Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Assembly Elections 2021: ಬಿಜೆಪಿ ಕಾರ್ಯಕರ್ತನ ತಾಯಿ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಹಲ್ಲೆ ಆರೋಪ

West Bengal Assembly elections 2021: ಅವರು ನನ್ನ ಕುತ್ತಿಗೆ ಮತ್ತು ತಲೆಗೆ ಹೊಡೆದರು. ನನ್ನ ಮುಖಕ್ಕೂ ಗುದ್ದಿದರು. ನಂತರ, ಹೀಗೆ ಹೊಡೆದಿರುವುದನ್ನು ಯಾರಿಗೂ ಹೇಳಬೇಡ ಎಂದು ಹೆದರಿಸಿದರು. ನನ್ನ ಇಡೀ ದೇಹ ನೋವಿನಲ್ಲಿದೆ ಎಂದು ಹಲ್ಲೆಗೊಳಗಾದ ಉತ್ತರ 24 ಪರಗಣ ಪ್ರಾಂತ್ಯದ ಬಿಜೆಪಿ ಕಾರ್ಯಕರ್ತ ಗೋಪಾಲ್ ಮಜೂಮ್ದಾರ್ ಅವರ ತಾಯಿ ಶೋಲಾ ಮಜೂಮ್ದಾರ್ ಹೇಳಿಕೊಂಡಿದ್ದಾರೆ.

West Bengal Assembly Elections 2021: ಬಿಜೆಪಿ ಕಾರ್ಯಕರ್ತನ ತಾಯಿ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಹಲ್ಲೆ ಆರೋಪ
ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಗೋಪಾಲ್ ಮಜೂಮ್ದಾರ್ ಅವರ ತಾಯಿ ಶೋಲಾ ಮಜೂಮ್ದಾರ್ ಇಂದು ಮೃತಪಟ್ಟಿದ್ದಾರೆ.
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 01, 2021 | 5:06 PM

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಚುನಾವಣಾ ಕಣ ರಂಗೇರುತ್ತಿದೆ. ಈ ಮುಂಚಿನಿಂದಲೂ ಬಿಜೆಪಿ-ಟಿಎಂಸಿ ಪಕ್ಷಗಳ ನಡುವೆ ಪ್ರಬಲ ವಾಕ್​ಸಮರದ ಜತೆಗೆ ಹಿಂಸಾಚಾರವೂ ನಡೆಯುತ್ತಿದೆ. ಪಶ್ಚಿಮ ಬಂಗಾಳದ ವಿವಿದ ಸ್ಥಳಗಳಲ್ಲಿ ಪದೇ ಪದೇ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಸುದ್ದಿಗಳು ಹೊರಬೀಳುತ್ತಲೇ ಇವೆ. ಇದೀಗ ಬಿಜೆಪಿ ಕಾರ್ಯಕರ್ತರೋರ್ವರು ಟಿಎಂಸಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಟಿಎಂಸಿ ಪಕ್ಷಕ್ಕೆ ಸೇರಿದ ಗೂಂಡಾಗಳು ತಮ್ಮ ಮನೆಗೆ ನುಗ್ಗಿ ತಮ್ಮ ವೃದ್ಧ ತಾಯಿ ಮತ್ತು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಗೋಪಾಲ್ ಮಜೂಮ್ದಾರ್ ಆರೋಪಿಸಿದ್ದಾರೆ. ಅವರ ತಾಯಿ ಶೋಲಾ ಮಜೂಮ್ದಾರ್ ತಮ್ಮ ಮೇಲೆ ಹಲ್ಲೆ ನಡೆದ ಘಟನೆಯನ್ನು ವಿವರಿಸಿರುವ ವಿಡಿಯೋವನ್ನು ಪಶ್ಚಿಮ ಬಂಗಾಳದ ಬಿಜೆಪಿ ಘಟಕವು ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ.

‘ಅವರು ನನ್ನ ಕುತ್ತಿಗೆ ಮತ್ತು ತಲೆಗೆ ಹೊಡೆದರು. ನನ್ನ ಮುಖಕ್ಕೂ ಗುದ್ದಿದರು. ನಂತರ, ಹೀಗೆ ಹೊಡೆದಿರುವುದನ್ನು ಯಾರಿಗೂ ಹೇಳಬೇಡ ಎಂದು ಹೆದರಿಸಿದರು. ನನ್ನ ಇಡೀ ದೇಹ ನೋವಿನಲ್ಲಿದೆ’ ಎಂದು ಹಲ್ಲೆಗೊಳಗಾದ ಉತ್ತರ 24 ಪರಗಣ ಪ್ರಾಂತ್ಯದ ಬಿಜೆಪಿ ಕಾರ್ಯಕರ್ತ ಗೋಪಾಲ್ ಮಜೂಮ್ದಾರ್ ಅವರ ತಾಯಿ ಶೋಲಾ ಮಜೂಮ್ದಾರ್ ಹೇಳಿಕೊಂಡಿದ್ದಾರೆ.

‘ಶನಿವಾರ ಟಿಎಂಸಿ ಪಕ್ಷದ ಮೂವರು ಕಾರ್ಯಕರ್ತರು ನನ್ನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ’ ಎಂದು ಗೋಪಾಲ್ ಮಜೂಮ್ದಾರ್ ಎಎನ್​ಐಗೆ ತಿಳಿಸಿದ್ದಾರೆ. ಈ ಹಲ್ಲೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

ಬಿಜೆಪಿಯ ಈ ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ ನಾಯಕ ಡೆರೆಕ್ ಓಬ್ರಿಯನ್, ‘ಟಿಎಂಸಿಯ ಧನಾತ್ಮಕ ಪರಿಣಾಮಕಾರಿ ಕ್ಯಾಂಪೇನ್​ಗೆ ಹೆದರಿ ಬಿಜೆಪಿ ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಟಿಎಂಸಿ ವಿರುದ್ಧ ಆರೋಪಿಸಲು ಯಾವುದೇ ತಿರುಳು ಸಿಗದೇ ಬಿಜೆಪಿ ಇಂತಹ ಸುಳ್ಳು ಆರೋಪ ಮಾಡುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 294 ಸೀಟುಗಳಿರುವ ವಿಧಾನಸಭೆಗೆ ಮಾರ್ಚ್ 27ರಿಂದ ಏಪ್ರಿಲ್ 29ರವರೆಗೆ ಚುನಾವಣೆ ನಡೆಯಲಿದ್ದು ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಈ ಬಾರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ನಡುವೆ ಸ್ಪರ್ಧೆ ನಡೆಯಲಿದೆ. ಈ ಚುನಾವಣೆಯಲ್ಲಿ 200ಕ್ಕಿಂತಲೂ ಹೆಚ್ಚು ಸೀಟು ಗೆಲ್ಲಲು ಬಿಜೆಪಿ ಹವಣಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಟಿಎಂಸಿಯಿಂದ ಹಲವಾರು ಸದಸ್ಯರು ಬಿಜೆಪಿಗೆ ಸೇರಿರುವುದರಿಂದ ಮತ್ತು ಟಿಎಂಸಿ ನಾಯಕರ ಮೇಲೆ ಭ್ರಷ್ಟಾಚಾರ ಆರೋಪಗಳಿರುವುದರಿಂದ ಈ ಚುನಾವಣೆ ಟಿಎಂಸಿ ಪಾಲಿಗೆ ನಿರ್ಣಾಯಕವಾಗಲಿದೆ. ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಪೈಪೋಟಿ ನಡೆಸುತ್ತಿದ್ದವು. ಆದರೆ ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವಿನ ಸ್ಪರ್ಧೆ ಎಂದೇ ಪಶ್ಚಿಮ ಬಂಗಾಳ ಚುನಾವಣೆಯನ್ನು ಬಿಂಬಿಸಲಾಗುತ್ತದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಅಹಂಕಾರಕ್ಕೆ ಪಶ್ಚಿಮ ಬಂಗಾಳದ ಜನ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ: ಅಬ್ಬಾಸ್ ಸಿದ್ದಿಕಿ

West Bengal Election Date 2021: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ, ಮೇ 2ರಂದು ಫಲಿತಾಂಶ

ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ