ಹೈದರಾಬಾದ್: ಮರಳು ತಟದಲ್ಲಿ ಸಿಲುಕಿದ ಕುದುರೆಯ ರಕ್ಷಿಸಲು ಹೋಗಿ, ಕುದುರೆ ಸಹಿತ ಇಬ್ಬರು ಯುವಕರು ನದಿಯಲ್ಲಿ ಜಲಸಮಾಧಿಯಾದರು

ವಿಷಯ ತಿಳಿದ ಪೊಲೀಸರು ತಕ್ಷಣ ನುರಿತ ಈಜುಗಾರರನ್ನು ನಿಯೋಜಿಸಿದ್ದಾರೆ. ಶೋಧದ ಬಳಿಕ, ಕುದುರೆ ಸಮೇತ ರಾಜೇಂದ್ರನಗರ ನಾಲಾದಲ್ಲಿ ಮುಳುಗಿ ಸಾವನ್ನಪ್ಪಿದ ಸೈಫ್ ಮತ್ತು ಅಶುಸಿಂಗ್ ಅವರುಗಳ ಮೃತದೇಹಗಳು ಪತ್ತೆಯಾಗಿವೆ. ಅಲ್ಲಿಗೆ ಕುದುರೆ ಸಮೇತ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಹೈದರಾಬಾದ್: ಮರಳು ತಟದಲ್ಲಿ ಸಿಲುಕಿದ ಕುದುರೆಯ ರಕ್ಷಿಸಲು ಹೋಗಿ, ಕುದುರೆ ಸಹಿತ ಇಬ್ಬರು ಯುವಕರು ನದಿಯಲ್ಲಿ ಜಲಸಮಾಧಿಯಾದರು
ಕುದುರೆ ಸಹಿತ ಇಬ್ಬರು ಯುವಕರ ಸಾವು
ಸಾಧು ಶ್ರೀನಾಥ್​

Updated on: Apr 27, 2023 | 10:02 AM

ಹೈದರಾಬಾದ್‌: ರಾಜಸ್ಥಾನ ಮೂಲದ ಯುವಕನೊಬ್ಬ (youth) ಕುದುರೆ ಸವಾರಿಯ ಆಸಕ್ತಿಯಿಂದ ಹೈದರಾಬಾದ್‌ನಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ (death). ಈತನ ಜೊತೆಗೆ ಮತ್ತೊಬ್ಬ ಯುವಕನೂ ನದಿಯ ಮರಳು ನಾಲೆಯಲ್ಲಿ ಹುದುಗಿ ಮೃತಪಟ್ಟಿದ್ದಾರೆ. ಕೊನೆಗೆ, ಕುದುರೆಯನ್ನು ರಕ್ಷಿಸಲು ಮುಂದಾದ (rescue) ಆ ಇಬ್ಬರು ಯುವಕರು ಸೇರಿದಂತೆ ಕುದುರೆಯೂ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದಿನ (hyderabad) ರಾಜೇಂದ್ರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಿಸ್ಮತ್‌ಪುರ ಸಮೀಪದ ಮರಳು ನಾಲೆ ನಡೆದಿದೆ.

ಅಜಮ್ ಎಂಬ ವ್ಯಕ್ತಿ ತೆಲಂಗಾಣ ಹಾರ್ಸ್ ರೈಡಿಂಗ್ ಎಂಬ ಹೆಸರಿನ ಕುದುರೆ ಸವಾರಿ ತರಬೇತಿ ಸಂಸ್ಥೆಯನ್ನು ನಡೆಸುತ್ತಿದ್ದಾನೆ. ಕುದುರೆ ಸವಾರಿ ಕಲಿಯಲು ಅನುಸಿಂಗ್ ಎಂಬಾತ ರಾಜಸ್ಥಾನದಿಂದ ತರಬೇತಿ ಸಂಸ್ಥೆಗೆ ಬಂದಿದ್ದರು. ರಾಜಸ್ತಾನದ ಅಸುಶಿಂಗ್ ಮತ್ತು ಹೈದರಾಬಾದಿನ ಕಿಶನ್ ಬಾಗ್‌ನ ಸೈಫ್ ಎಂಬ ಇಬ್ಬರು ಯುವಕರು ಕಿಸ್ಮತ್‌ಪುರದ ಕಡೆಗೆ ರನ್ನಿಂಗ್​ ಮಾಡುತ್ತಿದ್ದರು. ಆ ವೇಳೆ ತರಬೇತಿ ಕೇಂದ್ರದ ಕುದುರೆ ನಾಲಾದಲ್ಲಿ ನೀರು ಕುಡಿಯಲು ಹೋಗಿತ್ತು.

ಆದರೆ ನೀರು ಕುಡಿಯುತ್ತಾ ಕುದುರೆ ಮರಳಿನಲ್ಲಿ ಸಿಕ್ಕಿಹಾಕಿಕೊಂಡಿರುವುದನ್ನು ರಾಜಸ್ಥಾನದ ಅಶು ಸಿಂಗ್ ಗಮನಿಸಿದ್ದಾರೆ. ತಕ್ಷಣವೇ ಕುದುರೆಯನ್ನು ರಕ್ಷಿಸಲು ಹೊಳೆಯತ್ತ ಧಾವಿಸಿದ್ದಾರೆ. ಹಾಗೆ ನದಿಯ ಮರಳು ನಾಲೆಯತ್ತಾ ಓಡುವಾಗ, ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಕುದುರೆ ಸವಾರಿ ಕೇಂದ್ರದ ಮಾಲೀಕ ಅಝಂ ಅವರ ಮಗ ಸೈಫ್ ಆ ಆರ್ತನಾದವನ್ನು ಕೇಳಿ, ತಮ್ಮ ತರಬೇತಿ ಕೇಂದ್ರಕ್ಕೆ ಬಂದಿದ್ದ ಯುವಕನನ್ನು ಮತ್ತು ಕುದುರೆಯನ್ನು ರಕ್ಷಿಸಲು ಅತ್ತ ಧಾವಿಸಿದ್ದಾರೆ. ಅಶು ಸಿಂಗ್ ಮತ್ತು ಸೈಫ್ ಇಬ್ಬರೂ ನದಿಗೆ ಇಳಿದಿದ್ದಾರೆ. ಮುಳುಗುತ್ತಿದ್ದ ಕುದುರೆಯನ್ನು ರಕ್ಷಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದಾರೆ. ಆದರೆ ಈಜಲು ಬಾರದ ಕಾರಣ ಇಬ್ಬರೂ ನದಿಯಲ್ಲಿ ಮುಳುಗಿ, ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ:

ಸಾಮಾನ್ಯವಾಗಿ ಬೈಕ್​ ಏರಿ ಬಂದು ದರೋಡೆ ಮಾಡ್ತಾರೆ! ಆದರೆ ಇಲ್ಲಿ ಕುದುರೆಯ ಮೇಲೆ ಬಂದು ಮಹಿಳೆಯ ಕೈಚೀಲ ಕಸಿದುಕೊಂಡು ಹೋದ -ವಿಡಿಯೋ ವೈರಲ್

ವಿಷಯ ತಿಳಿದ ಪೊಲೀಸರು ತಕ್ಷಣ ನುರಿತ ಈಜುಗಾರರನ್ನು ನಿಯೋಜಿಸಿದ್ದಾರೆ. ಶೋಧದ ಬಳಿಕ, ಕುದುರೆ ಸಮೇತ ರಾಜೇಂದ್ರನಗರ ನಾಲಾದಲ್ಲಿ ಮುಳುಗಿ ಸಾವನ್ನಪ್ಪಿದ ಸೈಫ್ ಮತ್ತು ಅಶುಸಿಂಗ್ ಅವರುಗಳ ಮೃತದೇಹಗಳು ಪತ್ತೆಯಾಗಿವೆ. ಅಲ್ಲಿಗೆ ಕುದುರೆ ಸಮೇತ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published On - 9:58 am, Thu, 27 April 23

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us