AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಮೊದಲ ಬುಲೆಟ್ ರೈಲು, 2023ರಲ್ಲಿ ದೇಶದಲ್ಲಿ ಮೊದಲ ಹೈಡ್ರೋಜನ್​ ರೈಲು ಸಂಚಾರ: ಬೆಂಗಳೂರಿನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ

ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಕೇಂದ್ರ ರೈಲ್ವೇ ಮತ್ತು ಐಟಿ ಇಲಾಖೆ ಸಚಿವ ಅಶ್ವಿನ್ ವೈಷ್ಣವ್ ಅವರು ಹೈಡ್ರೋಜನ್, ಬುಲೆಟ್ ರೈಲಿನ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಆನ್​​ಲೈನ್​​ ಗೇಮ್​​ಗಳ ಜಾಹೀರಾತು ನಿರ್ಬಂಧದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಶೀಘ್ರವೇ ಮೊದಲ ಬುಲೆಟ್ ರೈಲು, 2023ರಲ್ಲಿ ದೇಶದಲ್ಲಿ ಮೊದಲ ಹೈಡ್ರೋಜನ್​ ರೈಲು ಸಂಚಾರ: ಬೆಂಗಳೂರಿನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಣೆ
ಕೇಂದ್ರ ರೈಲ್ವೇ ಮತ್ತು ಐಟಿ ಇಲಾಖೆ ಸಚಿವ ಅಶ್ವಿನ್ ವೈಷ್ಣವ್
TV9 Web
| Edited By: |

Updated on:Dec 18, 2022 | 6:53 PM

Share

ಬೆಂಗಳೂರು: ಮುಂದಿನ ವರ್ಷ ದೇಶದಲ್ಲಿ ಮೊದಲ ಹೈಡ್ರೋಜನ್​ ರೈಲು (hydrogen train) ಸಂಚರಿಸಲಿದೆ. ಇನ್ನು ಬುಲೆಟ್ ರೈಲು ಬೋಗಿಗಳ ನಿರ್ಮಾಣ ವೇಗಗತಿಯಲ್ಲಿ ಸಾಗುತ್ತಿದ್ದು, ಶೀಘ್ರವೇ ಮುಂಬೈ-ಅಹ್ಮದಾಬಾದ್ ನಡುವೆ ಮೊದಲ ಬುಲೆಟ್ ರೈಲು (bullet train) ಸಂಚಾರ ಮಾಡಲಿದೆ ಕೇಂದ್ರ ರೈಲ್ವೇ ಮತ್ತು ಐಟಿ ಇಲಾಖೆ ಸಚಿವ ಅಶ್ವಿನ್ ವೈಷ್ಣವ್(ashwini vaishnaw) ಹೇಳಿದರು.

ಇದನ್ನೂ ಓದಿ: ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಇಂದು (ಡಿಸೆಂಬರ್ 18) ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅಶ್ವಿನ್ ವೈಷ್ಣವ್, ಬುಲೆಟ್ ರೈಲು ಬೋಗಿಗಳ ನಿರ್ಮಾಣ ವೇಗಗತಿಯಲ್ಲಿ ಸಾಗುತ್ತಿದೆ. ಇದುವರೆಗೆ 116 ಕಿ.ಮೀ ವರೆಗೆ ಬುಲೆಟ್ ಹಳಿ ನಿರ್ಮಾಣವಾಗಿದ್ದು, ಶೀಘ್ರವೇ ಮುಂಬೈ-ಅಹ್ಮದಾಬಾದ್ ನಡುವೆ ಮೊದಲ ಬುಲೆಟ್ ರೈಲು ಸಂಚಾರ ಮಾಡಲಿದೆ. ಬುಲೆಟ್ ರೈಲಿನ ವೇಗ ಗಂಟೆಗೆ 320 ಕಿ.ಮೀ. ಇರಲಿದೆ ಎಂದು ತಿಳಿಸಿದರು.

ವಂದೇ ಭಾರತ್ ಸದ್ಯ ತಿಂಗಳಿಗೆ ಮೂರು ರೈಲು ಬೋಗಿಗಳ ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆರು ಬೋಗಿಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, 28% ವರೆಗೆ ರೈಲ್ವೇ ವಲಯ ತನ್ನ ಮಾರುಕಟ್ಟೆ ಪಾಲು ಪಡೆಯಲಿದೆ ಎಂದು ಹೇಳಿದ ಅಶ್ವಿನ್ ವೈಷ್ಣವ್ ಅವರು, 2023ರ ಡಿಸೆಂಬರ್​ ಒಳಗೆ ದೇಶದಲ್ಲಿ ಮೊದಲ ಹೈಡ್ರೋಜನ್​ ರೈಲು ಸಂಚರಿಸಲಿದೆ ಎಂದರು.

ಆನ್​​ಲೈನ್​​ ಗೇಮ್​​ಗಳ ಜಾಹೀರಾತು ನಿರ್ಬಂಧಕ್ಕೆ ಒತ್ತಾಯ ಕೇಳಿಬರುತ್ತಿರುವ ಬಗ್ಗೆ ಮಾತನಾಡಿದ ಅಶ್ವಿನಿ ವೈಷ್ಣವ್​​, ಎಲ್ಲಾ ರಾಜ್ಯಗಳೂ ಆನ್​​ಲೈನ್​ ಗೇಮ್​ ನಿರ್ಬಂಧಕ್ಕೆ ಆಸಕ್ತಿ ತೋರಿವೆ. ಆನ್​​ಲೈನ್​ ಗೇಮ್​ ನಿರ್ಬಂಧ ಬಗ್ಗೆ ಕೇಂದ್ರ ಮಟ್ಟದಲ್ಲೂ ಚರ್ಚೆ ಆಗುತ್ತಿದೆ. ಹೊಸ ಕಾನೂನು ಜಾರಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಇನ್ನು ಇದರ ಜೊತೆ ಪ್ರಮುಖವಾಗಿ ಕರ್ನಾಟಕದ 43 ರೈಲ್ವೇ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸವುದಾಗಿ ಹೇಳಿದರು. ಈ 43 ರೈಲ್ವೇ ನಿಲ್ದಾಣಗಳಲ್ಲಿ ಯಶವಂತಪುರ ಮತ್ತು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಒಳಗೊಂಡಿವೆ.

ಬೆಂಗಳೂರು ಮಹಾನಗರಕ್ಕೆ ಹೊರ ವರ್ತೂಲ ರೈಲು ಟೆಂಡರ್​ ಎಲ್‌ ಆ್ಯಂಡ್‌ ಟಿ ಕಂಪನಿ ತೆಗೆದುಕೊಂಡಿದ್ದು, ಅಧಿಕೃತವಾಗಿ ಸರ್ಕಾರದಿಂದ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದರು.

ಮುಂದಿನ ದೀಪಾವಳಿ ವೇಳೆಗೆ ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ 5ಜಿ ಸೇವೆ ಲಭ್ಯವಾಗಲಿದೆ ಎಂದರು.

ಮಹತ್ವಾಕಾಂಕ್ಷೆಯ ತಲಚೇರಿ – ವಯನಾಡ್-ಮೈಸೂರು ರೈಲ್ವೇ ಯೋಜನೆಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನ ವೈಷ್ಣವ್‌ ಒಪ್ಪಿಗೆ ಸೂಚಿಸಿಲ್ಲ. ಇನ್ನು ಇದೇ ವೇಳೆ ಡಿಜಿಟಲ್​ ಇಂಡಿಯಾ ಬಿಲ್​ ಶ್ರೀಘ್ರದಲ್ಲಿ ಜಾರಿಗೆ ತರುವುದಾಗಿ ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:11 pm, Sun, 18 December 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ