ಅಧಿಕಾರಿಗಳ ಬೆಂಬಲ..? ಪಿಡಿಒ ನೀಡಿದ ದೂರಿನ ಅನ್ವಯ ಕಾಳಹಸ್ತಿ ಗ್ರಾಮೀಣ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಬಂಧಿತರ ವಿಚಾರಣೆ ವೇಳೆ ಬೆಚ್ಚಿಬೀಳಿಸೋ ಅಂಶ ಹೊರಬಿದ್ದಿದೆ. ಕ್ಷುದ್ರಪೂಜೆಗೆ ದೇವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡ ಬೆಂಬಲ ನೀಡಿದ್ರಂತೆ. ಇದನ್ನ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

Published On - 6:35 am, Thu, 28 November 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್