AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಬಂಜಾರಾ ಹಿಲ್ಸ್​​​ನಲ್ಲಿ ₹3.35 ಕೋಟಿ ನಗದು ವಶ, ಮೂವರ ಬಂಧನ

ರೋಡ್ ನಂಬರ್ 3ರಲ್ಲಿ ವಾಹನ ತಪಾಸಣೆ ವೇಳೆ ಅನುಮಾನಾಸ್ಪದ ಕಿಯಾ ಕಾರು ಪತ್ತೆಯಾಗಿದ್ದು, ಅದರಿಂದ ₹3.35 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಹಣವನ್ನು ಹವಾಲಾ ಹಣ ಎಂದು ಗುರುತಿಸಲಾಗಿದೆ ಎಂದು ಡೇವಿಸ್ ಹೇಳಿದ್ದಾರೆ. ಹನುಮಂತ ರೆಡ್ಡಿ, ಬಚ್ಚಲ ಪ್ರಭಾಕರ್, ಮಂಡಲ್ ಶ್ರೀರಾಮುಲ ರೆಡ್ಡಿ ಮತ್ತು ಉದಯ್ ಕುಮಾರ್ ಎಂಬುವರನ್ನು ಬಂಧಿಸಲಾಗಿದೆ

ಹೈದರಾಬಾದ್: ಬಂಜಾರಾ ಹಿಲ್ಸ್​​​ನಲ್ಲಿ ₹3.35 ಕೋಟಿ ನಗದು ವಶ, ಮೂವರ ಬಂಧನ
ಬಂಜಾರಾ ಹಿಲ್ಸ್ ನಲ್ಲಿ 3.35 ಕೋಟಿ ನಗದು ವಶ
ರಶ್ಮಿ ಕಲ್ಲಕಟ್ಟ
|

Updated on: Oct 10, 2023 | 9:39 PM

Share

ಹೈದರಾಬಾದ್ ಅಕ್ಟೋಬರ್ 10: ಹೈದರಾಬಾದ್ ಪೊಲೀಸರು (Hyderabad Police) ಮಂಗಳವಾರ ಬಂಜಾರಾ ಹಿಲ್ಸ್ (Banjara Hills) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ₹3.35 ಕೋಟಿ ರೂಪಾಯಿ ಮೌಲ್ಯದ ನಗದನ್ನು ವಶಪಡಿಸಿಕೊಂಡಿದ್ದು, ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಟಿವಿ 9 ತೆಲುಗು ವರದಿ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಪಶ್ಚಿಮ ವಲಯ ಡಿಸಿಪಿ ಜೋಯಲ್ ಡೇವಿಸ್ ಮಾತನಾಡಿ, ಸೋಮವಾರದಿಂದ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ವ್ಯಾಪಕವಾಗಿ ವಾಹನ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ರೋಡ್ ನಂಬರ್ 3ರಲ್ಲಿ ವಾಹನ ತಪಾಸಣೆ ವೇಳೆ ಅನುಮಾನಾಸ್ಪದ ಕಿಯಾ ಕಾರು ಪತ್ತೆಯಾಗಿದ್ದು, ಅದರಿಂದ ₹3.35 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಹಣವನ್ನು ಹವಾಲಾ ಹಣ ಎಂದು ಗುರುತಿಸಲಾಗಿದೆ ಎಂದು ಡೇವಿಸ್ ಹೇಳಿದ್ದಾರೆ. ಹನುಮಂತ ರೆಡ್ಡಿ, ಬಚ್ಚಲ ಪ್ರಭಾಕರ್, ಮಂಡಲ್ ಶ್ರೀರಾಮುಲ ರೆಡ್ಡಿ ಮತ್ತು ಉದಯ್ ಕುಮಾರ್ ಎಂಬುವರನ್ನು ಬಂಧಿಸಲಾಗಿದೆ.ಈ ಗ್ಯಾಂಗ್ ವಿವಿಧ ಪ್ರದೇಶಗಳಲ್ಲಿ ಹವಾಲಾ ಹಣವನ್ನು ಸಾಗಿಸುತ್ತಿತ್ತು ಎಂದು ಅವರು ಹೇಳಿದರು.

ಮಂಗಳವಾರ, ಪ್ರಭಾಕರ್ ಅವರ ಆದೇಶದ ಮೇರೆಗೆ, ಹನುಮಂತ ರೆಡ್ಡಿ ಮತ್ತು ಇತರರು ಬೇಗಂಬಜಾರ್, ನಾಂಪಲ್ಲಿ, ಗೋಶಾಮಹಲ್ ಮತ್ತು ಜುಬಿಲಿ ಹಿಲ್ಸ್‌ನಿಂದ ಹವಾಲಾ ಹಣ ವಶ ಪಡಿಸಿದ್ದಾರೆ. ಬಂಜಾರ ಹಿಲ್ಸ್‌ನ ಸಾಯಿಕೃಪಾ ಬಿಲ್ಡಿಂಗ್ ಪ್ಲಾಟ್ ನಂ.583, ಅರೋರಾ ಕಾಲೋನಿಯಲ್ಲಿರುವ ತಮ್ಮ ಕಚೇರಿಗೆ ಹವಾಲಾ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಇದನ್ನು ವಶಪಡಿಸಿಕೊಂಡಿದ್ದೇವೆ. ಹವಾಲಾ ಹಣಕ್ಕಾಗಿ 25,000 ರೂ.ಗಳನ್ನು ಕಮಿಷನ್ ನೀಡಲಾಗುತ್ತದೆ ಎಂದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ಭಾರತೀಯ ಅಥ್ಲೀಟ್‌ಗಳ ಕಠಿಣ ಪರಿಶ್ರಮ ಮತ್ತು ಸಾಧನೆಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಮಂಗಳವಾರ ಬೆಳಗ್ಗೆ ಅದಿಲಾಬಾದ್ ಮತ್ತು ಸೆರಿಲಿಂಗಂಪಲ್ಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಮಹಿಳೆಯರಿಗೆ ಪ್ರೆಶರ್ ಕುಕ್ಕರ್ ವಿತರಿಸಿದ್ದು, ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅದೇ ವೇಳೆ ಹೈದರಾಬಾದ್ ಮತ್ತು ಇತರ ಜಿಲ್ಲೆಗಳ ವಿವಿಧೆಡೆ ನಗದು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ