AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಸಂಬಂಧ ಹೊಂದಿದ್ದವನಿಗೆ ಮಗಳ ಕೊಟ್ಟು ಮದುವೆ ಮಾಡಿದ ತಾಯಿ, ಯುವತಿ ಆತ್ಮಹತ್ಯೆ

ತಾಯಿಯೊಬ್ಬಳು ತಾನು ಅಕ್ರಮ ಸಂಬಂಧ ಹೊಂದಿದವನೊಂದಿಗೆ ಮಗಳನ್ನು ಬಲವಂತವಾಗಿ ಮದುವೆ(Marriage) ಮಾಡಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈ ಮದುವೆಯಿಂದ ಮನನೊಂದು 19 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. 17 ವರ್ಷದ ಕಿರಿಯ ಮಗಳು ನೀಡಿದ ದೂರಿನ ಆಧಾರದ ಮೇಲೆ, ತನ್ನ ಮಗಳ ಆತ್ಮಹತ್ಯೆಗೆ ತಾಯಿಯೇ ಕಾರಣ ಎಂದು ತಿಳಿದುಬಂದಿದ್ದು ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಾನು ಸಂಬಂಧ ಹೊಂದಿದ್ದವನಿಗೆ ಮಗಳ ಕೊಟ್ಟು ಮದುವೆ ಮಾಡಿದ ತಾಯಿ, ಯುವತಿ ಆತ್ಮಹತ್ಯೆ
ಸಾವು Image Credit source: Hindustan Times
ನಯನಾ ರಾಜೀವ್
|

Updated on: May 04, 2025 | 1:19 PM

Share

ಹೈದರಾಬಾದ್, ಮೇ 04: ತಾಯಿಯೊಬ್ಬಳು ತಾನು ಅಕ್ರಮ ಸಂಬಂಧ ಹೊಂದಿದವನೊಂದಿಗೆ ಮಗಳನ್ನು ಬಲವಂತವಾಗಿ ಮದುವೆ(Marriage) ಮಾಡಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈ ಮದುವೆಯಿಂದ ಮನನೊಂದು 19 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

17 ವರ್ಷದ ಕಿರಿಯ ಮಗಳು ನೀಡಿದ ದೂರಿನ ಆಧಾರದ ಮೇಲೆ, ತನ್ನ ಮಗಳ ಆತ್ಮಹತ್ಯೆಗೆ ತಾಯಿಯೇ ಕಾರಣ ಎಂದು ತಿಳಿದುಬಂದಿದ್ದು ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೂರಿನಲ್ಲಿರುವ ವಿವರಗಳ ಪ್ರಕಾರ, ಹುಡುಗಿಯ ತಾಯಿ ತಂದೆಯಿಂದ ಬೇರ್ಪಟ್ಟ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಒಬ್ಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಆಕೆಯ ತಾಯಿ ಅನಿತಾ ಪೆರಂ ನವೀನ್ ಕುಮಾರ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದರು. ಅವರು ಆಗಾಗ ತಮ್ಮ ಮನೆಗೆ ಭೇಟಿ ನೀಡುತ್ತಿದ್ದ ಎಂದು ಬಾಲಕಿ ಹೇಳಿಕೊಂಡಿದ್ದಾಳೆ. ತಮ್ಮ ಸಂಬಂಧವನ್ನು ಮುಂದುವರಿಸಲು, ತಾಯಿ ತನ್ನ ಹಿರಿಯ ಮಗಳನ್ನು ತನ್ನ ಪ್ರಿಯಕರನಿಗೆ ಮದುವೆ ಮಾಡಿಕೊಟ್ಟರು.

ಇದನ್ನೂ ಓದಿ
Image
ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೇಮ ವಿವಾಹ!
Image
ವರ್ಷದ ಈ ತಿಂಗಳಿನಲ್ಲಿ ಮದುವೆ ಮಾಡಿಕೊಳ್ಳಲ್ಲ… ಏಕೆ ಗೊತ್ತಾ?
Image
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
Image
ಅನ್ಯಕೋಮಿನವನೊಂದಿಗೆ ಹಿಂದೂ ಯುವತಿ ಮದುವೆ: ವಿವಾಹ ಮಾಡಿಸಿದ್ದವನಿಗೆ ಬೆದರಿಕೆ

ಈ ಪರಿಸ್ಥಿತಿಯಿಂದ ಬೇಸತ್ತು ಹಿರಿಯ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಿರಿಯ ಮಗಳು ಹೇಳಿಕೊಂಡಿದ್ದಾರೆ. ಮೃತ ಮಹಿಳೆ ಹೈದರಾಬಾದ್‌ನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಮದುವೆಯ ನಂತರವೂ ತನ್ನ ತಾಯಿಯೊಂದಿಗೆ ತನ್ನ ಗಂಡನ ಸಂಬಂಧದ ಬಗ್ಗೆ ತಿಳಿದಾಗ ಆಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮತ್ತಷ್ಟು ಓದಿ: ಭಾವಿ ಅಳಿಯನ ಅತ್ತೆ ಪರಾರಿ ಪ್ರಕರಣ, ಎಲ್ಲವೂ ಸರಿ ಇದ್ದಿದ್ರೆ ಇಂದು ಶಿವಾನಿ ಮದುವೆ ನಡೀತಿತ್ತು

ತನ್ನ ಸಹೋದರಿ ತನ್ನ ಗಂಡನ ಮನೆ ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕಿದ್ದಳು ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ.ಗಂಡನಿಂದ ದೂರವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಾಯಿ ಮಗಳಿಗೆ ಬೆದರಿಕೆ ಹಾಕಿದ್ದಳು.

ಮೀರ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಆರೋಪಿ ಮಹಿಳೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306 ಮತ್ತು 420 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. Newsd.in ಈ ಕುರಿತು ವರದಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ