AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಕಥೆ ಬಿಡಿ, ಬದುಕಿ ಬಾಳಬೇಕಿರುವವರಿಗೆ ಲಸಿಕೆ ಕೊಡಿ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ರಾಷ್ಟ್ರೀಯ ನಾಯಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ನನ್ನ ಕಥೆ ಬಿಡಿ, ಬದುಕಿ ಬಾಳಬೇಕಿರುವವರಿಗೆ ಲಸಿಕೆ ಕೊಡಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ
ರಾಜೇಶ್ ದುಗ್ಗುಮನೆ
| Edited By: |

Updated on: Mar 01, 2021 | 9:58 PM

Share

ಮೊದಲ ಹಂತದಲ್ಲಿ 1.30 ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇಂದಿನಿಂದ (ಮಾರ್ಚ್ 1) 2ನೇ ಹಂತದ ಲಸಿಕೆ ಅಭಿಯಾನ ಶುರುವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. 45 ವರ್ಷ ಮೇಲ್ಪಟ್ಟವರೂ ಸಹ ಇತರ ರೋಗಗಳಿಂದ ಬಳಲುತ್ತಿದ್ದರೆ ಲಸಿಕೆ ಪಡೆಯಬಹುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ರಾಷ್ಟ್ರೀಯ ನಾಯಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ಎರಡನೇ ಹಂತದ ಕೊರೊನಾ ಲಸಿಕೆ ನೀಡುತ್ತಿರುವವರ ಬಗ್ಗೆ ಕೇಳಿದ ಪ್ರಶ್ನೆಗೆ ಖರ್ಗೆ ಉತ್ತರ ನೀಡಿದ್ದಾರೆ. ನನ್ನ ವಯಸ್ಸು 70 ವರ್ಷದಾಟಿದೆ. ನಾನು ಇನ್ನು ಹೆಚ್ಚು ಅಂದರೆ 10-15 ವರ್ಷ ಬದುಕಬಹುದು. ಹೀಗಾಗಿ ಬಾಳಿ ಬದುಕಬೇಕಾದ ಯುವಕರಿಗೆ ಕೊರೊನಾ ಲಸಿಕೆ ನೀಡಿ ಎಂದು ಮನವಿ ಮಾಡಿದ್ದಾರೆ.

ದೇಶದ 10 ಸಾವಿರ ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡಲು ನಿರ್ಧರಿಸಿದ್ದು, 20 ಸಾವಿರ ಖಾಸಗಿ ಕೇಂದ್ರಗಳ ಮೂಲಕವೂ ಲಸಿಕೆ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ವೈದ್ಯಕೀಯ ಕೇಂದ್ರಗಳಲ್ಲಿ ಲಸಿಕೆಗೆ 250 ರೂಪಾಯಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.

ರಾಜಕೀಯ ನಾಯಕರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿ ಅವರು ಕೊವಿಡ್​​-19 ಲಸಿಕೆ ಪಡೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಇಂದು ಕೊರೊನಾ ಲಸಿಕೆ ಪಡೆದಿದ್ದಾರೆ. ಏಮ್ಸ್​ ಆಸ್ಪತ್ರೆಯಲ್ಲಿ ಮೋದಿ ಲಸಿಕೆ ಪಡೆದುಕೊಂಡರೆ, ಮೇದಾಂತಾ ಆಸ್ಪತ್ರೆಯ ವೈದ್ಯರು ಅಮಿತ್​ ಶಾಗೆ ಕೊರೊನಾ ಔಷಧ ಕೊಟ್ಟಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಪಡೆದ ಕೊವಿಡ್​ ವ್ಯಾಕ್ಸಿನ್ ಯಾವುದು? ಲಸಿಕೆ ಪಡೆದ ಬಳಿಕ ಪುದುಚೇರಿ, ಕೇರಳದ ನರ್ಸ್​ಗಳಿಗೆ ಹೇಳಿದ್ದೇನು?

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ