AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಫುಡ್ ನೀಡಲು ತೆರಳಿದ್ದಾಗ ಜರ್ಮನ್ ಶೆಫರ್ಡ್ ನಾಯಿ ಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ದಾಳಿ ನಡೆಸಿದೆ. ಇದರಿಂದ ಹೆದರಿದ ಅವರು ಮೂರನೇ ಮಹಡಿಯಿಂದ ಕೆಳಗೆ ಹಾರಿ, ಗಂಭೀರವಾಗಿ ಗಾಯಗೊಂಡಿದ್ದಾರೆ.

ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 13, 2023 | 5:10 PM

Share

ಹೈದರಾಬಾದ್: ಫುಡ್ ಡೆಲಿವರಿಗೆ (Food Delivery) ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ (Swiggy Delivery Agent) 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿದೆ. ಆ ಯುವಕನ ಸ್ಥಿತಿ ಗಂಭೀರವಾಗಿದೆ. ಸ್ವಿಗ್ಗಿ ಡೆಲಿವರಿ ಬಾಯ್ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತು. ಆಗ ಹೆದರಿದ ಡೆಲಿವರಿ ಬಾಯ್ ಕೆಳಗೆ ಹಾರಿ ಬಿದ್ದಿದ್ದಾರೆ.

ನಾಯಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಆ ಯುವಕ ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ. ಮೇಲಿನಿಂದ ಬಿದ್ದಿದ್ದರಿಂದ ಅವರಿಗೆ ಗಂಭೀರ ಗಾಯಗಳಾಗಿವೆ. ಆತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹರಿಸಿದ ದುರುಳ; ಒದ್ದಾಡಿ ಪ್ರಾಣ ಬಿಟ್ಟ ನಾಯಿ

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದ ಆನ್‌ಲೈನ್ ಫುಡ್ ಡೆಲಿವರಿ ಏಜೆಂಟ್ ಗಾಯಗೊಂಡಿದ್ದಾರೆ. ಫುಡ್ ನೀಡಲು ಅಲ್ಲಿಗೆ ತೆರಳಿದ್ದ ವೇಳೆ ಜರ್ಮನ್ ಶೆಫರ್ಡ್ ನಾಯಿಯೊಂದು ಅವರ ಮೇಲೆ ದಾಳಿ ನಡೆಸಿದೆ. ಸ್ವಿಗ್ಗಿ ಡೆಲಿವರಿ ಏಜೆಂಟ್ 25 ವರ್ಷದ ರಿಜ್ವಾನ್ ಕಳೆದ 3 ವರ್ಷಗಳಿಂದ ಸ್ವಿಗ್ಗಿಯೊಂದಿಗೆ ಕೆಲಸ ಮಾಡುತ್ತಿದ್ದರು.

ಫ್ಲಾಟ್ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ರಿಜ್ವಾನ್​ನ ಸಹೋದರ ಗುರುವಾರ ರಾತ್ರಿ ಬಂಜಾರಾ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ