ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ -ಎನ್ಕೌಂಟರ್​ ಆದ ಕಾಮುಕನ ಪತ್ನಿ

ಹೈದರಾಬಾದ್: ದಿಶಾ ಪ್ರಕರಣದಲ್ಲಿ ಎನ್‌ಕೌಂಟರ್ ಆದ ಚನ್ನಕೇಶವುಲು ಪತ್ನಿ ತನ್ನ ಆರೋಪಿ ಗಂಡನನ್ನು ಕಳೆದುಕೊಂಡಿರುವುದಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ ಎಂದು ಗೋಳಾಡಿದ್ದಾರೆ. ಚನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ. ವಿಚಾರಣೆ ಬಳಿಕ ವಾಪಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದ್ರೆ ಈಗ ನನ್ನ ಪತಿಯನ್ನು ಕೊಂದಿದ್ದರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ. ನನ್ನ ಪತಿ ಇಲ್ಲದೆ ನಾನು […]

ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ -ಎನ್ಕೌಂಟರ್​ ಆದ ಕಾಮುಕನ ಪತ್ನಿ

Updated on: Dec 06, 2019 | 12:31 PM

ಹೈದರಾಬಾದ್: ದಿಶಾ ಪ್ರಕರಣದಲ್ಲಿ ಎನ್‌ಕೌಂಟರ್ ಆದ ಚನ್ನಕೇಶವುಲು ಪತ್ನಿ ತನ್ನ ಆರೋಪಿ ಗಂಡನನ್ನು ಕಳೆದುಕೊಂಡಿರುವುದಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ ಎಂದು ಗೋಳಾಡಿದ್ದಾರೆ. ಚನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ.

ವಿಚಾರಣೆ ಬಳಿಕ ವಾಪಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದ್ರೆ ಈಗ ನನ್ನ ಪತಿಯನ್ನು ಕೊಂದಿದ್ದರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ. ನನ್ನ ಪತಿ ಇಲ್ಲದೆ ನಾನು ಬದುಕುವುದಿಲ್ಲ ಎಂದು ಚನ್ನಕೇಶವುಲು ಪತ್ನಿ ಅಳುತ್ತಲೆ ತಮ್ಮ ನೋವನ್ನ ತೋಡಿಕೊಂಡಿದ್ದಾರೆ. ಆದರೆ ಇಂತಹ ಕಾಮುಕರನ್ನು ಮಟ್ಟ ಹಾಕಿರುವುದಕ್ಕೆ ದೇಶದಾದ್ಯಂತ ಮೆಚ್ಚುಗೆ, ಸಂತೋಷ ವ್ಯಕ್ತವಾಗಿದೆ.

Published On - 10:55 am, Fri, 6 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us