AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಸರ್ಕಾರ ವಿತರಿಸುವ ಕೊರೊನಾ ಲಸಿಕೆಯನ್ನು ನಾನಂತೂ ಪಡೆಯುವುದಿಲ್ಲ: ಅಖಿಲೇಶ್ ಯಾದವ್

ಕೊರೊನಾ ಲಸಿಕೆ ಇದೀಗ ರಾಜಕೀಯ ಕೆಸರೆರೆಚಾಟಗಳಿಗೆ ಕಾರಣವಾಗುತ್ತಿದೆ. ಬಿಜೆಪಿಯ ಮೇಲೆ ನಂಬಿಕೆಯಿಲ್ಲದ ಕಾರಣ ಕೊರೊನಾ ಲಸಿಕೆಯನ್ನು ಸದ್ಯ ಪಡೆಯುವುದಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

BJP ಸರ್ಕಾರ ವಿತರಿಸುವ ಕೊರೊನಾ ಲಸಿಕೆಯನ್ನು ನಾನಂತೂ ಪಡೆಯುವುದಿಲ್ಲ: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
guruganesh bhat
| Edited By: |

Updated on:Jan 02, 2021 | 4:02 PM

Share

ಲಖನೌ: ನಾನಂತೂ ಈಗ ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ. ಬಿಜೆಪಿ ಲಸಿಕೆಯನ್ನು ನಂಬುವುದಾದರೂ ಹೇಗೆ ಎಂದು ಕೇಂದ್ರ ಸರ್ಕಾರದ ಕೊರೊನಾ ಲಸಿಕೆ ವಿತರಣೆ ಯೋಜನೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯ ಮಾಡಿದ್ದಾರೆ.

ನನಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿತರಿಸಲಿರುವ ಕೊರೊನಾ ಲಸಿಕೆಯ ಮೇಲೆ ವಿಶ್ವಾಸವಿಲ್ಲ. ಹೀಗಾಗಿ, ಸರ್ಕಾರ ಲಸಿಕೆ ವಿತರಿಸಿದರೂ ಸಹ ನಾನು ಈಗಲೇ ಕೊರೊನಾ ಲಸಿಕೆ ಪಡೆಯುವುದಿಲ್ಲ ಎಂದಿರುವ ಅವರು, ಒಂದು ವೇಳೆ ನಮ್ಮ ಪಕ್ಷ ಸರ್ಕಾರ ರಚಿಸಿದರೆ ಎಲ್ಲರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಬೆಳಗ್ಗೆಯಷ್ಟೇ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಕೊರೊನಾ ಲಸಿಕೆಯನ್ನು ದೇಶದ ಎಲ್ಲರಿಗೂ ಉಚಿತವಾಗಿ ವಿತರಿಸಲಾಗುವುದೆಂದು ಹೇಳಿಕೆ ನೀಡಿದ್ದರು. ಆದರೆ ತಮ್ಮ ಹೇಳಿಕೆಯನ್ನು ಟ್ವಿಟ್ಟರ್​ನಲ್ಲಿ ಹಂಚಿ ಸ್ಪಷ್ಟನೆ ನೀಡಿದ್ದ ಅವರು, ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು 2 ಕೋಟಿ ಕೊರೊನಾ ವಾರಿಯರ್​ಗಳಿಗೆ ಮಾತ್ರ ಉಚಿತ ಲಸಿಕೆ ನೀಡಲಾಗುವುದು. ಉಚಿತ ಲಸಿಕೆ ಪಡೆಯಲಿರುವ ಉಳಿದ 27 ಕೋಟಿ ಜನರನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದಿದ್ದಾರೆ. ಒಮ್ಮೆ ಎಲ್ಲ ದೇಶವಾಸಿಗಳಿಗೂ ಉಚಿತ ಲಸಿಕೆ ಒದಗಿಸುವ ಹೇಳಿಕೆ ನೀಡಿ, ನಂತರ 30 ಕೋಟಿ ಜನರಿಗೆ ಒದಗಿಸುತ್ತೇವೆ ಎಂಬ ಕೇಂದ್ರ ಸಚಿವರ ದ್ವಂದ್ವದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಈ ತಿರುಗೇಟು ನೀಡಿದ್ದಾರೆ.

ಇಂದು ನಡೆಯುತ್ತಿರೋದು ತಾಲೀಮು ಪ್ರಕ್ರಿಯೆ.. ಕೊರೊನಾ ಲಸಿಕೆ ವಿತರಣೆ ಅಲ್ಲ.. ಅಲ್ಲ.. ಅಲ್ಲ

Published On - 3:54 pm, Sat, 2 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್