AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು

ಗೆಳೆಯನೊಂದಿಗೆ ಎಂಟನೇ ಮಹಡಿಯ ಬಾಲ್ಕನಿಯಿಂದ ಇಳಿಯಲು ಹೋಗಿ ಕಾಲು ಜಾರಿ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ ವಾಸಿಸುತ್ತಿರಲಿಲ್ಲ ಅದು ಯುವತಿಗೆ ತಂದೆಗೆ ಸೇರಿದ್ದ ಫ್ಲ್ಯಾಟ್ ಆಗಿತ್ತು.

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು
ಸಾವು
ನಯನಾ ರಾಜೀವ್
|

Updated on: Dec 22, 2025 | 11:42 AM

Share

ಹೈದರಾಬಾದ್, ಡಿಸೆಂಬರ್ 22: ಅಪ್ಪ(Father)ನಿಂದ ತಪ್ಪಿಸಿಕೊಳ್ಳಲು ಹೋಗಿ ಯುವತಿ ಬಾಲ್ಕನಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೆಳೆಯನ ಜತೆ ತನ್ನ ಫ್ಲಾಟ್​ನಲ್ಲಿ ಯುವತಿ ಇದ್ದಳು. ಏಕಾಏಕಿ ತಂದೆ ಫ್ಲಾಟ್​ಗೆ ಬಂದಿದ್ದರು. ಬಾಗಿಲು ತಟ್ಟಿದಾಗ ಇಬ್ಬರೂ ಗಾಬರಿಗೊಂಡರು. ಕೂಡಲೇ ಗೆಳೆಯನ ಜತೆ ಪರಾರಿಯಾಗಲು ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ.

ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ ವಾಸಿಸುತ್ತಿರಲಿಲ್ಲ ಅದು ಯುವತಿಗೆ ತಂದೆಗೆ ಸೇರಿದ್ದ ಫ್ಲ್ಯಾಟ್ ಆಗಿತ್ತು.

ಆ ಫ್ಲ್ಯಾಟ್​ನಲ್ಲಿ ಯಾರೂ ಇಲ್ಲದ ಕಾರಣ ಸಕೀನಾ ಅಪ್ಪನ ಬಳಿ ಇದ್ದ ಕೀ ತೆಗೆದುಕೊಂಡು ತನ್ನ ಗೆಳೆಯನ ಜತೆ ಫ್ಲ್ಯಾಟ್​ಗೆ ಬಂದಿದ್ದರು. ಆದರೆ, ಅವರು ಒಳಗೆ ಇದ್ದಾಗ ಆಕೆಯ ತಂದೆ ಫ್ಲಾಟ್‌ಗೆ ಬಂದಿದ್ದರು.ಫ್ಲಾಟ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ತಂದೆ ಒಳಗೆ ಹೋಗಲು ಪ್ರಯತ್ನಿಸಿದರು. ಬಾಗಿಲಲ್ಲಿ ಯಾರಿದ್ದಾರೆಂದು ಅರಿತ ಯುವತಿ ಮತ್ತು ಆಕೆಯ ಗೆಳೆಯ ಭಯಭೀತರಾದರು.

ಮತ್ತಷ್ಟು ಓದಿ: Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ

ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಇಬ್ಬರೂ ಎಂಟನೇ ಮಹಡಿಯ ಬಾಲ್ಕನಿಯಿಂದ ಇಳಿಯಲು ಪ್ರಯತ್ನಿಸಿದರು. ಆಕೆಯ ಗೆಳೆಯ ಆಕೆಯ ಕೈ ಹಿಡಿದಿದ್ದ ಸಕೀನಾ ಏಳನೇ ಮಹಡಿಗೆ ಇಳಿಯಲು ಪ್ರಯತ್ನಿಸಿದರು. ದುರಂತವಶಾತ್, ಅವರು ಎತ್ತರದಿಂದ ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯ ನಂತರ, ಪೊಲೀಸರು ಸಕೀನಾ ಗೆಳಯ ಅಲಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು