AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಫುಡ್ ನೀಡಲು ತೆರಳಿದ್ದಾಗ ಜರ್ಮನ್ ಶೆಫರ್ಡ್ ನಾಯಿ ಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ದಾಳಿ ನಡೆಸಿದೆ. ಇದರಿಂದ ಹೆದರಿದ ಅವರು ಮೂರನೇ ಮಹಡಿಯಿಂದ ಕೆಳಗೆ ಹಾರಿ, ಗಂಭೀರವಾಗಿ ಗಾಯಗೊಂಡಿದ್ದಾರೆ.

ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 13, 2023 | 5:10 PM

Share

ಹೈದರಾಬಾದ್: ಫುಡ್ ಡೆಲಿವರಿಗೆ (Food Delivery) ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ (Swiggy Delivery Agent) 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿದೆ. ಆ ಯುವಕನ ಸ್ಥಿತಿ ಗಂಭೀರವಾಗಿದೆ. ಸ್ವಿಗ್ಗಿ ಡೆಲಿವರಿ ಬಾಯ್ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತು. ಆಗ ಹೆದರಿದ ಡೆಲಿವರಿ ಬಾಯ್ ಕೆಳಗೆ ಹಾರಿ ಬಿದ್ದಿದ್ದಾರೆ.

ನಾಯಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಆ ಯುವಕ ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ. ಮೇಲಿನಿಂದ ಬಿದ್ದಿದ್ದರಿಂದ ಅವರಿಗೆ ಗಂಭೀರ ಗಾಯಗಳಾಗಿವೆ. ಆತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹರಿಸಿದ ದುರುಳ; ಒದ್ದಾಡಿ ಪ್ರಾಣ ಬಿಟ್ಟ ನಾಯಿ

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದ ಆನ್‌ಲೈನ್ ಫುಡ್ ಡೆಲಿವರಿ ಏಜೆಂಟ್ ಗಾಯಗೊಂಡಿದ್ದಾರೆ. ಫುಡ್ ನೀಡಲು ಅಲ್ಲಿಗೆ ತೆರಳಿದ್ದ ವೇಳೆ ಜರ್ಮನ್ ಶೆಫರ್ಡ್ ನಾಯಿಯೊಂದು ಅವರ ಮೇಲೆ ದಾಳಿ ನಡೆಸಿದೆ. ಸ್ವಿಗ್ಗಿ ಡೆಲಿವರಿ ಏಜೆಂಟ್ 25 ವರ್ಷದ ರಿಜ್ವಾನ್ ಕಳೆದ 3 ವರ್ಷಗಳಿಂದ ಸ್ವಿಗ್ಗಿಯೊಂದಿಗೆ ಕೆಲಸ ಮಾಡುತ್ತಿದ್ದರು.

ಫ್ಲಾಟ್ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ರಿಜ್ವಾನ್​ನ ಸಹೋದರ ಗುರುವಾರ ರಾತ್ರಿ ಬಂಜಾರಾ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು