ನಾನು ಭಾರತೀಯ ಮುಸ್ಲಿಂ, ಚೀನಾದ ಮುಸ್ಲಿಂ ಅಲ್ಲ: ಕೇಂದ್ರ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ಎಲ್ಲರೂ ವಿಭಿನ್ನವಾಗಿರಬಹುದು. ಆದರೆ ನಾವು ಒಟ್ಟಾಗಿ ಈ ದೇಶವನ್ನು ಕಟ್ಟಬಹುದು. ಅದನ್ನು ಪ್ರೀತಿ ಎಂದು ಕರೆಯಲಾಗುತ್ತದೆ. ಧರ್ಮಗಳು ಒಬ್ಬರನ್ನೊಬ್ಬರು ದ್ವೇಷಿಸಲು ಜನರಿಗೆ ಕಲಿಸುವುದಿಲ್ಲ. ಇದು ಹಿಂದೂಸ್ತಾನ್. ಇದು ಎಲ್ಲರಿಗೂ ಸೇರಿದೆ

ನಾನು ಭಾರತೀಯ ಮುಸ್ಲಿಂ, ಚೀನಾದ ಮುಸ್ಲಿಂ ಅಲ್ಲ: ಕೇಂದ್ರ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ
ಛಗನ್ ಭುಜಬಲ್ ಜನ್ಮ ದಿನಾಚರಣೆ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Oct 13, 2022 | 7:04 PM

ಮುಂಬೈ: ದೇಶದಲ್ಲಿ ಮುಸ್ಲಿಮರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಜಮ್ಮು ಮತ್ತು ಕಾಶ್ಮೀರದ (Jammu and Kashmir )ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah). “ನಾವು ನಿಮ್ಮೊಂದಿಗಿದ್ದೇವೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಾವು ದೇಶವನ್ನು ಒಂದಾಗಿ ಇಡಬೇಕು. ನಾನು ಮುಸ್ಲಿಂ, ಆದರೆ ಭಾರತೀಯ ಮುಸ್ಲಿಂ. ನಾನು ಚೀನಾದ ಮುಸ್ಲಿಂ ಅಲ್ಲ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ಆಯೋಜಿಸಿದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ಹಿರಿಯ ನಾಯಕ ಛಗನ್ ಭುಜಬಲ್ ಅವರ 75 ನೇ ಹುಟ್ಟುಹಬ್ಬವನ್ನು ಆಚರಿಸುವ ಕಾರ್ಯಕ್ರಮವಾಗಿದೆ ಇದು. ಶಿವಸೇನೆಯ ಉದ್ಧವ್ ಠಾಕ್ರೆ, ಗೀತರಚನೆಕಾರ ಜಾವೇದ್ ಅಖ್ತರ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿಯ ಒಬ್ಬ ಸಂಸದ ಮತ್ತು ಶಾಸಕ ಮುಸ್ಲಿಂ ಸಮುದಾಯದ ಸಂಪೂರ್ಣ ಬಹಿಷ್ಕಾರಕ್ಕೆ ಕರೆ ನೀಡುವ ದ್ವೇಷದ ಭಾಷಣಗಳನ್ನು ನೀಡಿದ ಕೆಲವೇ ದಿನಗಳಲ್ಲಿ ಅಬ್ದುಲ್ಲಾ ಅವರ ಈ ಹೇಳಿಕೆ ಬಂದಿದೆ.

“ಎಲ್ಲರೂ ವಿಭಿನ್ನವಾಗಿರಬಹುದು. ಆದರೆ ನಾವು ಒಟ್ಟಾಗಿ ಈ ದೇಶವನ್ನು ಕಟ್ಟಬಹುದು. ಅದನ್ನು ಪ್ರೀತಿ ಎಂದು ಕರೆಯಲಾಗುತ್ತದೆ. ಧರ್ಮಗಳು ಒಬ್ಬರನ್ನೊಬ್ಬರು ದ್ವೇಷಿಸಲು ಜನರಿಗೆ ಕಲಿಸುವುದಿಲ್ಲ. ಇದು ಹಿಂದೂಸ್ತಾನ್. ಇದು ಎಲ್ಲರಿಗೂ ಸೇರಿದೆ” ಎಂದು ಅಬ್ದುಲ್ಲಾ ಹೇಳಿದ್ದಾರೆ.

ಎನ್‌ಸಿಪಿಯ ಭುಜಬಲ್ ಅವರು ಶಿವಸೇನಾ ಜತೆ ಸಂಬಂಧ ಹೊಂದಿದ್ದು ಅವರ ಜನ್ಮದಿನದ ಆಚರಣೆಯಲ್ಲಿ ಠಾಕ್ರೆ ಹಾಜರಾಗಿದ್ದರು. ಎನ್‌ಸಿಪಿಯು ಠಾಕ್ರೆ ನೇತೃತ್ವದ ಶಿವಸೇನಾ ಗುಂಪಿನ ಮಿತ್ರ ಪಕ್ಷವಾಗಿದೆ. ಕಳೆದ ವಾರ, ಚುನಾವಣಾ ಆಯೋಗವು ಮಹಾರಾಷ್ಟ್ರದಲ್ಲಿ ಮುಂಬರುವ ಉಪಚುನಾವಣೆಗೆ ಚುನಾವಣಾ ಚಿಹ್ನೆ ಉರಿಯುತ್ತಿಲರುವ ದೊಂದಿ ಬಳಸಲು ಟೀಮ್ ಠಾಕ್ರೆಗೆ ಅನುಮತಿ ನೀಡಿತು. ಈ ಚಿಹ್ನೆಯನ್ನು 1985 ರ ಚುನಾವಣೆಯಲ್ಲಿ ಸೇನೆ ಬಳಸಿತ್ತು. ಆಗ ಭುಜಬಲ್ ಅವರು ಮುಂಬೈನ ಮಜಗಾಂವ್ ಕ್ಷೇತ್ರದಿಂದ ಗೆದ್ದಿದ್ದರು. ಭುಜಬಲ್ ನಂತರ ಸೇನೆಯನ್ನು ತೊರೆದು ಕಾಂಗ್ರೆಸ್‌ಗೆ ಸೇರಿದರು ಅಲ್ಲಿಂದ ಅವರು ಎನ್‌ಸಿಪಿಗೆ ಜಿಗಿದಿದ್ದರು.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು