AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ

ತೆಲಂಗಾಣದ ಹೈದರಾಬಾದ್‌ನಲ್ಲಿ ಬಿಎಸ್‌ಸಿ ವಿದ್ಯಾರ್ಥಿನಿ ಹಾಗೂ ಯೂಟ್ಯೂಬರ್ ಕೋಮಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುವೈತ್‌ನಲ್ಲಿರುವ ತನ್ನ ತಾಯಿಗೆ ಐ ಲವ್ ಯೂ ಸೋ ಮಚ್ ಎಂದು ಸಂದೇಶ ಕಳುಹಿಸಿ, ಸಹೋದರನನ್ನು ನೋಡಿಕೊಳ್ಳುವಂತೆ ಕೇಳಿಕೊಂಡ ನಂತರ ಈ ದುರ್ಘಟನೆ ನಡೆದಿದೆ. 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್‌ನೊಂದಿಗೆ ಸಂಬಂಧ ಮುರಿದುಬಿದ್ದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆ ತಿಳಿಸಿದೆ. ಆರು ತಿಂಗಳ ಹಿಂದೆ ಕೂಡ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು. ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ.

ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ
ಕೋಮಲಿImage Credit source: NDTV
ನಯನಾ ರಾಜೀವ್
|

Updated on: Feb 26, 2026 | 10:55 AM

Share

ಹೈದರಾಬಾದ್, ಫೆಬ್ರವರಿ 26: ಯೂಟ್ಯೂಬರ್ ಹಾಗೂ ಬಿಎಸ್​ಸಿ ವಿದ್ಯಾರ್ಥಿನಿ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾಯುವ ಮುನ್ನ ಕುವೈತ್​​ನಲ್ಲಿರುವ ತಾಯಿಗೆ ಐ ಲವ್ ಯೂ ಸೋ ಮಚ್ ಎಂದು ಸಂದೇಶ ಕಳುಹಿಸಿದ್ದಾಳೆ.ಈ ಘಟನೆ ಫೆಬ್ರವರಿ 23 ರಂದು (ಸೋಮವಾರ) ನಡೆದಿದ್ದು, ಆಕೆಯ ತಾಯಿ ಕುವೈತ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಳನ್ನು ಕೋಮಲಿ ಎಂದು ಗುರುತಿಸಲಾಗಿದ್ದು, ಅವರು ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದವರು. ಅವರು ಕಳೆದ 11 ತಿಂಗಳಿನಿಂದ ಹೈದರಾಬಾದ್‌ನಲ್ಲಿರುವ ತಮ್ಮ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು, ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆಯುತ್ತಿದ್ದರು. ವಿಜ್ಞಾನ ವಿದ್ಯಾರ್ಥಿನಿಯಾಗುವುದರ ಜೊತೆಗೆ, ಯೂಟ್ಯೂಬರ್ ಕೂಡ ಆಗಿದ್ದರು.

ಫೆಬ್ರವರಿ 23 ರ ಬೆಳಗ್ಗೆ, ಆಕೆ ತನ್ನ ತಾಯಿ ಬಿ ಸತ್ಯ ವರಲಕ್ಷ್ಮಿಗೆ ಒಂದು ಸಂದೇಶ ಕಳುಹಿಸಿದ್ದಳು, ನಿಮ್ಮನ್ನು ತುಂಬಾ ಪ್ರೀತಿಸುತ್ತೀನಿ ಅಮ್ಮ ಎಂದು ಬರೆದಿದ್ದು, ಕಿರಿಯ ಸಹೋದರನನ್ನು ನೋಡಿಕೊಳ್ಳುವಂತೆ ಕೇಳಿಕೊಂಡಿದ್ದಾಳೆ. ಇದಾದ ನಂತರ, ಅವಳ ಫೋನ್ ಸ್ವಿಚ್ ಆಫ್ ಆಗಿತ್ತು.

ವರಲಕ್ಷ್ಮಿ ಕೋಮಲಿಗೆ ಕರೆ ಮಾಡಲು ಪ್ರಯತ್ನಿಸುತ್ತಲೇ ಇದ್ದರು, ಆದರೆ ಎಲ್ಲಾ ಕರೆಗಳಿಗೂ ಉತ್ತರ ಸಿಗಲಿಲ್ಲ. ನಂತರ, ಅವರು ಸ್ನೇಹಿತರಿಗೆ ಮಾಹಿತಿ ನೀಡಿ ಹೈದರಾಬಾದ್‌ನಲ್ಲಿರುವ ಕೋಮಲಿಯ ಫ್ಲಾಟ್‌ಗೆ ಹೋಗುವಂತೆ ಕೇಳಿಕೊಂಡಿದ್ದಾರೆ.

ಮತ್ತಷ್ಟು ಓದಿ: ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.?

ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರು ಫ್ಲಾಟ್‌ಗೆ ಹೋಗಿದ್ದಾರೆ, ಆದರೆ ಪದೇ ಪದೇ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಪೊಲೀಸರು ಕೂಡಲೇ, ಬೀಗ ಮುರಿದು ಅಪಾರ್ಟ್ಮೆಂಟ್ ಒಳಗೆ ಹೋದರು, ಅಲ್ಲಿ ಕೋಮಲಿಯ ಶವ ಸೀಲಿಂಗ್ ಫ್ಯಾನ್‌ನಿಂದ ನೇತಾಡುತ್ತಿರುವುದು ಕಂಡುಬಂದಿದೆ.

ಪೊಲೀಸರು ಒಂದು ಸಣ್ಣ ಏಣಿ ಮತ್ತು ಸೀರೆಯನ್ನು ಸಹ ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, 21 ವರ್ಷದ ಯುವತಿ ಕಳೆದ ಮೂರು ವರ್ಷಗಳಿಂದ 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಜೊತೆ ಸಂಬಂಧ ಹೊಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಅವರು ಇತ್ತೀಚೆಗೆ ತಮ್ಮ ಸಂಬಂಧವನ್ನು ಕೊನೆಗೊಳಿಸಿದ್ದರು.

ಆರು ತಿಂಗಳ ಹಿಂದೆಯೂ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ಈಗ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸರು ಎಲ್ಲಾ ಭೌತಿಕ ಮತ್ತು ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ