AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶುವೈದ್ಯೆ ರೇಪ್-ಹತ್ಯೆ ಕೇಸ್: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗಾಗಿ ರೊಚ್ಚಿಗೆದ್ದ ಜನ

ಹೈದರಾಬಾದ್: ಕಾಮುಕರಿಂದ ಹತ್ಯೆಗೀಡಾದ ಡಾ. ಪ್ರಿಯಾಂಕಾ ರೆಡ್ಡಿ ಸಾವಿಗೆ ದೇಶಕ್ಕೆ ದೇಶವೇ ಮರುಗುತ್ತಿದೆ. ಮತ್ತೊಂದ್ಕಡೆ ಜನರ ಆಕ್ರೋಶದ ಕಟ್ಟೆಯೂ ಒಡೆದಿದ್ದು, ಇಂತಹ ಘಟನೆಗಳಿಗೆ ಫುಲ್​ಸ್ಟಾಪ್ ಬೀಳಲಿ ಅಂತಾ ರೊಚ್ಚಿಗೆದ್ದಿದ್ದಾರೆ. ಕಾಮುಕರ ವಿರುದ್ಧ ಘೋಷಣೆ ಕೂಗುತ್ತಿರುವ ಜನ. ಮತ್ತೊಂದ್ಕಡೆ ಡಾ. ಪ್ರಿಯಾಂಕಾ ಸಾವಿಗೆ ನ್ಯಾಯ ಸಿಗಲಿ ಅಂತಾ ಒತ್ತಾಯಿಸಿ ಪ್ರತಿಭಟಿಸ್ತಿರುವ ವಿದ್ಯಾರ್ಥಿಗಳು, ನಾಗರಿಕರು. ಆಂಧ್ರ, ತೆಲಂಗಾಣದಲ್ಲಿ ಪ್ರಿಯಾಂಕಾ ಸಾವಿನ ಕಿಚ್ಚು ಹೊತ್ತಿದೆ. ತಪ್ಪಿತಸ್ಥರನ್ನ ಗಲ್ಲಿಗೇರಿಸಿ ಅಂತಾ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಮುಗ್ಧ ಯುವತಿ ಸಾವಿಗೆ ಮಮ್ಮಲ ಮರುಗಿದ […]

ಪಶುವೈದ್ಯೆ ರೇಪ್-ಹತ್ಯೆ ಕೇಸ್: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗಾಗಿ ರೊಚ್ಚಿಗೆದ್ದ ಜನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 02, 2019 | 6:57 AM

Share

ಹೈದರಾಬಾದ್: ಕಾಮುಕರಿಂದ ಹತ್ಯೆಗೀಡಾದ ಡಾ. ಪ್ರಿಯಾಂಕಾ ರೆಡ್ಡಿ ಸಾವಿಗೆ ದೇಶಕ್ಕೆ ದೇಶವೇ ಮರುಗುತ್ತಿದೆ. ಮತ್ತೊಂದ್ಕಡೆ ಜನರ ಆಕ್ರೋಶದ ಕಟ್ಟೆಯೂ ಒಡೆದಿದ್ದು, ಇಂತಹ ಘಟನೆಗಳಿಗೆ ಫುಲ್​ಸ್ಟಾಪ್ ಬೀಳಲಿ ಅಂತಾ ರೊಚ್ಚಿಗೆದ್ದಿದ್ದಾರೆ.

ಕಾಮುಕರ ವಿರುದ್ಧ ಘೋಷಣೆ ಕೂಗುತ್ತಿರುವ ಜನ. ಮತ್ತೊಂದ್ಕಡೆ ಡಾ. ಪ್ರಿಯಾಂಕಾ ಸಾವಿಗೆ ನ್ಯಾಯ ಸಿಗಲಿ ಅಂತಾ ಒತ್ತಾಯಿಸಿ ಪ್ರತಿಭಟಿಸ್ತಿರುವ ವಿದ್ಯಾರ್ಥಿಗಳು, ನಾಗರಿಕರು. ಆಂಧ್ರ, ತೆಲಂಗಾಣದಲ್ಲಿ ಪ್ರಿಯಾಂಕಾ ಸಾವಿನ ಕಿಚ್ಚು ಹೊತ್ತಿದೆ. ತಪ್ಪಿತಸ್ಥರನ್ನ ಗಲ್ಲಿಗೇರಿಸಿ ಅಂತಾ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ಮುಗ್ಧ ಯುವತಿ ಸಾವಿಗೆ ಮಮ್ಮಲ ಮರುಗಿದ ಜನ:  ಚಿಕಿತ್ಸೆಗೆ ಅಂತಾ ಹೊರ ಹೋಗಿದ್ದಾಗ ಕಾಮುಕರ ಕೈಗೆ ಸಿಕ್ಕು ನರಳಿ-ನರಳಿ ಪ್ರಾಣಬಿಟ್ಟ ಪ್ರಿಯಾಂಕಾಗೆ ನ್ಯಾಯ ಕೊಡಿಸಲೆಂದು ಜನ ಬೀದಿಗಿಳಿದಿದ್ದಾರೆ. ಪಶು ವೈದ್ಯೆ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಸಿದ್ದಲ್ಲದೆ, ಬೆಂಕಿಹಚ್ಚಿ ಸುಟ್ಟ ರಾಕ್ಷಸರನ್ನ ಗಲ್ಲಿಗೆ ಹಾಕಲು ಜನ ಆಗ್ರಹಿಸ್ತಿದ್ದಾರೆ. ಊರುಕೇರಿಯಲ್ಲಿ ಮಾತ್ರವಲ್ಲ ಕಾಲೇಜು, ಕಾರಾಗೃಹಗಳಲ್ಲೂ ಪ್ರತಿಭಟನೆ ಮೊಳಗಿದೆ.

ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ಕೆಸಿಆರ್​:  ಮತ್ತೊಂದ್ಕಡೆ ಈ ಬಗ್ಗೆ ಮಾತನಾಡಿರುವ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮೃಗಗಳಂತೆ ವರ್ತಿಸಿದವರ ವಿರುದ್ಧ ತೆಲಂಗಾಣ ಮುಖ್ಯಮಂತ್ರಿ ಆಕ್ರೋಶ ಹೊರಹಾಕಿದ್ದಾರೆ.

ಮನೆ ಮಗಳನ್ನು ಕಳೆದುಕೊಂಡ ಪ್ರಿಯಾಂಕಾ ಕುಟುಂಬ ದುಖಃದಲ್ಲಿ ಕೈತೊಳೆಯುವಂತಾಗಿದೆ. ಮತ್ತೊಂದ್ಕಡೆ ಆರೋಪಿಗಳ ತನಿಖೆಯೂ ಚುರುಕಾಗಿ ನಡೀತಿದ್ದು, ಪೊಲೀಸರು ವಿಚಾರಣೆ ವೇಳೆ ಹಲವಾರು ವಿಚಾರಗಳನ್ನ ಬಾಯಿ ಬಿಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ತೆಲಂಗಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

Published On - 6:54 am, Mon, 2 December 19

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು