AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶುವೈದ್ಯೆ ರೇಪ್-ಹತ್ಯೆ ಕೇಸ್: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗಾಗಿ ರೊಚ್ಚಿಗೆದ್ದ ಜನ

ಹೈದರಾಬಾದ್: ಕಾಮುಕರಿಂದ ಹತ್ಯೆಗೀಡಾದ ಡಾ. ಪ್ರಿಯಾಂಕಾ ರೆಡ್ಡಿ ಸಾವಿಗೆ ದೇಶಕ್ಕೆ ದೇಶವೇ ಮರುಗುತ್ತಿದೆ. ಮತ್ತೊಂದ್ಕಡೆ ಜನರ ಆಕ್ರೋಶದ ಕಟ್ಟೆಯೂ ಒಡೆದಿದ್ದು, ಇಂತಹ ಘಟನೆಗಳಿಗೆ ಫುಲ್​ಸ್ಟಾಪ್ ಬೀಳಲಿ ಅಂತಾ ರೊಚ್ಚಿಗೆದ್ದಿದ್ದಾರೆ. ಕಾಮುಕರ ವಿರುದ್ಧ ಘೋಷಣೆ ಕೂಗುತ್ತಿರುವ ಜನ. ಮತ್ತೊಂದ್ಕಡೆ ಡಾ. ಪ್ರಿಯಾಂಕಾ ಸಾವಿಗೆ ನ್ಯಾಯ ಸಿಗಲಿ ಅಂತಾ ಒತ್ತಾಯಿಸಿ ಪ್ರತಿಭಟಿಸ್ತಿರುವ ವಿದ್ಯಾರ್ಥಿಗಳು, ನಾಗರಿಕರು. ಆಂಧ್ರ, ತೆಲಂಗಾಣದಲ್ಲಿ ಪ್ರಿಯಾಂಕಾ ಸಾವಿನ ಕಿಚ್ಚು ಹೊತ್ತಿದೆ. ತಪ್ಪಿತಸ್ಥರನ್ನ ಗಲ್ಲಿಗೇರಿಸಿ ಅಂತಾ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಮುಗ್ಧ ಯುವತಿ ಸಾವಿಗೆ ಮಮ್ಮಲ ಮರುಗಿದ […]

ಪಶುವೈದ್ಯೆ ರೇಪ್-ಹತ್ಯೆ ಕೇಸ್: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗಾಗಿ ರೊಚ್ಚಿಗೆದ್ದ ಜನ
ಸಾಧು ಶ್ರೀನಾಥ್​
|

Updated on:Dec 02, 2019 | 6:57 AM

Share

ಹೈದರಾಬಾದ್: ಕಾಮುಕರಿಂದ ಹತ್ಯೆಗೀಡಾದ ಡಾ. ಪ್ರಿಯಾಂಕಾ ರೆಡ್ಡಿ ಸಾವಿಗೆ ದೇಶಕ್ಕೆ ದೇಶವೇ ಮರುಗುತ್ತಿದೆ. ಮತ್ತೊಂದ್ಕಡೆ ಜನರ ಆಕ್ರೋಶದ ಕಟ್ಟೆಯೂ ಒಡೆದಿದ್ದು, ಇಂತಹ ಘಟನೆಗಳಿಗೆ ಫುಲ್​ಸ್ಟಾಪ್ ಬೀಳಲಿ ಅಂತಾ ರೊಚ್ಚಿಗೆದ್ದಿದ್ದಾರೆ.

ಕಾಮುಕರ ವಿರುದ್ಧ ಘೋಷಣೆ ಕೂಗುತ್ತಿರುವ ಜನ. ಮತ್ತೊಂದ್ಕಡೆ ಡಾ. ಪ್ರಿಯಾಂಕಾ ಸಾವಿಗೆ ನ್ಯಾಯ ಸಿಗಲಿ ಅಂತಾ ಒತ್ತಾಯಿಸಿ ಪ್ರತಿಭಟಿಸ್ತಿರುವ ವಿದ್ಯಾರ್ಥಿಗಳು, ನಾಗರಿಕರು. ಆಂಧ್ರ, ತೆಲಂಗಾಣದಲ್ಲಿ ಪ್ರಿಯಾಂಕಾ ಸಾವಿನ ಕಿಚ್ಚು ಹೊತ್ತಿದೆ. ತಪ್ಪಿತಸ್ಥರನ್ನ ಗಲ್ಲಿಗೇರಿಸಿ ಅಂತಾ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ಮುಗ್ಧ ಯುವತಿ ಸಾವಿಗೆ ಮಮ್ಮಲ ಮರುಗಿದ ಜನ:  ಚಿಕಿತ್ಸೆಗೆ ಅಂತಾ ಹೊರ ಹೋಗಿದ್ದಾಗ ಕಾಮುಕರ ಕೈಗೆ ಸಿಕ್ಕು ನರಳಿ-ನರಳಿ ಪ್ರಾಣಬಿಟ್ಟ ಪ್ರಿಯಾಂಕಾಗೆ ನ್ಯಾಯ ಕೊಡಿಸಲೆಂದು ಜನ ಬೀದಿಗಿಳಿದಿದ್ದಾರೆ. ಪಶು ವೈದ್ಯೆ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಸಿದ್ದಲ್ಲದೆ, ಬೆಂಕಿಹಚ್ಚಿ ಸುಟ್ಟ ರಾಕ್ಷಸರನ್ನ ಗಲ್ಲಿಗೆ ಹಾಕಲು ಜನ ಆಗ್ರಹಿಸ್ತಿದ್ದಾರೆ. ಊರುಕೇರಿಯಲ್ಲಿ ಮಾತ್ರವಲ್ಲ ಕಾಲೇಜು, ಕಾರಾಗೃಹಗಳಲ್ಲೂ ಪ್ರತಿಭಟನೆ ಮೊಳಗಿದೆ.

ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ಕೆಸಿಆರ್​:  ಮತ್ತೊಂದ್ಕಡೆ ಈ ಬಗ್ಗೆ ಮಾತನಾಡಿರುವ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮೃಗಗಳಂತೆ ವರ್ತಿಸಿದವರ ವಿರುದ್ಧ ತೆಲಂಗಾಣ ಮುಖ್ಯಮಂತ್ರಿ ಆಕ್ರೋಶ ಹೊರಹಾಕಿದ್ದಾರೆ.

ಮನೆ ಮಗಳನ್ನು ಕಳೆದುಕೊಂಡ ಪ್ರಿಯಾಂಕಾ ಕುಟುಂಬ ದುಖಃದಲ್ಲಿ ಕೈತೊಳೆಯುವಂತಾಗಿದೆ. ಮತ್ತೊಂದ್ಕಡೆ ಆರೋಪಿಗಳ ತನಿಖೆಯೂ ಚುರುಕಾಗಿ ನಡೀತಿದ್ದು, ಪೊಲೀಸರು ವಿಚಾರಣೆ ವೇಳೆ ಹಲವಾರು ವಿಚಾರಗಳನ್ನ ಬಾಯಿ ಬಿಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ತೆಲಂಗಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

Published On - 6:54 am, Mon, 2 December 19

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ