AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣಗಳಲ್ಲಿ “ಬಾಡಿಗೆಗೆ ಗೆಳೆಯ” ಜಾಲ: ಯುವತಿಯರಿಗೆ ಪೊಲೀಸರಿಂದ ಬಿಗ್ ವಾರ್ನಿಂಗ್

ಹೈದರಾಬಾದ್‌ನಲ್ಲಿ 'ಬಾಯ್‌ಫ್ರೆಂಡ್ ಫಾರ್ ರೆಂಟ್' ಹೆಸರಿನಲ್ಲಿ ಹೊಸ ಸೈಬರ್ ವಂಚನೆ ಜಾಲ ಸಕ್ರಿಯವಾಗಿದೆ. ಆಕರ್ಷಕ ಜಾಹೀರಾತುಗಳ ಮೂಲಕ ಯುವತಿಯರನ್ನು ಗುರಿಯಾಗಿಸಿ, ನೋಂದಣಿ ಶುಲ್ಕದ ಹೆಸರಿನಲ್ಲಿ ಹಣ ದೋಚಿ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಹೈದರಾಬಾದ್ ಪೊಲೀಸರು ಈ ಬಗ್ಗೆ ತೀವ್ರ ಎಚ್ಚರಿಕೆ ನೀಡಿದ್ದು, ವೈಯಕ್ತಿಕ ಮಾಹಿತಿ ಹಂಚಿಕೆ ಮತ್ತು ಮುಂಗಡ ಹಣ ಪಾವತಿಸದಂತೆ, ಸೈಬರ್ ಕ್ರೈಮ್ ಸಹಾಯವಾಣಿಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಇದು ಬ್ಲ್ಯಾಕ್‌ಮೇಲ್ ಮತ್ತು ದೈಹಿಕ ಅಪಾಯಕ್ಕೂ ಕಾರಣವಾಗಬಹುದು.

ಸಾಮಾಜಿಕ ಜಾಲತಾಣಗಳಲ್ಲಿ ಬಾಡಿಗೆಗೆ ಗೆಳೆಯ ಜಾಲ: ಯುವತಿಯರಿಗೆ ಪೊಲೀಸರಿಂದ ಬಿಗ್ ವಾರ್ನಿಂಗ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 10, 2026 | 4:42 PM

Share

ಹೈದರಾಬಾದ್, ಆ.10: ದೇಶದ ದೊಡ್ಡ ದೊಡ್ಡ ನಗರಗಳಲ್ಲಿ ಬಾಯ್‌ಫ್ರೆಂಡ್ ಫಾರ್ ರೆಂಟ್, ಗರ್ಲ್​​​ಫ್ರೆಂಡ್ ಫಾರ್ ರೆಂಟ್ ಎಂಬ ಟ್ರೆಂಡ್​​ ಶುರುವಾಗಿದೆ. ಒಬ್ಬಂಟಿ ಯುವಕ-ಯುವತಿಯರು ಅಥವಾ ಹುಚ್ಚುತನಕ್ಕೆ ಇಂತಹ ಆಪ್​​​ಗಳನ್ನು ಡೌನ್​​​ಲೋಡ್​​​ ಮಾಡಿಕೊಂಡು ತಮ್ಮ ಜೀವನ ಹಾಗೂ ಹಣವನ್ನು ಖರ್ಚು ಮಾಡುತ್ತಿದ್ದಾರೆ. ಮೋಸ ಬಲೆಗೆ ಬಿದ್ದು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಇಂತಹ ಟ್ರೆಂಡ್​​​ಗಳು ದೆಹಲಿ, ಮುಂಬೈ, ಹೈದರಬಾದ್​​​, ಬೆಂಗಳೂರಂತಹ ಸಿಟಿಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರು ಹಾಗೂ ಮಹಿಳೆಯರನ್ನು ಗುರಿಯಾಗಿಸಿಕೊಂಡು “ಬಾಯ್‌ಫ್ರೆಂಡ್ ಫಾರ್ ರೆಂಟ್” (Boyfriends for Rent) ಹೆಸರಿನಲ್ಲಿ ಆಕರ್ಷಕ ಜಾಹೀರಾತುಗಳನ್ನು ನೀಡಿ ಹಣ ಹಾಗೂ ವೈಯಕ್ತಿಕ ಮಾಹಿತಿ ದೋಚುತ್ತಿರುವ ನೂತನ ಸೈಬರ್ ವಂಚನೆ ಜಾಲದ ಕುರಿತು ಹೈದರಾಬಾದ್ ಪೊಲೀಸರು ತೀವ್ರ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಹೈದರಾಬಾದ್ ನಗರ ಪೊಲೀಸ್ ಆಯುಕ್ತವಿ.ಸಿ. ಸಜ್ಜನರ್ ಅವರು ಎಕ್ಸ್ (ಟ್ವಿಟರ್)ನಲ್ಲಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸಂದೇಶ ರವಾನಿಸಿದ್ದು, ಆಕರ್ಷಕ ರಿಯಾಯಿತಿಗಳು ಹಾಗೂ ಸಂಗಾತಿ ಸೇವೆ ಒದಗಿಸುವುದಾಗಿ ನಂಬಿಸಿ ಸೈಬರ್ ವಂಚಕರು ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಹಾಗೂ ಟೆಲಿಗ್ರಾಂಗಳಲ್ಲಿ “Rent Boyfriend Your Personal Companion” ಎಂಬಂತಹ ಶೀರ್ಷಿಕೆಗಳೊಂದಿಗೆ ಜಾಹೀರಾತುಗಳನ್ನು ಪೋಸ್ಟ್ ಮಾಡಲಾಗುತ್ತದೆ. AI (ಕೃತಕ ಬುದ್ಧಿಮತ್ತೆ) ಮೂಲಕ ರಚಿಸಿದ ಅಥವಾ ಇತರರ ಪ್ರೊಫೈಲ್‌ಗಳಿಂದ ಕದ್ದ ಸುಂದರ ಯುವಕರ ಫೋಟೋಗಳನ್ನು ಬಳಸಲಾಗುತ್ತದೆ. ಕಾಫಿ ಡೇಟ್‌ಗಳು, ಸಿನೆಮಾಗೆ ಹೋಗುವುದು ಹಾಗೂ ಶಾಪಿಂಗ್‌ಗೆ ಸಾಥ್ ನೀಡುವುದು ಮುಂತಾದ ಸೇವೆಗಳನ್ನು ನೀಡುವುದಾಗಿ ಆಸೆ ತೋರಿಸಲಾಗುತ್ತದೆ.

ಸೌಲಭ್ಯವನ್ನು ಬುಕ್ ಮಾಡಲು ಯುವತಿಯರು ಸಂಪರ್ಕಿಸಿದಾಗ, ಮಾತುಕತೆಯ ಮೂಲಕ ಅವರ ನಂಬಿಕೆ ಗಳಿಸಿ, ನೋಂದಣಿ ಶುಲ್ಕ, ಭದ್ರತಾ ಠೇವಣಿ ಅಥವಾ ಬುಕಿಂಗ್ ಶುಲ್ಕದ ಹೆಸರಿನಲ್ಲಿ QR ಕೋಡ್ ಹಾಗೂ UPI ಆಪ್‌ಗಳ ಮೂಲಕ ಮುಂಗಡ ಹಣ ವರ್ಗಾಯಿಸಿಕೊಳ್ಳಲಾಗುತ್ತದೆ. ಒಮ್ಮೆ ಹಣ ಖಾತೆಗೆ ಜಮೆಯಾದ ತಕ್ಷಣ ಸೈಬರ್ ಖದೀಮರು ಯುವತಿಯರ ನಂಬರ್‌ಗಳನ್ನು ಬ್ಲಾಕ್ ಮಾಡಿ ಸಂಪರ್ಕ ಕಡಿತಗೊಳಿಸುತ್ತಾರೆ.

ಬ್ಲ್ಯಾಕ್‌ಮೇಲ್ ಮತ್ತು ದೈಹಿಕ ಅಪಾಯದ ಎಚ್ಚರಿಕೆ:

ಪೊಲೀಸರ ಪ್ರಕಾರ, ಅಪರಿಚಿತ ಹಾಗೂ ಪರಿಶೀಲಿಸದ ಆನ್‌ಲೈನ್ ಖಾತೆಗಳೊಂದಿಗೆ ಫೋನ್ ಸಂಖ್ಯೆ, ಫೋಟೋ ಅಥವಾ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳುವುದರಿಂದ ಬ್ಲ್ಯಾಕ್‌ಮೇಲ್, ಕಿರುಕುಳ ಹಾಗೂ ನೇರವಾಗಿ ಭೇಟಿಯಾದಾಗ ದೈಹಿಕ ಅಪಾಯಕ್ಕೂ ಈಡಾಗುವ ಸಾಧ್ಯತೆಯಿರುತ್ತದೆ.

ಇದನ್ನೂ ಓದಿ: ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ ‘ನೋ ಮೊಬೈಲ್’: ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಪೋಷಕರು ಮತ್ತು ಯುವತಿಯರಿಗೆ ಸಜ್ಜನ್ನಾರ್ ನೀಡಿದ ಪ್ರಮುಖ ಸಲಹೆಗಳು:

ಪೋಷಕರು ತಮ್ಮ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಏನು ವೀಕ್ಷಿಸುತ್ತಿದ್ದಾರೆ, ಯಾರೊಂದಿಗೆ ಮಾತನಾಡುತ್ತಿದ್ದಾರೆ ಹಾಗೂ ಯಾರನ್ನು ಭೇಟಿಯಾಗುತ್ತಿದ್ದಾರೆ ಎಂಬುದರ ಮೇಲೆ ನಿಗಾ ಇಡಬೇಕು. ಮಕ್ಕಳ ಸ್ಮಾರ್ಟ್‌ಫೋನ್ ಬಳಕೆಯನ್ನು ಗಮನಿಸುವುದರಿಂದ ಅವರನ್ನು ಇಂತಹ ವಂಚನೆಗಳಿಂದ ರಕ್ಷಿಸಬಹುದು. ಆನ್‌ಲೈನ್‌ನಲ್ಲಿ ಅಪರಿಚಿತ ಪ್ರೊಫೈಲ್‌ಗಳ ಜೊತೆ ಸಂವಹನ ನಡೆಸಬೇಡಿ ಹಾಗೂ ಇಂತಹ ಯಾವುದೇ ಸೇವೆಗಳಿಗೆ ಯಾವುದೇ ಕಾರಣಕ್ಕೂ ಮುಂಗಡ ಹಣ ಪಾವತಿಸಬೇಡಿ.

ಯಾವುದೇ ರೀತಿಯ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ಅಥವಾ ಸೈಬರ್ ವಂಚನೆಗೆ ಒಳಗಾದಲ್ಲಿ ತಕ್ಷಣವೇ ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಬಹುದು ಅಥವಾ ಅಧಿಕೃತ ರಾಷ್ಟ್ರೀಯ ಸೈಬರ್ ಕ್ರೈಮ್ ಪೋರ್ಟಲ್ (national cybercrime portal) ಮೂಲಕ ದೂರು ದಾಖಲಿಸಬಹುದು ಎಂದು ಹೈದರಾಬಾದ್​ ಪೊಲೀಸರು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಬೆಂಗಳೂರಿಗರೇ ಎಚ್ಚರ: ಮನೆಗೆ ಕನ್ನ ಹಾಕಲು ಎಂಟ್ರಿ ಕೊಟ್ಟಿದೆ ಚಡ್ಡಿ ಗ್ಯಾಂಗ್
ಬೆಂಗಳೂರಿಗರೇ ಎಚ್ಚರ: ಮನೆಗೆ ಕನ್ನ ಹಾಕಲು ಎಂಟ್ರಿ ಕೊಟ್ಟಿದೆ ಚಡ್ಡಿ ಗ್ಯಾಂಗ್