AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶುವೈದ್ಯೆ ಪ್ರಿಯಾಂಕಾ ​ರೇಪ್-ಹತ್ಯೆ: ನಾಲ್ವರು ಅಂದರ್, ಆತಂಕಕಾರಿ ಅಂಶಗಳು ಬಯಲು

ಹೈದರಾಬಾದ್: ಪಶುವೈದ್ಯೆ ಡಾ. ಪ್ರಿಯಾಂಕಾ ರೆಡ್ಡಿ ಮೇಲೆ ರಂಗಾರೆಡ್ಡಿ ಜಿಲ್ಲೆ ವ್ಯಾಪ್ತಿಯ ಶಾದ್​ನಗರ ಟೋಲ್​ಗೇಟ್​ ಬಳಿ ಎರಡು ದಿನಗಳ ಹಿಂದೆ ಗ್ಯಾಂಗ್ ​ರೇಪ್ ಮಾಡಿ, ಸಜೀವವಾಗಿ ದಹಿಸಿ, ಸಾಯಿಸಿದ್ದ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಹಿಳಾ ಆಯೋಗ ಹೈದರಾಬಾದ್​ಗೆ ತಂಡ‌ವನ್ನು ಕಳುಹಿಸಿದೆ. ಪ್ರಕರಣದಲ್ಲಿ ಅನೇಕ ಆತಂಕಕಾರಿ ಅಂಶಗಳು ಬಯಲಿಗೆ ಬರುತ್ತಿವೆ. ಕುಕೃತ್ಯವನ್ನು ಮೆಹಬೂಬ್​ನಗರದ ಮೊಹಮ್ಮದ್​ ಪಾಷಾ ಗ್ಯಾಂಗ್ ಎಸಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಲಾರಿ ಚಾಲಕ ಮೊಹಮ್ಮದ್​ […]

ಪಶುವೈದ್ಯೆ ಪ್ರಿಯಾಂಕಾ ​ರೇಪ್-ಹತ್ಯೆ: ನಾಲ್ವರು ಅಂದರ್, ಆತಂಕಕಾರಿ ಅಂಶಗಳು ಬಯಲು
ಸಾಧು ಶ್ರೀನಾಥ್​
|

Updated on:Nov 30, 2019 | 1:28 PM

Share

ಹೈದರಾಬಾದ್: ಪಶುವೈದ್ಯೆ ಡಾ. ಪ್ರಿಯಾಂಕಾ ರೆಡ್ಡಿ ಮೇಲೆ ರಂಗಾರೆಡ್ಡಿ ಜಿಲ್ಲೆ ವ್ಯಾಪ್ತಿಯ ಶಾದ್​ನಗರ ಟೋಲ್​ಗೇಟ್​ ಬಳಿ ಎರಡು ದಿನಗಳ ಹಿಂದೆ ಗ್ಯಾಂಗ್ ​ರೇಪ್ ಮಾಡಿ, ಸಜೀವವಾಗಿ ದಹಿಸಿ, ಸಾಯಿಸಿದ್ದ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಹಿಳಾ ಆಯೋಗ ಹೈದರಾಬಾದ್​ಗೆ ತಂಡ‌ವನ್ನು ಕಳುಹಿಸಿದೆ.

ಪ್ರಕರಣದಲ್ಲಿ ಅನೇಕ ಆತಂಕಕಾರಿ ಅಂಶಗಳು ಬಯಲಿಗೆ ಬರುತ್ತಿವೆ. ಕುಕೃತ್ಯವನ್ನು ಮೆಹಬೂಬ್​ನಗರದ ಮೊಹಮ್ಮದ್​ ಪಾಷಾ ಗ್ಯಾಂಗ್ ಎಸಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಲಾರಿ ಚಾಲಕ ಮೊಹಮ್ಮದ್​ ಪಾಷಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಜೊಳ್ಳ ಶಿವ, ಜೊಳ್ಳ ನವೀನ್ ಮತ್ತು ಚನ್ನಕೇಶವ ಇತರೆ ಬಂಧಿತ ಆರೋಪಿಗಳು.

ಆರೋಪಿ ಪಾಷಾ, ಈ ಹಿಂದೆಯೂ ಇಂತಹುದೇ ಕುಕೃತ್ಯಗಳನ್ನ ಎಸಗಿರುವುದಾಗಿ ತಿಳಿದುಬಂದಿದೆ. ಪಾಷಾಗೆ ಈ ಮೂವರೂ ಸಾಥ್​ ನೀಡಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಡಾ. ಪ್ರಿಯಾಂಕಾ ರೆಡ್ಡಿ ಮೈಮೇಲೆ ಸೀಮೆಎಣ್ಣೆ ಸುರಿದು, ಸಜೀವದಹನ ಮಾಡಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಸ್ಪಷ್ಟವಾಗಿದೆ. ಅದಕ್ಕೂ ಮುನ್ನ ಗ್ಯಾಂಗ್​ರೇಪ್ ನಡೆದಿರುವುದು ದೃಢಪಟ್ಟಿದೆ.

ಡಾ.ಪ್ರಿಯಾಂಕಾ ರೆಡ್ಡಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂದಿನ ಚಕ್ರ ಪಂಕ್ಚರ್ ಆಗಿದೆ ಎಂದು ಅವರನ್ನು ಯಾಮಾರಿಸಲಾಗಿದೆ. ಆಗ ನೆರವಿಗೆ ಬಂದಿದ್ದ ಲಾರಿ ಡ್ರೈವರ್, ಕ್ಲೀನರ್ ಪ್ರಿಯಾಂಕಾ ರೆಡ್ಡಿಯನ್ನು ಲಾರಿಯಲ್ಲಿ ಅಪಹರಿಸಿ ಗ್ಯಾಂಗ್​ರೇಪ್​ ಮಾಡಿದ ನಂತರ, ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿದ್ದಾರೆ.

ಈ ಮಧ್ಯೆ, ಪ್ರಿಯಾಂಕಾ ರೆಡ್ಡಿ‌ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವೂ ಎದ್ದುಕಾಣುತ್ತಿದೆ. ಪೊಲೀಸರು ಸಕಾಲಕ್ಕೆ ಸ್ಪಂದಿಸಿದ್ದರೆ ಈ ಘಟನೆ ತಡೆಯಬಹುದಿತ್ತು, ನನ್ನ ಮಗಳು ನಮಗೆ ಫೋನ್ ಮಾಡಿದ ಕೂಡಲೇ 10.30ಕ್ಕೆ ನಾವು ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಸ್ಪಂದಿಸಿಲ್ಲ ಎಂದಿದ್ದಾರೆ. ಪೊಲೀಸರು ಘಟನಾ ಸ್ಥಳ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಕರಣ ದಾಖಲಿಸದೇ ಕಾಲಹರಣ ಮಾಡಿದ್ದಾರೆ ಎಂದು ಪೊಲೀಸರ‌ ವರ್ತನೆಗೆ‌ ಪ್ರಿಯಾಂಕಾರ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕಾ ರೆಡ್ಡಿ ತಾಯಿ ‌ವಿಜಯಮ್ಮ ಹೇಳುವಂತೆ ಘಟನೆಗೂ ಮುನ್ನ ಪ್ರಿಯಾಂಕಾ ಭಯಭೀತಳಾಗಿ ಸೋದರಿಗೆ ಫೋನ್ ಕರೆ ಮಾಡಿದ್ದಾರೆ. ತಾನು ಏಕಾಂಗಿಯಾಗಿದ್ದು, ತನ್ನನ್ನು ಭಯ ಆವರಿಸಿದೆ ಎಂದು ಹೇಳಿಕೊಂಡಿದ್ದಾಳೆ. ಸಂಕಷ್ಟದಿಂದ ತನ್ನನ್ನು ಪಾರಾಗುವುದು ಹೇಗೆ ಎಂದು ಕೇಳಿಕೊಳ್ಳುತ್ತಾಳೆ. ಸ್ಕೂಟಿ ವಾಹನವನ್ನು ಅಲ್ಲೇ ಬಿಟ್ಟು ಬಂದುಬಿಡು, ಅಟ್​ಲೀಸ್ಟ್​ ಹತ್ತಿರದಲ್ಲೇ ಇರುವ ಟೋಲ್​ ಬೂತ್​​ ಬಳಿ ಹೋಗು ಎಂದು ನಾಲ್ಕಾರು ಬಾರಿ ಸೋದರಿ ಸೂಕ್ತ ಸಲಹೆ ನೀಡಿರುವುದು ಫೋನ್​ ಸಂಭಾಷಣೆ ಆಡಿಯೋದಲ್ಲಿ ತಿಳಿದುಬಂದಿದೆ.

Published On - 1:50 pm, Fri, 29 November 19

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?