AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಕಥೆ ಬಿಡಿ, ಬದುಕಿ ಬಾಳಬೇಕಿರುವವರಿಗೆ ಲಸಿಕೆ ಕೊಡಿ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ರಾಷ್ಟ್ರೀಯ ನಾಯಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ನನ್ನ ಕಥೆ ಬಿಡಿ, ಬದುಕಿ ಬಾಳಬೇಕಿರುವವರಿಗೆ ಲಸಿಕೆ ಕೊಡಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Mar 01, 2021 | 9:58 PM

Share

ಮೊದಲ ಹಂತದಲ್ಲಿ 1.30 ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇಂದಿನಿಂದ (ಮಾರ್ಚ್ 1) 2ನೇ ಹಂತದ ಲಸಿಕೆ ಅಭಿಯಾನ ಶುರುವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. 45 ವರ್ಷ ಮೇಲ್ಪಟ್ಟವರೂ ಸಹ ಇತರ ರೋಗಗಳಿಂದ ಬಳಲುತ್ತಿದ್ದರೆ ಲಸಿಕೆ ಪಡೆಯಬಹುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ರಾಷ್ಟ್ರೀಯ ನಾಯಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ಎರಡನೇ ಹಂತದ ಕೊರೊನಾ ಲಸಿಕೆ ನೀಡುತ್ತಿರುವವರ ಬಗ್ಗೆ ಕೇಳಿದ ಪ್ರಶ್ನೆಗೆ ಖರ್ಗೆ ಉತ್ತರ ನೀಡಿದ್ದಾರೆ. ನನ್ನ ವಯಸ್ಸು 70 ವರ್ಷದಾಟಿದೆ. ನಾನು ಇನ್ನು ಹೆಚ್ಚು ಅಂದರೆ 10-15 ವರ್ಷ ಬದುಕಬಹುದು. ಹೀಗಾಗಿ ಬಾಳಿ ಬದುಕಬೇಕಾದ ಯುವಕರಿಗೆ ಕೊರೊನಾ ಲಸಿಕೆ ನೀಡಿ ಎಂದು ಮನವಿ ಮಾಡಿದ್ದಾರೆ.

ದೇಶದ 10 ಸಾವಿರ ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡಲು ನಿರ್ಧರಿಸಿದ್ದು, 20 ಸಾವಿರ ಖಾಸಗಿ ಕೇಂದ್ರಗಳ ಮೂಲಕವೂ ಲಸಿಕೆ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ವೈದ್ಯಕೀಯ ಕೇಂದ್ರಗಳಲ್ಲಿ ಲಸಿಕೆಗೆ 250 ರೂಪಾಯಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.

ರಾಜಕೀಯ ನಾಯಕರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿ ಅವರು ಕೊವಿಡ್​​-19 ಲಸಿಕೆ ಪಡೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಇಂದು ಕೊರೊನಾ ಲಸಿಕೆ ಪಡೆದಿದ್ದಾರೆ. ಏಮ್ಸ್​ ಆಸ್ಪತ್ರೆಯಲ್ಲಿ ಮೋದಿ ಲಸಿಕೆ ಪಡೆದುಕೊಂಡರೆ, ಮೇದಾಂತಾ ಆಸ್ಪತ್ರೆಯ ವೈದ್ಯರು ಅಮಿತ್​ ಶಾಗೆ ಕೊರೊನಾ ಔಷಧ ಕೊಟ್ಟಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಪಡೆದ ಕೊವಿಡ್​ ವ್ಯಾಕ್ಸಿನ್ ಯಾವುದು? ಲಸಿಕೆ ಪಡೆದ ಬಳಿಕ ಪುದುಚೇರಿ, ಕೇರಳದ ನರ್ಸ್​ಗಳಿಗೆ ಹೇಳಿದ್ದೇನು?

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ