AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹಿಂದೂ, ಹಾಗಾಗಿ ದೇವಸ್ಥಾನಗಳಿಗೆ  ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್

Arvind Kejriwal ನೀವು ದೇವಸ್ಥಾನಕ್ಕೆ ಹೋಗುತ್ತೀರಾ? ನಾನು ಕೂಡ ದೇವಸ್ಥಾನಕ್ಕೆ ಹೋಗುತ್ತೇನೆ. ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ನೀವು ಅದನ್ನು ಭೇಟಿ ಮಾಡಿದಾಗ ನಿಮಗೆ ಶಾಂತಿ ಸಿಗುತ್ತದೆ.

ನಾನು ಹಿಂದೂ, ಹಾಗಾಗಿ ದೇವಸ್ಥಾನಗಳಿಗೆ  ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 07, 2021 | 8:02 PM

Share

ಪಣಜಿ: ನಾನು ಹಿಂದೂ ಎಂಬ ಕಾರಣಕ್ಕೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಇದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸಬಾರದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ಎರಡು ದಿನಗಳ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಆಮ್ ಆದ್ಮಿ ಪಕ್ಷದ (Aam Aadmi Party) ರಾಷ್ಟ್ರೀಯ ಸಂಚಾಲಕರಾದ ಕೇಜ್ರಿವಾಲ್ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ “ಮೃದು ಹಿಂದುತ್ವ” ದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ. “ನೀವು ದೇವಸ್ಥಾನಕ್ಕೆ ಹೋಗುತ್ತೀರಾ? ನಾನು ಕೂಡ ದೇವಸ್ಥಾನಕ್ಕೆ ಹೋಗುತ್ತೇನೆ. ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ನೀವು ಅದನ್ನು ಭೇಟಿ ಮಾಡಿದಾಗ ನಿಮಗೆ ಶಾಂತಿ ಸಿಗುತ್ತದೆ. ಅವರ (ಮೃದು ಹಿಂದುತ್ವದ ಆರೋಪ ಮಾಡುವವರು) ಆಕ್ಷೇಪಣೆ ಏನು? ಏಕೆ ವಿರೋಧ ವ್ಯಕ್ತಪಡಿಸಬೇಕು? ನಾನು ಹಿಂದೂ ಎಂಬ ಕಾರಣಕ್ಕೆ ನಾನು ದೇವಸ್ಥಾನಕ್ಕೆ ಹೋಗುತ್ತಿದ್ದೇನೆ, ನನ್ನ ಪತ್ನಿ ಗೌರಿಶಂಕರ ದೇವಸ್ಥಾನಕ್ಕೆ ಭೇಟಿ ನೀಡುತ್ತಾಳೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ತೀರ್ಥಯಾತ್ರೆಗಳನ್ನು ಪ್ರಾಯೋಜಿಸುವಂತಹ ಕರಾವಳಿ ರಾಜ್ಯದ ಯೋಜನೆಗಳನ್ನು ಎಎಪಿ ನಕಲು ಮಾಡುತ್ತಿದೆ ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಸಾವಂತ್ ಅವರು ನಿಜವಾಗಿಯೂ ತಮ್ಮ ಪಕ್ಷವನ್ನು ನಕಲಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. | “ಪ್ರಮೋದ್ ಸಾವಂತ್ ನಮ್ಮನ್ನು ನಕಲು ಮಾಡುತ್ತಿದ್ದಾರೆ ಎಂದು ನಾನು ಹೇಳಬಯಸುತ್ತೇನೆ, ನಾವು ವಿದ್ಯುತ್ ಉಚಿತ ನೀಡುತ್ತೇವೆ ಎಂದು ನಾನು ಹೇಳಿದಾಗ ಅವರು ನೀರು ಉಚಿತವಾಗಿ ನೀಡಿದರು, ನಾವು ಉದ್ಯೋಗ ಭತ್ಯೆ ನೀಡುತ್ತೇವೆ ಎಂದು ಹೇಳಿದಾಗ ಅವರು ಸುಮಾರು 10,000 ಉದ್ಯೋಗಗಳನ್ನು ಘೋಷಿಸಿದರು. ನಾನು ತೀರ್ಥಯಾತ್ರೆಗಳ ಬಗ್ಗೆ ಮಾತನಾಡುವಾಗ ಅವರು ತಮ್ಮ ಯೋಜನೆ ಘೋಷಣೆ ಮಾಡಿದರು ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿ ಮುಖ್ಯಮಂತ್ರಿಗಳು ತಮ್ಮ ಭೇಟಿಯ ಸಮಯದಲ್ಲಿ, ಭಂಡಾರಿ ಸಮುದಾಯದ ಸದಸ್ಯರನ್ನು ಭೇಟಿ ಮಾಡಿದರು.ಅದೇ ವೇಳೆ ಕಾರ್ಮಿಕ ಸಂಘಟನೆಯ ಮತ್ತು ಗಣಿ ಉದ್ಯಮಿ ನಾಯಕ ಪುತಿ ಗಾಂವ್ಕರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು.

ಇದನ್ನೂ ಓದಿ: ಕೊವಿಡ್ ಲಸಿಕೆ ವಿತರಣೆ, ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ನಿರ್ಧಾರವನ್ನು ಶ್ಲಾಘಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ