AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಫುಡ್ ನೀಡಲು ತೆರಳಿದ್ದಾಗ ಜರ್ಮನ್ ಶೆಫರ್ಡ್ ನಾಯಿ ಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ದಾಳಿ ನಡೆಸಿದೆ. ಇದರಿಂದ ಹೆದರಿದ ಅವರು ಮೂರನೇ ಮಹಡಿಯಿಂದ ಕೆಳಗೆ ಹಾರಿ, ಗಂಭೀರವಾಗಿ ಗಾಯಗೊಂಡಿದ್ದಾರೆ.

ಫುಡ್ ಡೆಲಿವರಿಗೆ ಹೋದಾಗ ನಾಯಿಗೆ ಹೆದರಿ 3ನೇ ಮಹಡಿಯಿಂದ ಹಾರಿದ ಸ್ವಿಗ್ಗಿ ಬಾಯ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 13, 2023 | 5:10 PM

Share

ಹೈದರಾಬಾದ್: ಫುಡ್ ಡೆಲಿವರಿಗೆ (Food Delivery) ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ (Swiggy Delivery Agent) 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿದೆ. ಆ ಯುವಕನ ಸ್ಥಿತಿ ಗಂಭೀರವಾಗಿದೆ. ಸ್ವಿಗ್ಗಿ ಡೆಲಿವರಿ ಬಾಯ್ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತು. ಆಗ ಹೆದರಿದ ಡೆಲಿವರಿ ಬಾಯ್ ಕೆಳಗೆ ಹಾರಿ ಬಿದ್ದಿದ್ದಾರೆ.

ನಾಯಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಆ ಯುವಕ ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ. ಮೇಲಿನಿಂದ ಬಿದ್ದಿದ್ದರಿಂದ ಅವರಿಗೆ ಗಂಭೀರ ಗಾಯಗಳಾಗಿವೆ. ಆತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹರಿಸಿದ ದುರುಳ; ಒದ್ದಾಡಿ ಪ್ರಾಣ ಬಿಟ್ಟ ನಾಯಿ

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದ ಆನ್‌ಲೈನ್ ಫುಡ್ ಡೆಲಿವರಿ ಏಜೆಂಟ್ ಗಾಯಗೊಂಡಿದ್ದಾರೆ. ಫುಡ್ ನೀಡಲು ಅಲ್ಲಿಗೆ ತೆರಳಿದ್ದ ವೇಳೆ ಜರ್ಮನ್ ಶೆಫರ್ಡ್ ನಾಯಿಯೊಂದು ಅವರ ಮೇಲೆ ದಾಳಿ ನಡೆಸಿದೆ. ಸ್ವಿಗ್ಗಿ ಡೆಲಿವರಿ ಏಜೆಂಟ್ 25 ವರ್ಷದ ರಿಜ್ವಾನ್ ಕಳೆದ 3 ವರ್ಷಗಳಿಂದ ಸ್ವಿಗ್ಗಿಯೊಂದಿಗೆ ಕೆಲಸ ಮಾಡುತ್ತಿದ್ದರು.

ಫ್ಲಾಟ್ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ರಿಜ್ವಾನ್​ನ ಸಹೋದರ ಗುರುವಾರ ರಾತ್ರಿ ಬಂಜಾರಾ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ