AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹಿಂದೂ, ಹಾಗಾಗಿ ದೇವಸ್ಥಾನಗಳಿಗೆ  ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್

Arvind Kejriwal ನೀವು ದೇವಸ್ಥಾನಕ್ಕೆ ಹೋಗುತ್ತೀರಾ? ನಾನು ಕೂಡ ದೇವಸ್ಥಾನಕ್ಕೆ ಹೋಗುತ್ತೇನೆ. ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ನೀವು ಅದನ್ನು ಭೇಟಿ ಮಾಡಿದಾಗ ನಿಮಗೆ ಶಾಂತಿ ಸಿಗುತ್ತದೆ.

ನಾನು ಹಿಂದೂ, ಹಾಗಾಗಿ ದೇವಸ್ಥಾನಗಳಿಗೆ  ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 07, 2021 | 8:02 PM

Share

ಪಣಜಿ: ನಾನು ಹಿಂದೂ ಎಂಬ ಕಾರಣಕ್ಕೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಇದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸಬಾರದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ಎರಡು ದಿನಗಳ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಆಮ್ ಆದ್ಮಿ ಪಕ್ಷದ (Aam Aadmi Party) ರಾಷ್ಟ್ರೀಯ ಸಂಚಾಲಕರಾದ ಕೇಜ್ರಿವಾಲ್ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ “ಮೃದು ಹಿಂದುತ್ವ” ದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ. “ನೀವು ದೇವಸ್ಥಾನಕ್ಕೆ ಹೋಗುತ್ತೀರಾ? ನಾನು ಕೂಡ ದೇವಸ್ಥಾನಕ್ಕೆ ಹೋಗುತ್ತೇನೆ. ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ನೀವು ಅದನ್ನು ಭೇಟಿ ಮಾಡಿದಾಗ ನಿಮಗೆ ಶಾಂತಿ ಸಿಗುತ್ತದೆ. ಅವರ (ಮೃದು ಹಿಂದುತ್ವದ ಆರೋಪ ಮಾಡುವವರು) ಆಕ್ಷೇಪಣೆ ಏನು? ಏಕೆ ವಿರೋಧ ವ್ಯಕ್ತಪಡಿಸಬೇಕು? ನಾನು ಹಿಂದೂ ಎಂಬ ಕಾರಣಕ್ಕೆ ನಾನು ದೇವಸ್ಥಾನಕ್ಕೆ ಹೋಗುತ್ತಿದ್ದೇನೆ, ನನ್ನ ಪತ್ನಿ ಗೌರಿಶಂಕರ ದೇವಸ್ಥಾನಕ್ಕೆ ಭೇಟಿ ನೀಡುತ್ತಾಳೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ತೀರ್ಥಯಾತ್ರೆಗಳನ್ನು ಪ್ರಾಯೋಜಿಸುವಂತಹ ಕರಾವಳಿ ರಾಜ್ಯದ ಯೋಜನೆಗಳನ್ನು ಎಎಪಿ ನಕಲು ಮಾಡುತ್ತಿದೆ ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಸಾವಂತ್ ಅವರು ನಿಜವಾಗಿಯೂ ತಮ್ಮ ಪಕ್ಷವನ್ನು ನಕಲಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. | “ಪ್ರಮೋದ್ ಸಾವಂತ್ ನಮ್ಮನ್ನು ನಕಲು ಮಾಡುತ್ತಿದ್ದಾರೆ ಎಂದು ನಾನು ಹೇಳಬಯಸುತ್ತೇನೆ, ನಾವು ವಿದ್ಯುತ್ ಉಚಿತ ನೀಡುತ್ತೇವೆ ಎಂದು ನಾನು ಹೇಳಿದಾಗ ಅವರು ನೀರು ಉಚಿತವಾಗಿ ನೀಡಿದರು, ನಾವು ಉದ್ಯೋಗ ಭತ್ಯೆ ನೀಡುತ್ತೇವೆ ಎಂದು ಹೇಳಿದಾಗ ಅವರು ಸುಮಾರು 10,000 ಉದ್ಯೋಗಗಳನ್ನು ಘೋಷಿಸಿದರು. ನಾನು ತೀರ್ಥಯಾತ್ರೆಗಳ ಬಗ್ಗೆ ಮಾತನಾಡುವಾಗ ಅವರು ತಮ್ಮ ಯೋಜನೆ ಘೋಷಣೆ ಮಾಡಿದರು ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿ ಮುಖ್ಯಮಂತ್ರಿಗಳು ತಮ್ಮ ಭೇಟಿಯ ಸಮಯದಲ್ಲಿ, ಭಂಡಾರಿ ಸಮುದಾಯದ ಸದಸ್ಯರನ್ನು ಭೇಟಿ ಮಾಡಿದರು.ಅದೇ ವೇಳೆ ಕಾರ್ಮಿಕ ಸಂಘಟನೆಯ ಮತ್ತು ಗಣಿ ಉದ್ಯಮಿ ನಾಯಕ ಪುತಿ ಗಾಂವ್ಕರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು.

ಇದನ್ನೂ ಓದಿ: ಕೊವಿಡ್ ಲಸಿಕೆ ವಿತರಣೆ, ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ನಿರ್ಧಾರವನ್ನು ಶ್ಲಾಘಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ